ಸಚಿವರಾದ ಡಿ ಕೆ ಶಿವಕುಮಾರ್‌, ರಹೀಮ್ ಖಾನ್ ಖಾತೆಗಳಲ್ಲಿ ಬದಲಾವಣೆ

Date:

Advertisements

ಉಪಮುಖ್ಯಮಂತ್ರಿಯೂ ಆಗಿರುವ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್‌ ಮತ್ತು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರ ಖಾತೆಗಳನ್ನು ಮಾರ್ಪಡಿಸಲಾಗಿದೆ.

ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆಯ ಮೇರೆಗೆ ಖಾತೆಗಳನ್ನು ಮಾರ್ಪಡಿಸಿ ಅಧಿಸೂಚನೆ ಹೊರಡಿಸಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರ ಅಭಿವೃದ್ಧಿ ಇಲಾಖೆಗಳನ್ನು ಮೊದಲಿಗೆ ನೀಡಲಾಗಿತ್ತು. ಜೊತೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಸೇರಿದಂತೆ ಪ್ರಮುಖ ಮತ್ತು ಮಧ್ಯಮ ನೀರಾವರಿ ಮತ್ತು ಬೆಂಗಳೂರು ನಗರ ಅಭಿವೃದ್ಧಿಯನ್ನು ವಹಿಸಲಾಗಿತ್ತು.

ಈಗ ಹಳೆಯ ಖಾತೆಯಾದ ಜಲಸಂಪನ್ಮೂಲ ಇಲಾಖೆ ಜೊತೆಗೆ ಬೆಂಗಳೂರು ನಗರಾಭಿವೃದ್ಧಿ (ಬೆಂಗಳೂರು ಪಟ್ಟಣ ಯೋಜನೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ 5 ನಗರ ನಿಗಮಗಳು ಮತ್ತು ಬೆಂಗಳೂರು ನಗರ ಜಿಲ್ಲೆಯ ಅಡಿಯಲ್ಲಿ ಬರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಬಿಡಿಎ, ಬಿಡಬ್ಲ್ಯೂಎಸ್ಎಸ್‌ಬಿ ನೀಡಲಾಗಿದೆ.

ಹಾಗೆಯೇ ರಹೀಮ್ ಖಾನ್ ಅವರಿಗೆ ಪೌರಾಡಳಿತ ಹಾಗೂ ಹಜ್ ಖಾತೆ ಉಳಿದಿದ್ದರೂ ಬೆಂಗಳೂರು ನಗರ ಜಿಲ್ಲೆಯ ಅಡಿಯಲ್ಲಿ ಬರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಜವಾಬ್ದಾರಿ ಡಿ ಕೆ ಶಿವಕುಮಾರ್‌ ಅವರ ಪಾಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X