ಐಪಿಎಲ್‌ 2023 | ಇಂದು ಮೊದಲ ಡಬಲ್‌ ಹೆಡ್ಡರ್‌, ನೂತನ ನಾಯಕತ್ವಕ್ಕೆ ಮೊದಲ ಸವಾಲು

Date:

Advertisements
  • ಕೋಲ್ಕತ್ತಾ ಮತ್ತು ಪಂಜಾಬ್ ನಡುವೆ ಮೊದಲ ಪಂದ್ಯ
  • ಲಖನೌ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಎರಡನೇ ಪಂದ್ಯ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 16ನೇ ಆವೃತ್ತಿಯಲ್ಲಿ ಇಂದು (ಏಪ್ರಿಲ್‌ 1) ಎರಡು ಪಂದ್ಯಗಳು ನಡೆಯಲಿವೆ. ಮಧ್ಯಾಹ್ನ 3.30ಕ್ಕೆ ಮೊಹಾಲಿಯಲ್ಲಿ ನಡೆಯುವ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡಕ್ಕೆ ಪಂಜಾಬ್‌ ಕಿಂಗ್ಸ್‌ ಸವಾಲು ಎದುರಾಗಲಿದೆ.

ಲಖನೌನ ಏಕನಾ ಸ್ಟೇಡಿಯಂನಲ್ಲಿ ನಡೆಯುವ ಎರಡನೇ ಪಂದ್ಯದಲ್ಲಿ ಕೆ ಎಲ್ ರಾಹುಲ್‌ ಸಾರಥ್ಯದ ಲಖನೌ ಸೂಪರ್‌ ಜಯಂಟ್ಸ್‌ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಏಕನಾ ಸ್ಟೇಡಿಯಂನಲ್ಲಿ ಆತಿಥೇಯ ತಂಡ ಮೊದಲ ಬಾರಿಗೆ ಕಣಕ್ಕಿಳಿಯಲಿದೆ. ಈ ಮೈದಾನದಲ್ಲಿ ಇದುವರೆಗೂ 6 ಅಂತಾರಾಷ್ಟ್ರೀಯ ಟಿ20 ಪಂದ್ಯಗಳು ನಡೆದಿದ್ದು, 5ರಲ್ಲೂ ಮೊದಲು ಬ್ಯಾಟ್‌ ಮಾಡಿದ ತಂಡ ಗೆಲುವು ಕಂಡಿದೆ. ಹೀಗಾಗಿ ಇಂದಿನ ಐಪಿಎಲ್ ಪಂದ್ಯದಲ್ಲಿ ಟಾಸ್‌ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಶುಭಮನ್‌ ಅಮೋಘ ಆಟ; ಗುಜರಾತ್‌ಗೆ ರೋಚಕ ಜಯ

Advertisements

ಪ್ರಮುಖ ಆಟಗಾರರು ಗೈರು

ಕೋಲ್ಕತ್ತಾ ನೈಟ್‌ ರೈಡರ್ಸ್‌ ಮತ್ತು ಪಂಜಾಬ್‌ ಕಿಂಗ್ಸ್‌ ತಂಡಗಳ ಪ್ರಮುಖ ಆಟಗಾರರು ಶನಿವಾರದ ಪಂದ್ಯಕ್ಕೆ ಗೈರಾಗಲಿದ್ದಾರೆ. ನಾಯಕ ಶ್ರೇಯಸ್‌ ಅಯ್ಯರ್‌ ಗಾಯದ ಕಾರಣ ಸಂಪೂರ್ಣ ಐಪಿಎಲ್ ಟೂರ್ನಿಯಿಂದಲೇ ಹೊರನಡೆದಿದ್ದು, ಕೆಕೆಆರ್‌ ತಂಡವನ್ನು ನಿತೀಶ್‌ ರಾಣಾ ಮುನ್ನಡೆಸಲಿದ್ದಾರೆ. ಅನುಮತಿ ಪತ್ರ ದೊರೆಯದ ಕಾರಣ ಶಕೀಬ್‌ ಅಲ್‌ ಹಸನ್‌ ಇಂದಿನ ಪಂದ್ಯಕ್ಕೆ ಗೈರಾಗಲಿದ್ದಾರೆ.

ಪಂಜಾಬ್‌ ಐಪಿಎಲ್ ತಂಡಕ್ಕೆ ಹಿರಿಯ ಆಟಗಾರ ಶಿಖರ್‌ ಧವನ್‌ ನೂತನ ನಾಯಕನನ್ನಾಗಿ ನೇಮಕಗೊಂಡಿದ್ದಾರೆ. ಜಾನಿ ಬೇರ್‌ಸ್ಟೋ, ಕಗಿಸೋ ರಬಾಡಾ ಅನುಪಸ್ಥಿತಿಯಲ್ಲಿ ದುಬಾರಿ ಆಟಗಾರ ಸ್ಯಾಮ್‌ ಕರನ್‌ ಮೇಲೆ ಕಿಂಗ್ಸ್‌ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದೆ.  

ಡೆಲ್ಲಿಗೆ ಡೇವಿಡ್‌ ನಾಯಕ

ಟೀಮ್‌ ಇಂಡಿಯಾದಲ್ಲಿ ಖಾಯಂ ಸ್ಥಾನ ಗಿಟ್ಟಿಸಲು ಕೆ ಎಲ್‌ ರಾಹುಲ್‌ ಅವರಿಗೆ ಈ ಬಾರಿಯ ಐಪಿಎಲ್‌ ಅತ್ಯಂತ ಮಹತ್ವಾದ್ದಾಗಿದೆ. ರಿಷಭ್‌ ಪಂತ್‌ ಅನುಪಸ್ಥಿತಿಯಲ್ಲಿ ಡೇವಿಡ್‌ ವಾರ್ನರ್‌ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮುನ್ನಡೆಸಲಿದ್ದಾರೆ. ಬಲಿಷ್ಠ ಆಟಗಾರರನ್ನು ಹೊಂದಿರುವ ಡೆಲ್ಲಿ ಮೇಲ್ನೋಟಕ್ಕೆ ಲಖನೌ ವಿರುದ್ಧ ಗೆಲ್ಲುವ ಫೆವರಿಟ್‌ ತಂಡವಾಗಿ ಕಣಕ್ಕಿಳಿಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X