ಎಸ್‌ ಎಲ್ ಭೈರಪ್ಪ ಪಾರ್ಥಿವ ಶರೀರಕ್ಕೆ ಸಿಎಂ, ಡಿಸಿಎಂ ಅಂತಿಮ ನಮನ; ಸ್ಮಾರಕ ನಿರ್ಮಾಣ ಘೋಷಣೆ

Date:

Advertisements

ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸಚಿವ ಸಚಿವರಾದ ಶಿವರಾಜ್ ತಂಗಡಗಿ, ಮಧು ಬಂಗಾರಪ್ಪ ಸೇರಿದಂತೆ ವಿವಿಧ ಗಣ್ಯರು ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಗುರುವಾರ ಅಂತಿಮ ನಮನ ಸಲ್ಲಿಸಿದರು.

ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, “ಭೈರಪ್ಪ ಅವರು ಹೆಚ್ಚಿನ ಸಮಯ ಮೈಸೂರಿನಲ್ಲೇ ಇದ್ದವರು. ಹೀಗಾಗಿ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲಾಗುವುದು” ಎಂದು ಸಿದ್ದರಾಮಯ್ಯ ಘೋಷಿಸಿದರು.

“ಅಪಾರ ಓದುಗರನ್ನು ಸಂಪಾದಿಸಿದವರು ಭೈರಪ್ಪನವರು. ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರದ್ದು ಜಗತ್ ಪ್ರಸಿದ್ಧ ಆಗಿರುವಂತಹ ಕಾದಂಬರಿಗಳು. ಅವರ, ಕೆಲವು ಕಾದಂಬರಿಗಳನ್ನು ನಾನು ಓದಿದ್ದೇನೆ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ” ಎಂದು ಸಂತಾಪ ಸೂಚಿಸಿದರು.

“ಭೈರಪ್ಪ ಅವರ ಕಾದಂಬರಿಗಳು ಅನೇಕ ಭಾಷೆಗಳಿಗೆ ಅನುನಾದಗೊಂಡಿವೆ. ಬಹುಶಃ ಕನ್ನಡದ ಇತರ ಯಾವ ಸಾಹಿತಿಯ ಕೃತಿಗಳೂ ಅಷ್ಟೊಂದು ಸಂಖ್ಯೆಯಲ್ಲಿ ಬೇರೆ ಭಾಷೆಗಳಿಗೆ ಅನುವಾದಗೊಂಡಿಲ್ಲ. ಸರಸ್ವತಿ ಸಮ್ಮಾನ್ ಪುರಸ್ಕೃತ ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ಕೂಡ ಸಿಗಬೇಕಿತ್ತು. ಅವರು ಅದಕ್ಕೆ ಅರ್ಹರಾಗಿದ್ದರು” ಎಂದರು.

“ಭೈರಪ್ಪ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸಾಹಿತಿ. ವಿಶ್ವದ ಹಲವು ಭಾಷೆಗಳಿಗೆ ಅವರ ಕಾದಂಬರಿ ಅನುವಾದಗೊಂಡಿವೆ. ಅವರ ಕಾದಂಬರಿಗಳು ಸಿನೆಮಾಗಳು ಕೂಡ ಆಗಿವೆ. ಸಂಸ್ಕೃತಿ ಎತ್ತಿ ಹಿಡಿದು ಸಮಾಜಕ್ಕೆ ಮಾರ್ಗದರ್ಶನ ಮಾಡಿದವರು ಭೈರಪ್ಪ” ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಇದಕ್ಕೂ ಮುನ್ನ ಅಂತಿಮ ದರ್ಶನ ಪಡೆದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೈರಪ್ಪ ಅವರ ಸ್ಮಾರಕ ನಿರ್ಮಿಸಬೇಕೆಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

Download Eedina App Android / iOS

X