ಉಡುಪಿ | ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಎಂ ಎ ಗಫೂರ್ ನೇಮಕ ಸ್ವಾಗತಾರ್ಹ : ಕೋಟ ನಾಗೇಂದ್ರ ಪುತ್ರನ್

Date:

Advertisements

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರು ಆಗಿರುವ ಎಂ, ಏ, ಗಫೂರ್ ಅವರನ್ನು ನೇಮಕ ಮಾಡಿ ಕರ್ನಾಟಕ ಕಾಂಗ್ರೆಸ್ ಸರಕಾರ ಹೊರಡಿಸಿರುವ ಆದೇಶವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಕೋಟ ನಾಗೇಂದ್ರ ಪುತ್ರನ್ ಸ್ವಾಗತಿಸಿದ್ದಾರೆ.

ಹಾಗೆಯೇ ಕಾಂಗ್ರೆಸ್ ಪಕ್ಷದಲ್ಲಿ ಇಡಿ ಜೀವನವನ್ನೇ ಸವೆಸಿರುವ ಶಂಕರ್ ಕುಂದರ್ ಅವರಿಗೂ ಕೂಡ ಮುಂದಿನ ದಿನದಲ್ಲಿ ಖಾಲಿ ಆಗಲಿರುವ ನಿಗಮ ಮಂಡಳಿ ಅಲ್ಲಿ ಸ್ಥಾನ ನೀಡಿ ಗೌರವಿಸುವುದರ ಮುಕೇನ ಕಾಂಗ್ರೆಸ್ ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬ ಬೇಕು ಎಂದು ಮನವಿ ಮಾಡಿದ್ದಾರೆ.

ಎಂ, ಏ, ಗಫೂರ್ ಅವರು ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಇನ್ನಷ್ಟು ಬಲಿಷ್ಠ ಮಾಡುವುದರಲ್ಲಿ ಅನುಮಾನ ಇಲ್ಲ, ಪಕ್ಷ ನಿಷ್ಠೆ, ಅಭಿವೃದ್ಧಿ, ಸಮಾಜದಲ್ಲಿ ಶಾಂತಿ, ಸಹನೆಯಿಂದ ಎಲ್ಲಾ ಧರ್ಮದವರು ಒಗ್ಗಟ್ಟಾಗಿ ಇರಬೇಕು ಎಂದು ನಿರಂತರವಾಗಿ ತಮ್ಮ ಮಾತಿನ ದಾಟಿಯಲ್ಲಿ, ಸಾಮಾಜಿಕ ಭಾಷಣಗಳಲ್ಲಿ ಪ್ರತಿಪಾದಿಸುತ್ತ ಬಂದವರು.

ಆಸ್ಕರ್ ಪರ್ನಾಂಡಿಸ್ ಅವರ ಆಪ್ತರಾಗಿ ಅತ್ಯಂತ ಪಕ್ಷ ನಿಷ್ಠೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡು ಕಾಂಗ್ರೆಸ್ ಪಕ್ಷದ ಬೇರೆ ಬೇರೆ ಹುದ್ದೆಗಳನ್ನು ಅತ್ಯಂತ ಶ್ರದ್ದೆ ಇಂದ ನಿಬಾಯಿಸಿದವರು, ದಿನದ 24 ಗಂಟೆಯೂ ಆಸ್ಕರ್ ಪರ್ನಾಂಡಿಸ್ ಅವರ ಜೊತೆಯಲ್ಲೇ ಇದ್ದವರು. ಯಾವುದೇ ಅಧಿಕಾರಕ್ಕೆ ಪೈ ಪೋಟಿ ಮಾಡಿದವರಲ್ಲ, ಆಸ್ಕರ್ ಫರ್ನಾಂಡಿಸ್ ಅವರಲ್ಲಿ ಗಫೂರ್ ಅವರು ಅಧಿಕಾರ ಕೇಳಿದ್ದರೆ 10 ವರ್ಷದ ಹಿಂದೆಯೇ ವಿಧಾನಸಭಾ ಸದಸ್ಯರೋ, ವಿಧಾನ ಪರಿಷತ್ ಸದಸ್ಯರೋ ಆಗುತ್ತಿದ್ದರು, ಆದ್ದರಿಂದ ಎಂ, ಏ, ಗಫೂರ್ ಅವರಂತಹ ನಿಸ್ವಾರ್ಥವಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿದವರಿಗೆ ಇಂದು ಕಾಂಗ್ರೆಸ್ ಸರಕಾರ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಿ ಗೌರವಿಸಿದೆ, ಎಂ, ಏ, ಗಫೂರ್ ಅವರ ಅವಧಿಯಲ್ಲಿ ಕರಾವಳಿ ಮತ್ತಷ್ಟು ಅಭಿವೃದ್ಧಿ ಆಗಲಿ ಎಂದು ಗಪೂರ್ ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪರವಾಗಿ ಶುಭ ಹಾರೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X