ಧರ್ಮಸ್ಥಳ | ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಏಳು ಅಸ್ಥಿಪಂಜರಗಳಲ್ಲಿ ಮತ್ತೊಂದರ ಗುರುತು ಪತ್ತೆ ಹಚ್ಚಿದ ಎಸ್‌ಐಟಿ

Date:

Advertisements

ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ‌.17 ಮತ್ತು 18 ರಂದು ಎಸ್.ಐ.ಟಿ ನಡೆಸಿದ ಕಾರ್ಯಾಚರಣೆ ವೇಳೆ ಪತ್ತೆಯಾದ ಏಳು ಅಸ್ಥಿಪಂಜರಗಳಲ್ಲಿ ಒಂದು ಅಸ್ಥಿಪಂಜರದ ಗುರುತನ್ನು 2ನೇ ದಿನದಲ್ಲಿ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಪತ್ತೆ ಹಚ್ಚಲಾಗಿತ್ತು. ಇದೀಗ ಮತ್ತೊಬ್ಬನ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಎಸ್.ಐ.ಟಿ ಪತ್ತೆ ಹಚ್ಚಿ ಕಚೇರಿಗೆ ಕರೆದು ಮಾಹಿತಿ ಕಲೆ ಹಾಕಿದೆ.

2-10-2013 ರಂದು ಬೆಂಗಳೂರಿನ ಬಾರಿನಲ್ಲಿ ಕೆಲಸಕ್ಕೆ ಮಾಡುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಬೋಜಪ್ಪ ಮತ್ತು ಚೆನ್ನಮ್ಮ ಎಂಬವರ ಪುತ್ರ ಆದಿಶೇಷ ನಾರಾಯಣ(27) ಎಂಬಾತ ಮನೆಬಿಟ್ಟು ನಾಪತ್ತೆಯಾಗಿದ್ದು, ಅಸ್ಥಿಪಂಜರದ ಸಮೀಪ ಎಸ್.ಐ.ಟಿ ತಂಡಕ್ಕೆ ಡ್ರೈವಿಂಗ್ ಲೈಸೆನ್ಸ್ ಕಾರ್ಡ್ ಸಿಕ್ಕಿದ್ದು ಅದರ ಆಧಾರದ ಮೇಲೆ ಆದಿಶೇಷನ ಅಕ್ಕಂದಿರಾದ ಲಕ್ಷ್ಮಿ, ಪದ್ಮ ಹಾಗೂ ಕುಟಂಬದ ಸದಸ್ಯರನ್ನು ಸೆ.25 ರಂದು ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕರೆಸಿದ್ದು ಕಚೇರಿಗೆ ಬಂದ ಇವರು ಡ್ರೈವಿಂಗ್ ಲೈಸೆನ್ಸ್ ತಮ್ಮನದ್ದು ಎಂದು ಗುರುತಿಸಿದ್ದಾರೆ.

ನಾಪತ್ತೆ ಬಗ್ಗೆ ಮಾಹಿತಿ‌ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಡಿ.ಎನ್.ಎ ಮಾಡಿಸುವುದಾಗಿಯೂ ಎಸ್.ಐ.ಟಿ ಅಧಿಕಾರಿಗಳು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಆದಿಶೇಷ ನಾರಾಯಣ ಪದೇ ಪದೇ ಮನೆ ಬಿಟ್ಟು ಹೋಗಿ ವಾಪಸ್ ಬರುತ್ತಿದ್ದ ಕಾರಣದಿಂದ ನಾಪತ್ತೆಯಾಗಿರುವ ಬಗ್ಗೆ ಕುಟುಂಬ ಸದಸ್ಯರು ಯಾರು ಕೂಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿಲ್ಲ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿರೋಧದ ನಡುವೆಯೂ ಕಾವೇರಿಗೆ ಕಾಂಗ್ರೆಸ್ಸಿಗರ ಮೊಂಡಾರತಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X