ಬೀದರ್‌ | ಬಿಸಿಯೂಟ ವಿತರಣೆಯಲ್ಲಿ ಲೋಪ : ಪ್ರಭಾರಿ ಮುಖ್ಯಶಿಕ್ಷಕಿ ಅಮಾನತು

Date:

Advertisements

ಶಾಲಾ ಮಕ್ಕಳಿಗೆ ಬಿಸಿಯೂಟ, ಮೊಟ್ಟೆಯನ್ನು ಸಮರ್ಪಕವಾಗಿ ವಿತರಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಕಮಲನಗರ ತಾಲ್ಲೂಕಿನ ದಾಬಕಾ(ಸಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುನಂದಾ ಕೊಂಗೆ ಅವರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ (ಆಡಳಿತ) ಎಸ್.ಜಿ ಸುರೇಶ ಆದೇಶಿಸಿದ್ದಾರೆ.

ಔರಾದ್‌ (ಬಿ) ತಾಲ್ಲೂಕು ಹಿರಿಯ ಸಿವಿಲ್‌ ನ್ಯಾಯಾಧೀಶರು ದಾಬಕಾ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿದಾಗ ʼಶಾಲೆಯಲ್ಲಿ ಕುಡಿಯುವ ನೀರು, ಶೌಚಾಲಯ ಅವ್ಯವಸ್ಥೆ ಸೇರಿದಂತೆ ಬಿಸಿಯೂಟ ಸರಿಯಾಗಿ ವಿತರಣೆಯಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ನ್ಯಾಯಾಧೀಶರಿಗೆ ತಿಳಿಸಿದರು. ಶಾಲೆಯ ಅವ್ಯವಸ್ಥೆ ಕಂಡು ನ್ಯಾಯಾಧೀಶರು ಶಾಲೆಯ ಮುಖ್ಯಗುರು ಹಾಗೂ ಅಡುಗೆ ಸಿಬ್ಬಂದಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದರು.

ಈ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಆಧರಿಸಿ ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತ್ರತ್ವದ ತಂಡ ಸೆ.17 ರಂದು ಶಾಲೆಗೆ ಭೇಟಿ ನೀಡಿತು, ʼ200 ಮಕ್ಕಳಿಗೆ ಅರ್ಧ ಕೆ.ಜಿ. ಟಮಾಟೋ ಬಳಕೆ ಮಾಡಿರುವುದು ಮತ್ತು ವಿದ್ಯಾರ್ಥಿಗಳು ಊಟ ಮಾಡಲು ಮನೆಯಿಂದಲೇ ತಟ್ಟೆ ಮತ್ತು ಲೋಟ ತರುವುದು, ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಇರುವುದು, ಬಿಸಿ ಊಟದಲ್ಲಿ ಹುಳುಗಳು ಬಂದರೆ ಅದನ್ನು ತೆಗೆದು ಊಟ ಮಾಡಲು ಮುಖ್ಯ ಶಿಕ್ಷಕರು ಮಕ್ಕಳಿಗೆ ತಿಳಿಸಿರುವುದುʼ ಕಂಡು ಬಂದಿದೆ.

Advertisements

ʼಒಂದೂವರೆ ತಿಂಗಳಿನಿಂದ ಮಕ್ಕಳಿಗೆ ಸರಿಯಾಗಿ ಮೊಟ್ಟೆ ನೀಡಿರುವುದಿಲ್ಲ. ಆಹಾರ ಧಾನ್ಯಗಳು ಹಾಗೂ ಹಾಲಿನ ಪುಡಿಯನ್ನು ಮುಖ್ಯ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಯವರು ಮನೆಗೆ ತೆಗೆದುಕೊಂಡು ಹೋಗುವುದು, ಶಾಲೆಯಲ್ಲಿ ಶೌಚಾಲಯದ ಕಟ್ಟಡವಿದ್ದರೂ ನೀರಿನ ಸೌಲಭ್ಯವಿಲ್ಲದೇ ಗಂಡು ಮಕ್ಕಳು ಬಯಲಿಗೆ ಹಾಗೂ ಹೆಣ್ಣು ಮಕ್ಕಳು ಮನೆ ಅಥವಾ ಪ್ರೌಢ ಶಾಲೆಯ ಶೌಚಾಲಯ ಬಳಸುತ್ತಿರುವ ಆರೋಪಗಳನ್ನು ಪ್ರಭಾರಿ ಮುಖ್ಯಶಿಕ್ಷಕಿ ಒಪ್ಪಿಕೊಂಡಿದ್ದಾರೆʼ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಧಾರಾಕಾರ ಮಳೆ : ಮನೆಗೆ ನುಗ್ಗಿದ ನೀರು, ಸ್ಥಳಕ್ಕೆ ಧಾವಿಸಿದ ತಹಸೀಲ್ದಾರ್

ಪ್ರಭಾರಿ ಮುಖ್ಯಶಿಕ್ಷಕಿ ಸುನಂದಾ ಕೊಂಗೆ ಅವರು ವಿದ್ಯಾರ್ಥಿಗಳಿಗೆ ಹೊಡೆಯುವುದು, ಮಹತ್ವಕಾಂಕ್ಷಿ ಯೋಜನೆಯಾದ ಮಧ್ಯಾಹ್ನ ಬಿಸಿಯೂಟ ಮಕ್ಕಳಿಗೆ ಒದಗಿಸುವಲ್ಲಿ ವಿಫಲರಾಗಿ ಕರ್ತವ್ಯದಲ್ಲಿ ಲೋಪ, ಬೇಜವಾಬ್ದಾರಿ‌ ಹಾಗೂ ದುರ್ನಡತೆ ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಔರಾದ್ ಬಿಇಒ ಅವರು ನೀಡಿದ ಜಂಟಿ ಸಮೀಕ್ಷೆ ವರದಿ ಆಧರಿಸಿ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X