ಮಹಾರಾಷ್ಟ್ರ | ದೇವಸ್ಥಾನದ ಆವರಣಕ್ಕೆ ಮಾಂಸ ಎಸೆದ ಪ್ರಕರಣ; ಆರೋಪಿ ನಂದಕಿಶೋರ್ ಬಂಧನ

Date:

Advertisements

ಮಹಾರಾಷ್ಟ್ರದಲ್ಲಿ ದೇವಸ್ಥಾನದ ಆವರಣಕ್ಕೆ ಮಾಂಸ ಎಸೆದು, ಅಪವಿತ್ರಗೊಳಿಸಿದ ಆರೋಪದ ಮೇಲೆ ನಂದಕಿಶೋರ್ ವಡ್ಗಾಂವ್ಕರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಅನ್ವಾ ಗ್ರಾಮದಲ್ಲಿ ಸೆಪ್ಟೆಂಬರ್ 21ರಂದು ಘಟನೆ ನಡೆದಿದೆ. ಗ್ರಾಮದ ಹೇಮದ್ವಂತಿ ಮಹಾದೇವ್ ದೇವಾಲಯದ ಪಕ್ಕದಲ್ಲಿ ನಂದಕಿಶೋರ್ ಮನೆ ನಿರ್ಮಾಣ ಮಾಡಲು ಯೋಜಿಸಿದ್ದರು. ಆದರೆ, ಮನೆ ನಿರ್ಮಾಣಕ್ಕೆ ಅನುಮತಿ ನೀಡಲು ನಿರಾಕರಿಸಿದ ಕಾರಣಕ್ಕಾಗಿ ಕೋಪಗೊಂಡ ನಂದಕಿಶೋರ್, ದೇವಾಲಯದ ಆವರಣಕ್ಕೆ ಮಾಂಸ ಮತ್ತು ಮೂಳೆಗಳನ್ನು ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.

ದೇವಾಲಯದ ಸಿಬ್ಬಂದಿಗಳು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿರುವ ಪೊಲೀಸರು, ನಂದಕಿಶೋರ್ ಅವರನ್ನು ಬಂಧಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಜಿಎಸ್‌ಟಿ 2.0 | ವಸ್ತುಗಳ ಬೆಲೆಯೇ 50% ಕಡಿತ; ತಪ್ಪು ಲೆಕ್ಕ ಹೇಳಿ ಪೇಚಿಗೆ ಸಿಲುಕಿದ ಬಿಜೆಪಿ ಸಂಸದ

ಆದಾಗ್ಯೂ, ಕೆಲವು ಸುದ್ದಿವಾಹಿನಿಗಳು ಘಟನೆಯನ್ನು ಸಮಾಜದಲ್ಲಿ ಕೋಮುದ್ವೇಷ ಹರಡಲು ಬಳಸಿಕೊಂಡಿದ್ದವು. ದೇವಾಲಯದ ಆವರಣಕ್ಕೆ ಮುಸ್ಲಿಮರು ಮಾಂಸ ಎಸೆದಿದ್ದಾರೆ ಎಂದು ಸುದರ್ಶನ್‌ ನ್ಯೂಸ್ ಕೋಮುದ್ವೇಷದ ಸುಳ್ಳು ಸುದ್ದಿ ಪ್ರಕಟಿಸಿತ್ತು. ಕೋಮು ಭಾವನೆ ಕೆರಳಿಸಲು ಯತ್ನಿಸಿತ್ತು. ಆದರೆ, ಈ ಪ್ರಕರಣವು ಕೋಮು ಪಿತೂರಿಯಲ್ಲ, ವೈಯಕ್ತಿಕ ಕಾರಣದಿಂದ ನಡೆದ ಕೃತ್ಯವೆಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ...

ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ...

ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು...

Bihar SIR | ಬಿಜೆಪಿ-ಚುನಾವಣಾ ಆಯೋಗದ ಕುತಂತ್ರಕ್ಕೆ 47 ಲಕ್ಷ ಮತದಾರರು ಬಲಿ

ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ...

Download Eedina App Android / iOS

X