ಬಿಪಿಎಲ್-ಎಪಿಎಲ್ ಕಾರ್ಡ್‌ | ಹೊಸ ಅರ್ಜಿ ಸಲ್ಲಿಕೆಗೆ ತಾತ್ಕಾಲಿಕ ತಡೆ: ಆಹಾರ ಸಚಿವ ಕೆ ಎಚ್‌ ಮುನಿಯಪ್ಪ

Date:

Advertisements
  • ‘ಸರ್ವರ್‌ ಲಿಂಕ್‌ ಅನ್ನು ನಾವೇ ಓಪನ್ ಮಾಡಿಲ್ಲ’
  • ‘ಕಾರಣ ಏನು ಎಂಬುದನ್ನು ಸದ್ಯದಲ್ಲೇ ಹೇಳುತ್ತೇವೆ’

ಹೊಸದಾಗಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಸರ್ವರ್‌ ಲಿಂಕ್‌ ಅನ್ನು ನಾವೇ ಓಪನ್ ಮಾಡಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಸದ್ಯದಲ್ಲೇ ಹೇಳುತ್ತೇವೆ. ಇನ್ನೂ ಒಂದಿಷ್ಟು ದಿನ ಹೊಸ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್‌ ಮುನಿಯಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅನ್ನಭಾಗ್ಯ ಯೋಜನೆಯ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಕರೆದು ಮಾತನಾಡಿದರು.

“ಗ್ಯಾರಂಟಿ ಯೋಜನೆಗಳ ಘೋಷಣೆ ಬಳಿಕ ಎಪಿಎಲ್‌ ಮತ್ತು ಬಿಪಿಎಲ್‌ ಕಾರ್ಡ್‌ಗಳಿಗೆ ಬೇಡಿಕೆ ಹೆಚ್ಚಿತ್ತು. ಆದರೆ, ಇಲಾಖೆಯ ನಿರ್ಧಾರ ಹಲವರಿಗೆ ನಿರಾಸೆ ತಂದಿದೆ. ಜಿಲ್ಲಾ ಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ್ದೇವೆ. ಡಿಬಿಟಿ ವಿಷಯದಲ್ಲಿ ಕಳೆದ ತಿಂಗಳು ತಡವಾಯಿತು. ಈ ತಿಂಗಳ 25 ಅಥವಾ 26ರೊಳಗೆ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಹಣ ಸಂದಾಯವಾಗುತ್ತದೆ” ಎಂದರು.

Advertisements

“ಜೋಳ, ರಾಗಿ, ಅಕ್ಕಿ ಎಷ್ಟು ಪ್ರಮಾಣದಲ್ಲಿ ಬಳಕೆ ಮಾಡುತ್ತಾರೆ ಎನ್ನುವುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಇಲಾಖೆಯಲ್ಲಿ ಖಾಲಿಯಿರುವ 2,181 ಹುದ್ದೆ ಭರ್ತಿ ಮಾಡಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

ಅಕ್ಕಿ ಕೊಡಲು ಒಪ್ಪಿದ ರಾಜ್ಯಗಳು

“ಅನ್ನಭಾಗ್ಯ ಯೋಜನೆಗೆ ಕೊರತೆಯಾಗಿರುವ ಅಕ್ಕಿ ಪ್ರಮಾಣವನ್ನು ತೆಲಂಗಾಣ ಮತ್ತು ಆಂಧ್ರಪ್ರದೇಶ ಪೂರೈಸಲು ಮುಂದೆ ಬಂದಿವೆ. ಅಕ್ಕಿ ದರದ ಬಗ್ಗೆ ಮಾತುಕತೆ ನಡೆಯುತ್ತಿದೆ. ಈ ತಿಂಗಳ ಅಂತ್ಯದೊಳಗೆ ಮಾತುಕತೆ ಅಂತಿಮವಾಗಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್: ರಾಮಲಿಂಗಾರೆಡ್ಡಿ ಸ್ಪಷ್ಟನೆ

ಪತ್ರ ಬರೆದಿದ್ದು ನಿಜ

ವಿಧಾನ ಪರಿಷತ್‌ಗೆ ಸುಧಾಮ್‌ ದಾಸ್‌ ನಾಮ ನಿರ್ದೇಶನ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, “ಸುಧಾಮ್‌ ದಾಸ್‌ ನಾಮ ನಿರ್ದೇಶನಕ್ಕೆ ವಿರೋಧಿಸಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿರುವುದು ನಿಜ. ಸುಧಾಮ್ ದಾಸ್ ಮೂರು ತಿಂಗಳ ಹಿಂದಿನ ತನಕ ಸರ್ಕಾರಿ ಅಧಿಕಾರಿ ಆಗಿದ್ದರು. ಅವರು ಈಗಷ್ಟೇ ಪಕ್ಷಕ್ಕೆ ಬಂದಿದ್ದಾರೆ. ಇನ್ನೊಂದಿಷ್ಟು ದಿನಗಳ ಕಾಲ ಸುಧಾಮ್ ದಾಸ್ ಪಕ್ಷಕ್ಕೆ ಕೆಲಸ ಮಾಡಲಿ” ಎಂದು ಹೇಳಿದರು

“30 ವರ್ಷಗಳ ಕಾಲದಿಂದ ಕೆಲಸ ಮಾಡಿದ ದಲಿತ ನಾಯಕರಿಗೆ ಅವಕಾಶ ನೀಡಬೇಕು ಎಂಬುದಷ್ಟೇ ನಮ್ಮ ಸಲಹೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಯಲ್ಲಿ ಪತ್ರ ಬರೆದಿರುವುದು ಸತ್ಯ. ಹೈಕಮಾಂಡ್ ನಾಯಕರು ನಿರ್ಧಾರ ಮಾಡುತ್ತಾರೆ. ಹೈಕಮಾಂಡ್ ನಾಯಕರ ನಿರ್ಧಾರ ಮುಖ್ಯ” ಎಂದು ಕೆ ಎಚ್‌ ಮುನಿಯಪ್ಪ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X