ಬಿಪಿಎಲ್ ಕಾರ್ಡ್‌ ರದ್ದತಿ ಕ್ರಮ ಹಿಂಪಡೆಯುವಂತೆ ಬಡ, ಅಸಂಘಟಿತ, ಕಾರ್ಮಿಕ ಸಂಘಟನೆಗಳ ಒತ್ತಾಯ

Date:

Advertisements

ಕರ್ನಾಟಕ ಸರ್ಕಾರ ಬಿಪಿಎಲ್ ಪಡಿತರ ಚೀಟಿಗಳನ್ನು ಅನರ್ಹರೆಂದು ಗುರುತಿಸಿ ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಲು ಕೈಗೊಂಡಿರುವ ಕ್ರಮವನ್ನು ತಕ್ಷಣವೇ ಹಿಂಪಡೆಯಬೇಕೆಂದು ನಗರದ ನೂರಕ್ಕೂ ಹೆಚ್ಚು ಸ್ಲಂ ಸಮುದಾಯ,ದುಡಿಯುವ, ಕಾರ್ಮಿಕ, ಅಸಂಘಟಿತ ಕಾರ್ಮಿಕರು ಒತ್ತಾಯಿಸಿದ್ದಾರೆ.

ಇಂದು ಬೆಂಗಳೂರಿನ ನೂರಕ್ಕೂ ಹೆಚ್ಚು ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಮಂಡಿಸಿದರು. ನಂತರ ಆಯುಕ್ತರಾದ ವಿ.ವಿ. ಜ್ಯೋತ್ಸ್ನಾ ಅವರನ್ನು ಭೇಟಿಯಾಗಿ ತಮಗಾಗುತ್ತಿರುವ ನೋವನ್ನು ವಿವರಿಸಿದರು.

ಇತ್ತೀಚೆಗೆ ನಗರದ ಅನೇಕ ನ್ಯಾಯಬೆಲೆ ಅಂಗಡಿಗಳ ಹೊರಗಡೆ ಪ್ರದರ್ಶಿಸಲಾಗಿರುವ ಪಡಿತರ ಪಟ್ಟಿ ಹಾಗೂ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಕಾರ್ಡ್‌ಗಳಾಗಿ ಮಾರ್ಪಡಿಸುವ ಕುರಿತು ಅಂಗಡಿದಾರರಿಂದ ನೀಡಲಾಗುತ್ತಿರುವ ಮಾಹಿತಿಯಿಂದ ಬಡಜನರಲ್ಲಿ ಆತಂಕ ಉಂಟಾಗಿದೆ. ಮಾಸಿಕ ಆದಾಯವು ಹತ್ತು ಸಾವಿರ ರೂ.ಗಿಂತ ಹೆಚ್ಚು ಇರುವವರು ಸೇರಿದಂತೆ ಅನೇಕ ಕಾರಣಗಳಿಂದ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ಸಂಘಟನೆಯ ಸದಸ್ಯರು ದೂರಿದರು.

ಸಂಘಟನೆಯ ಅನೇಕರು ತಮ್ಮ ವೈಯಕ್ತಿಕ ಉದಾಹರಣೆಗಳನ್ನು ಆಯುಕ್ತರ ಗಮನಕ್ಕೆ ತಂದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮುನಿಯಮ್ಮ ಅವರಿಗೆ ಇಂದಿಗೂ ಬಿಪಿಎಲ್ ಕಾರ್ಡ್ ಸಿಗದಿರುವುದು, ಶಿಫ್ಟ್‌ಗಳಲ್ಲಿ ಅಸ್ಥಿರ ಆದಾಯ ಹೊಂದಿರುವ ಕಾರ್ಮಿಕರ ಕಾರ್ಡ್‌ಗಳನ್ನು ಕೇವಲ ಬ್ಯಾಂಕ್‌ ದಾಖಲೆ ಅಥವಾ ಒಂದೇ ಬಾರಿ ಟ್ಯಾಕ್ಸ್ ರಿಟರ್ನ್ ಸಲ್ಲಿಸಿರುವ ಕಾರಣದಿಂದ ಎಪಿಎಲ್‌ಗೆ ಪರಿವರ್ತಿಸುವುದು, ವಯೋವೃದ್ಧರು ಬಯೋಮೆಟ್ರಿಕ್ ಸಮಸ್ಯೆಯಿಂದಾಗಿ ಪಡಿತರ ಪಡೆಯದಿದ್ದರೆ ಅವರಿಗೆ ಅನರ್ಹತೆಯನ್ನು ವಿಧಿಸುವುದು ಮುಂತಾದ ಅನೇಕ ಅನ್ಯಾಯಗಳ ಬಗ್ಗೆ ಜನತೆ ಕಳವಳ ವ್ಯಕ್ತಪಡಿಸಿದರು. ಹೌಸ್‌ಕೀಪಿಂಗ್‌ ಸೇರಿದಂತೆ ಅನಿಯಮಿತ ಕೆಲಸಗಾರರು ಕೆಲವು ತಿಂಗಳು ಪಡಿತರ ಪಡೆಯದಿದ್ದರೆ ಅವರ ಕಾರ್ಡ್‌ಗಳನ್ನು ರದ್ದುಪಡಿಸಿರುವ ಬಗ್ಗೆ ಅಹವಾಲುಗಳನ್ನು ಸಲ್ಲಿಸಲಾಯಿತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಿನೆಮಾ ಟಿಕೆಟ್ ದರಗಳಿಗೆ ಸರ್ಕಾರಿ ಕಡಿವಾಣದ ಸಂಗತಿಯೇನು?

ಪ್ರತಿಭಟನಾಕಾರರ ಮಾತುಗಳನ್ನು ಆಲಿಸಿದ ಆಯುಕ್ತರಾದ ವಿ.ವಿ. ಜ್ಯೋತ್ಸ್ನಾ, ಪ್ರಸ್ತುತ ನಡೆಯುತ್ತಿರುವುದು ಕೇವಲ ಪರಿಶೀಲನೆ ಪ್ರಕ್ರಿಯೆಯಾಗಿದ್ದು, ಅರ್ಹ ಬಿಪಿಎಲ್ ಕಾರ್ಡ್‌ಗಳನ್ನು ತಕ್ಷಣವೇ ರದ್ದುಪಡಿಸಲಾಗುವುದಿಲ್ಲವೆಂದು ಭರವಸೆ ನೀಡಿದರು. ಜೊತೆಗೆ, ಅನರ್ಹ ಪಟ್ಟಿಗೆ ಸೇರಿಸಿರುವ ಕುಟುಂಬಗಳು ಇಲಾಖೆಗೆ ದೂರು ಸಲ್ಲಿಸಬಹುದೆಂದು ತಿಳಿಸಿದರು. ಈ ಸಲಹೆಯಂತೆ 25ಕ್ಕೂ ಹೆಚ್ಚು ಮಂದಿ ತಕ್ಷಣವೇ ತಮ್ಮ ಅಹವಾಲುಗಳನ್ನು ಇಲಾಖೆಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಗಳು ಸರ್ಕಾರಕ್ಕೆ ಹಲವು ಬೇಡಿಕೆಗಳನ್ನು ಮಂಡಿಸಿದವು. ಜನರಿಗೆ ಪೂರ್ವ ಮಾಹಿತಿ ನೀಡದೆ, ಸೂಕ್ತ ಸಮಯಾವಕಾಶವಿಲ್ಲದೆ ಬಿಪಿಎಲ್ ಕಾರ್ಡ್‌ ರದ್ದತಿ ಆದೇಶ ಹೊರಡಿಸಿರುವ ಕ್ರಮವನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು; ಬಿಪಿಎಲ್ ಕಾರ್ಡ್‌ ಅನರ್ಹ ಪಟ್ಟಿಯ ಪರಿಶೀಲನೆ ದಿನಾಂಕವನ್ನು ತಕ್ಷಣವೇ ರದ್ದುಪಡಿಸಬೇಕು; ಸರ್ಕಾರ ನಿಗದಿಪಡಿಸಿರುವ ಆದಾಯ ಮಿತಿ ಹಾಗೂ ಇತರೆ ಮಾನದಂಡಗಳ ಬಗ್ಗೆ ಸಾರ್ವಜನಿಕರು ಮತ್ತು ಸಾಮಾಜಿಕ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕು; ಸ್ಥಳೀಯ ಮಟ್ಟದಲ್ಲಿ ಅರ್ಹ ಬಿಪಿಎಲ್ ಕಾರ್ಡ್‌ಗಳನ್ನು ಪರಿಶೀಲಿಸಬೇಕು; ಹಾಗೂ 2017ರಿಂದ ಬಿಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿ ನಿರಾಕರಿಸಲ್ಪಟ್ಟ ಬಡಕುಟುಂಬಗಳ ಅರ್ಜಿಗಳನ್ನು ಪುನರ್ ಪರಿಶೀಲಿಸಿ ನ್ಯಾಯಯುತ ಆದಾಯ ಮಿತಿಯನ್ನು ನಿಗದಿಪಡಿಸಿ ಅವರಿಗೂ ಸಹ ಬಿಪಿಎಲ್ ಕಾರ್ಡ್ ನೀಡಬೇಕು ಎಂದು ಒತ್ತಾಯಿಸಿದರು.

ಬಡಜನರ ಬದುಕು, ಆಹಾರ ಭದ್ರತೆ ಮತ್ತು ಸಂವಿಧಾನಾತ್ಮಕ ಹಕ್ಕುಗಳನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಸಂಘಟನೆಗಳ ಸದಸ್ಯರು ಸರ್ಕಾರಕ್ಕೆ ಮನವರಿಕೆ ಮಾಡಿದವು. ಹಾಗೆಯೇ ಬಿಪಿಎಲ್ ಕಾರ್ಡ್‌ಗಳನ್ನು ಅನ್ಯಾಯವಾಗಿ ರದ್ದುಪಡಿಸುವ ಕ್ರಮ ಮುಂದುವರಿದರೆ ವ್ಯಾಪಕ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ವತಿಯಿಂದ ಅ.2ರಿಂದ ರಾಜ್ಯಾದ್ಯಂತ ʼಅರಿವು-ಮಾನವೀಯತೆʼ ಜಾಗೃತಿ ಅಭಿಯಾನ

ಕರ್ನಾಟಕ ರಾಜ್ಯ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ವತಿಯಿಂದ ಅ.2ರಿಂದ ರಾಜ್ಯಾದ್ಯಂತ...

ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಬೆಂಬಲಕ್ಕೆ ಬೃಹತ್ ಪ್ರತಿಭಟನೆ: ನರಮೇಧ ನಿಲ್ಲಿಸಿ ಎಂದು ಆಗ್ರಹ

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ದೊಡ್ಡ ಸಂಖ್ಯೆಯ ಜನರು ಸೇರಿ, ಗಾಜಾದಲ್ಲಿ...

ವಿಪ್ರೋ ಕ್ಯಾಂಪಸ್‌ ಮೂಲಕ ವಾಹನ ಸಂಚಾರಕ್ಕೆ ಅವಕಾಶ; ಸಿಎಂ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ (ಒಆರ್‌ಆರ್‌) ಉಂಟಾಗುವ ತೀವ್ರ ಸಂಚಾರ ದಟ್ಟಣೆಯನ್ನು...

ಬೆಂಗಳೂರು | ಆರ್ಥಿಕ ಅಭಿವೃದ್ಧಿಗೆ ಸಹಕಾರ; ಕರ್ನಾಟಕ-ನ್ಯೂಜೆರ್ಸಿ ಒಪ್ಪಂದ: ಪ್ರಿಯಾಂಕ್‌ ಖರ್ಗೆ

ತಂತ್ರಜ್ಞಾನ, ನಾವೀನ್ಯತೆ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರವನ್ನು ಬಲಪಡಿಸಲು ಕರ್ನಾಟಕ ಸರ್ಕಾರ...

Download Eedina App Android / iOS

X