ದಾಭೋಲ್ಕರ್, ಪನ್ಸಾರೆ, ಗೌರಿ ಮತ್ತು ಕಲ್ಬುರ್ಗಿ ಹತ್ಯೆಯಲ್ಲಿ ‘ಸಾಮ್ಯತೆ’ಗಳಿವೆಯೇ; ಸಿಬಿಐಗೆ ಸುಪ್ರೀಂ ಪ್ರಶ್ನೆ

Date:

Advertisements

ವಿಚಾರವಾದಿ ನರೇಂದ್ರ ದಾಭೋಲ್ಕರ್, ಸಿಪಿಐ ನಾಯಕ ಗೋವಿಂದ್ ಪನ್ಸಾರೆ, ಹೋರಾಟಗಾರ್ತಿ-ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿದ್ವಾಂಸ, ವಿಚಾರವಾದಿ ಎಂ.ಎಂ ಕಲ್ಬುರ್ಗಿ ಅವರ ಹತ್ಯೆಗಳಲ್ಲಿ ಯಾವುದಾದರೂ ‘ಸಾಮ್ಯತೆ’ಗಳಿವೆಯೇ ಎಂದು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಶ್ನಿಸಿದೆ.

ಮೂಢನಂಬಿಕೆಯ ವಿರುದ್ಧ ಹೋರಾಟಗಾರ ನರೇಂದ್ರ ದಾಭೋಲ್ಕರ್ ಅವರು 2013ರ ಆಗಸ್ಟ್ 20ರಂದು ಪುಣೆಯಲ್ಲಿ ಬೆಳಗ್ಗಿನ ಜಾವ ವಾಕಿಂಗ್‌ ಮಾಡುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು. 2015ರ ಫೆಬ್ರವರಿ 20ರಂದು ಪನ್ಸಾರೆ ಅವರನ್ನು, ಅದೇ ವರ್ಷ ಆಗಸ್ಟ್‌ 30ರಂದು ಕಲ್ಬುರ್ಗಿ ಅವರನ್ನೂ ಹಾಗೂ 2017ರ ಸೆಪ್ಟೆಂಬರ್ 5 ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

2023ರ ಏಪ್ರಿಕ್ 18ರಂದು ದಾಭೋಲ್ಕರ್ ಪ್ರಕರಣದ ತನಿಖೆಯ ಮೇಲ್ವಿಚಾರಣೆಯನ್ನು ಮುಂದುವರೆಸಲು ಬಾಂಬೆ ಹೈಕೋರ್ಟ್‌ ನಿರಾಕರಿಸಿತ್ತು. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ದಾಭೋಲ್ಕರ್ ಅವರ ಪುತ್ರಿ ಮುಕ್ತಾ ದಾಭೋಲ್ಕರ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠ, ‘ನಾಲ್ವರ ಹತ್ಯೆಗಳಲ್ಲಿ ಏನಾದರೂ ಸಾಮತ್ಯೆಗಳಿಗೆಯೇ’ ಎಂದು ಪ್ರಶ್ನಿಸಿದೆ.

Advertisements

ಮುಕ್ತಾ ದಾಭೋಲ್ಕರ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಆನಂದ್ ಗ್ರೋವರ್, “ನಾಲ್ಕು ಹತ್ಯೆಗಳ ಹಿಂದೆ ದೊಡ್ಡ ಪಿತೂರಿ ಇದೆ. ಲಭ್ಯವಿರುವ ಪುರಾವೆಗಳು ಈ ಪ್ರಕರಣಗಳಿಗೆ ಸಂಬಂಧಿಸಿರಬಹುದು” ಎಂದು ಪೀಠಕ್ಕೆ ತಿಳಿಸಿದರು.

“ವಿಚಾರಣೆಯನ್ನು ಎದುರಿಸುತ್ತಿರುವ ಆರೋಪಿಗಳು (ದಾಭೋಲ್ಕರ್ ಪ್ರಕರಣದಲ್ಲಿ) ಆ ನಾಲ್ಕು ಕೊಲೆಗಳಲ್ಲಿ ಭಾಗಿಯಾಗಿರಬಹುದೇ? ಅಥವಾ ನಾಲ್ಕು ಹತ್ಯೆಗಳಲ್ಲಿ ಒಂದೇ ರೀತಿಯ ಅಂಶಗಳು ಕಂಡುಬಂದಿಲ್ಲವೇ” ಎಂದು ನ್ಯಾಯಮೂರ್ತಿ ಧುಲಿಯಾ ಅವರು ಸಿಬಿಐ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಐಶ್ವರ್ಯಾ ಭಾಟಿ ಅವರನ್ನು ಪ್ರಶ್ನಿಸಿದರು.

“ನಾವು ಆ ಬಗ್ಗೆ ತಿಳಿದುಕೊಳ್ಳಲು ಬಯಸುತ್ತೇವೆ. ಆ ರೀತಿಯ ಸಾಮ್ಯತೆಗಳಿವೆಯೇ ಪರಿಶೀಲಿಸಿರಿ” ಎಂದು ಸಿಬಿಐಗೆ ನ್ಯಾಯಮೂರ್ತಿ ಕಿಶನ್ ಕೌಲ್ ಸೂಚಿಸಿದರು.

“ದಾಭೋಲ್ಕರ್, ಪನ್ಸಾರೆ ಮತ್ತು ಗೌರಿ ಲಂಕೇಶ್ ಹತ್ಯೆಗಳಲ್ಲಿ ಸಾಮಾನ್ಯ ‘ಲಿಂಕ್‌’ಗಳು ಇರಬಹುದೆಂದು ಸಿಬಿಐ ಶಂಕಿಸಿದೆ” ಎಂದು ಗ್ರೋವರ್ ಮೇ 18 ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

“ದಾಭೋಲ್ಕರ್, ಪನ್ಸಾರೆ ಮತ್ತು ಗೌರಿ ಲಂಕೇಶ್ ಹತ್ಯೆಗಳಲ್ಲಿ ಬಳಸಲಾದ ಶಸ್ತ್ರಾಸ್ತ್ರಗಳು ಒಂದೇ ಎಂದು ಕಂಡುಬಂದಿದೆ. ಅಂದಮೇಲೆ, ಅಪರಾಧಗಳಲ್ಲಿ ಭಾಗಿಯಾದ ಆರೋಪಿಗಳೂ ಅವರೇ ಆಗಿದ್ದಾರೆ. ಆದ್ದರಿಂದ, ಸಿಬಿಐ ಹೆಚ್ಚಿನ ತನಿಖೆ ನಡೆಸಲು ಬಯಸಿದೆ” ಎಂದು ಅವರು ಹೇಳಿದರು.

ಒಂಬತ್ತು ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಪ್ರಕರಣದ ತನಿಖೆಯ ಮೇಲೆ ಹೆಚ್ಚಿನ ನಿಗಾ ಅಗತ್ಯವಿಲ್ಲ ಎಂದು ಹೈಕೋರ್ಟ್ ಏಪ್ರಿಲ್ 18 ರಂದು ಹೇಳಿತ್ತು. ನಿರಂತರ ಮೇಲ್ವಿಚಾರಣೆಗಾಗಿ ಮುಕ್ತಾ ದಾಭೋಲ್ಕರ್ ಸಲ್ಲಿಸಿದ ಅರ್ಜಿ ಸೇರಿದಂತೆ ಹಲವು ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

2014 ರಲ್ಲಿ, ಮುಕ್ತಾ ದಾಭೋಲ್ಕರ್ ಮತ್ತು ಇನ್ನೊಬ್ಬ ಕಾರ್ಯಕರ್ತನ ಮನವಿಯ ಮೇರೆಗೆ ಹೈಕೋರ್ಟ್ ತನಿಖೆಯನ್ನು ಪುಣೆ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಿತ್ತು. ಪುಣೆಯ ವಿಶೇಷ ನ್ಯಾಯಾಲಯವು 2021ರಲ್ಲಿ ಅಪರಾಧದ ಮಾಸ್ಟರ್ ಮೈಂಡ್ ವೀರೇಂದ್ರ ಸಿನ್ ತಾವ್ಡೆ ವಿರುದ್ಧ ಆರೋಪಪಟ್ಟಿ ರೂಪಿಸಿತ್ತು. ಇದು ತಾವ್ಡೆ ಮತ್ತು ಇತರ ಮೂವರ ವಿರುದ್ಧ ಕೊಲೆ ಮತ್ತು ಕ್ರಿಮಿನಲ್ ಪಿತೂರಿ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇನ್ನೋರ್ವ ಆರೋಪಿ ಸಂಜೀವ್ ಪುನಾಲೇಕರ್ ವಿರುದ್ಧ ಸಾಕ್ಷ್ಯ ನಾಶದ ಆರೋಪ ಹೊರಿಸಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X