ದಕ್ಷಿಣ ಕನ್ನಡ | ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್‌ ಪಲ್ಟಿ; ಚಾಲಕ ದುರ್ಮರಣ

Date:

Advertisements

ರೋಗಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಚಾಲಕ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಬೆಳ್ತಂಗಡಿಯಿಂದ ಮಂಗಳೂರಿಗೆ ಆ್ಯಂಬುಲೆನ್ಸ್‌ನಲ್ಲಿ ರೋಗಿಯನ್ನು ಕರೆದೊಯ್ಯುತ್ತಿದ್ದರು. ಈ ವೇಳೆ, ಮಂಗಳೂರು ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ಆ್ಯಂಬುಲೆನ್ಸ್ ಪಲ್ಟಿಯಾಗಿದೆ. ಮೃತ ಚಾಲಕನನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ.

ಆ್ಯಂಬುಲೆನ್ಸ್‌ ಪಲ್ಟಿಯಾಗಿದ್ದರಿಂದ ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನೂ ಹಾಗೂ ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಶಬೀರ್ ಸಾವನ್ನಪ್ಪಿದ್ದಾರೆ.

Advertisements

ರೋಗಿಯ ಪರಿಸ್ಥಿತಿ ಬಗ್ಗೆ ಮಾಹಿತಿ ದೊರೆತಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಆ್ಯಂಬುಲೆನ್ಸ್ ಚಾಲಕ ಮೃತ ಶಬೀರ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಹಣ ಅಥವಾ ಇನ್ನಾವುದೇ ರೀತಿಯ ಸಹಾಯ ಮಾಡಿ ಸ್ಪಂದಿಸಬೇಕು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ: ಎಸ್‌ಐಟಿಗೆ ಸಮಗ್ರ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು: ಸಮಾನ ಮನಸ್ಕ ಸಂಘಟನೆ

ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಹೆಣಗಳನ್ನು ನನ್ನಿಂದ ಬಲವಂತವಾಗಿ ಹೂತು ಹಾಕಿಸಲಾಗಿದೆ...

ಮಂಗಳೂರು | ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್...

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಯಾವ ವಾರ್ಡಿನಲ್ಲಿ ಯಾರಿಗೆ ಎಷ್ಟು ಮತ? ಇಲ್ಲಿದೆ ಸಂಪೂರ್ಣ ವಿವರ

ಕಡಬ ಪಟ್ಟಣ ಪಂಚಾಯತ್‌ನ 13 ವಾರ್ಡ್‌ಗಳಿಗೆ ಆ.17ರಂದು ಚುನಾವಣೆ ನಡೆದಿದ್ದು, ಇಂದು...

ಪುತ್ತೂರು | ಅತ್ಯಾಚಾರ, ವಂಚನೆ ಪ್ರಕರಣ: ಸಂತ್ರಸ್ತೆ ಮಗು, ಆರೋಪಿಯ ಡಿಎನ್ಎ ಪರೀಕ್ಷೆ

ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ನಿಂದ ಅತ್ಯಾಚಾರ, ವಂಚನೆಗೆ...

Download Eedina App Android / iOS

X