ಭಾಲ್ಕಿ | ಕರಡ್ಯಾಳದಲ್ಲಿ ಗ್ರಾಮ ಗ್ರಂಥಾಲಯ ಉದ್ಘಾಟನೆ

Date:

Advertisements

ಭಾಲ್ಕಿ ತಾಲ್ಲೂಕಿನ ತಳವಾಡ (ಕೆ) ಗಾಪಂ ವ್ಯಾಪ್ತಿಯ ಕರಡ್ಯಾಳ ಗ್ರಾಮದಲ್ಲಿ ಗ್ರಾಮ ಗ್ರಂಥಾಲಯ ಉದ್ಘಾಟಿಸಲಾಯಿತು.

ಭಾಲ್ಕಿ ತಾಪಂ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಲ್ಲಿ ಗ್ರಂಥಾಲಯಗಳ ಬಳಕೆ ಹಾಗೂ ಅವರಲ್ಲಿ ಓದುವ ಹವ್ಯಾಸವನ್ನು ಬೆಳೆಸುವ ಉದ್ದೇಶದಿಂದ ಸರಕಾರವು ʼಗ್ರಾಮ ಗ್ರಂಥಾಲಯʼ ಯೋಜನೆ ಪರಿಚಯಿಸಿ ಅನುಷ್ಠಾನಕ್ಕೆ ತಂದಿದೆʼ ಎಂದು ಹೇಳಿದರು.

ʼಸರಕಾರವು ಈಗಾಗಲೇ ʼಅರಿವು ಕೇಂದ್ರʼ ಎಂಬ ಹೆಸರಿನಲ್ಲಿ ಪ್ರತಿಯೊಂದು ಗ್ರಾಮ ಪಂಚಾಯತಿಯ ಕೆಂದ್ರ ಸ್ಥಾನದಲ್ಲಿ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದೆ. ಇದರಂತೆ ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಗ್ರಾಮ ಗ್ರಂಥಾಲಯವನ್ನು ಸ್ಥಾಪಿಸಿ ಸರಕಾರ ಗ್ರಾಮದಲ್ಲಿರುವ ಮಕ್ಕಳಿಗೆ ಜ್ಞಾನಧಾರೆಯನ್ನು ಎರೆಯುತ್ತಿದೆ. ಸರ್ಕಾರದ ಈ ಕೆಲಸ ಅತ್ಯಂತ ಶ್ಲಾಘನೀಯ. ಗ್ರಾಮದಲ್ಲಿರುವ ಮಕ್ಕಳು ಈ ಗ್ರಂಥಾಲಯದ ಲಾಭ ಪಡೆದುಕೊಳ್ಳಬೇಕುʼ ಎಂದರು.

Advertisements
WhatsApp Image 2025 09 24 at 6.30.25 PM

ಗ್ರಾಮ ಪಂಚಾಯತಿ ಅಧ್ಯಕ್ಷೆ ಅನುಪಮಾ ರಾಚಣ್ಣಾ ಅವರು ಗ್ರಂಥಾಲಯ ವಿಜ್ಞಾನದ ಪಿತಾಮಹ ಎಸ್.ಆರ್.ರಂಗನಾಥನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ತಳವಾಡ ಕೆ ಗ್ರಾಪಂ ಪಿಡಿಒ ಪ್ರಭುಶೆಟ್ಟಿ ಅವರು ಅತಿಥಿ-ಗಣ್ಯರಿಗೆ ಸ್ವಾಗತಿಸಿ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಇದನ್ನೂ ಓದಿ : ಬೀದರ್‌ | ಮುಖ್ಯಮಂತ್ರಿ, ಕೃಷಿ ಸಚಿವರು ಖುದ್ದಾಗಿ ಅತಿವೃಷ್ಟಿ ಹಾನಿ ಪರಿಶೀಲಿಸಲಿ : ಶಾಸಕ ಶರಣು ಸಲಗರ

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರಾಮರಾವ ಶೇರಿಕಾರ, ಗ್ರಾಮದ ಪ್ರಮುಖರು ಶಿವಶಂಕರ ಪಾಟೀಲ್, ಎಪಿಎಂಸಿ ಮಾಜಿ ಅಧಕ್ಷ ಬಾಬುರಾವ ವೀರಶಟ್ಟಿ, ಗ್ರಾಪಂ ಸದಸ್ಯರಾದ ಜಗನ್ನಾಥ, ಶಿವಕುಮಾರ, ಟಿಐಇಸಿಸಿ ಗಣಪತಿ, ಗ್ರಾಪಂ ಸಿಬ್ಬಂದಿ, ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X