ಮೈಸೂರು ದಸರಾ | ಆಧುನಿಕ ಕೃಷಿ ಪದ್ಧತಿ ಅನುಸರಿಸುವುದರಿಂದ ಪ್ರಗತಿ ಸಾಧ್ಯ : ಸಚಿವ ಚೆಲುವರಾಯಸ್ವಾಮಿ

Date:

Advertisements

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರೈತ ದಸರಾ ಉಪ ಸಮಿತಿ ವತಿಯಿಂದ ನಗರದ ಜೆ.ಕೆ.ಮೈದಾನದ ಅಲ್ಯುಮಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರೈತ ದಸರಾ ಕಾರ್ಯಕ್ರಮವನ್ನು ಭತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಆಧುನಿಕ ಕೃಷಿ ಪದ್ಧತಿ ಅನುಸರಿಸುವುದರಿಂದ ಪ್ರಗತಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.

“ಆಧುನಿಕ ಕೃಷಿ ಪದ್ಧತಿಯಲ್ಲಿ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳ ಬಳಕೆಯಿಂದಾಗಿ ಕೂಲಿ ಕಾರ್ಮಿಕರ ಸಮಸ್ಯೆ ಬಗೆಹರಿಸಿಕೊಳ್ಳುವುದರೊಂದಿಗೆ ಉತ್ತಮವಾದ ಫಸಲು ಪಡೆದುಕೊಳ್ಳುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದುವತ್ತ ನಮ್ಮ ರೈತರು ಮುಂದಾಗಬೇಕು. ಪ್ರಸ್ತುತ ಸರ್ಕಾರದಿಂದ ರೈತರಿಗೆ ಅವಶ್ಯಕವಿರುವ ಸೌಲಭ್ಯ ಮತ್ತು ಮಾರ್ಗದರ್ಶನಗಳನ್ನು ಒದಗಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ರೈತ ದಸರಾ ಎಂಬ ಹೆಸರಿನಲ್ಲಿ ಕೃಷಿಗೆ ಸಂಬಂಧಿಸಿದ ತೋಟಗಾರಿಕೆ, ಮೀನುಗಾರಿಕೆ, ಹೈನುಗಾರಿಕೆ, ರೇಷ್ಮೆ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಎಲ್ಲಾ ಇಲಾಖೆಗಳನ್ನು ಒಗ್ಗೂಡಿಸಿ ವಸ್ತು ಪ್ರದರ್ಶನವನ್ನು ಅಯೋಜಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು” ತಿಳಿಸಿದರು.

“ಭಾರತ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ರೈತ ಸಮುದಾಯದವರಿದ್ದು, ವಿಶ್ವ ವಿಖ್ಯಾತ ದಸರಾ ಮಹೋತ್ಸವದಲ್ಲಿ ರೈತ ದಸರಾ ಹಮ್ಮಿಕೊಳ್ಳುವುದರಿಂದ ರೈತರಿಗೆ ಗೌರವ ಸಲ್ಲಿಸಲಾಗುತ್ತಿದೆ‌‌. ಇನ್ನು ರೈತರು ಬೆಳೆಯುವ ಫಸಲಿಗೆ ಸಂಬಂಧಿಸಿದಂತೆ, ನಮ್ಮ ರೈತರಲ್ಲಿ ಕೆಲವರು ತಾವು ಸಂಗ್ರಹಿಸಿಟ್ಟುಕೊಂಡಂತಹ ಹಳೆ ತಳಿಯ ಬೀಜಗಳನ್ನೇ ಬೆಳೆ ಬೆಳೆಯಲು ಮುಂದಾಗುತ್ತಾರೆ. ಆದರೆ, ಸಂಗ್ರಹಿಸಲ್ಪಟ್ಟ ತಳಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ, ರೋಗ ನಿರೋಧಕ ಶಕ್ತಿ ಹೆಚ್ಚಿರುವಂತಹ ಮತ್ತು ಆಧುನಿಕ ಪದ್ಧತಿಯಿಂದ ಸಂಸ್ಕರಿಸಲ್ಪಟ್ಟ ತಳಿಗಳ ಬೇಸಾಯ ಮಾಡುವುದರಿಂದ‌ ಉತ್ತಮ ಫಸಲನ್ನು ಬೆಳೆದು ಆರ್ಥಿಕವಾಗಿ ಅಭಿವೃದ್ಧಿಗೊಳ್ಳುವಂತೆ ಹಾಗೂ ತಂತ್ರಜ್ಞಾನದ ಮೂಲಕ ಸಮಗ್ರ ಕೃಷಿಯನ್ನು ಕೈಗೊಳ್ಳಬೇಕೆಂದು ಸಲಹೆ” ನೀಡಿದರು.

ಕಬ್ಬು ಕಟಾವು ಮಾಡುವ ಯಂತ್ರಕ್ಕೆ ಲಕ್ಷಾಂತರ ರೂಪಾಯಿ ಬೆಲೆಯಿದ್ದು, ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಶೇ.50%ರಷ್ಟು ಸಬ್ಸಿಡಿ ಆಧಾರದಲ್ಲಿ ಯಂತ್ರೋಪಕರಣ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆ ಯಂತ್ರೋಪಕರಣಕ್ಕಾಗಿಯೇ ಒಂದು ಸಾವಿರಕ್ಕೂ ಹೆಚ್ಚು ಕೋಟಿ ರೂಪಾಯಿಯನ್ನು ಸರ್ಕಾರದಿಂದ ಮೀಸಲಿರಿಸಿದ್ದು, ಇದುವರೆಗೂ ಸುಮಾರು 334 ಫಲಾನುಭವಿಗಳು ಇದರ ಸೌಲಭ್ಯ ಪಡೆದುಕೊಂಡಿರುತ್ತಾರೆ. ಸರ್ಕಾರದ‌ ಯೋಜನೆಗಳು, ಅದರಲ್ಲೂ ರೈತರಿಗೆ ಅನುಕೂಲವಾಗುವಂತಹ ಸಬ್ಸಿಡಿ ಕುರಿತಾಗಿ ವಿಶ್ವವಿದ್ಯಾನಿಲಯಗಳು ರೈತರಿಗೆ ಕಾಲ ಕಾಲಕ್ಕೆ ಮಾಹಿತಿ ನೀಡುವ ಮೂಲಕ ಅರಿವು ಮೂಡಿಸಬೇಕು ಎಂದು ತಿಳಿಸುವ‌ ಮೂಲಕ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳು‌ ಜಾರಿಯಾದ ಬಗ್ಗೆ ಹಾಗೂ ಇದರಿಂದ ರೈತರಿಗೆ ಆಗುತ್ತಿರುವ ಅನುಕೂಲದ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಹಾಗೂ ಪಶು ಸಂಗೋಪನಾ ಮತ್ತು ರೇಷ್ಮೆ ಖಾತೆ ಸಚಿವರಾದ ಕೆ.ವೆಂಕಟೇಶ್ ಅವರು ಕೃಷಿ‌ ಮತ್ತು ಕೃಷಿ‌ ಸಂಬಂಧಿತ ಇಲಾಖೆಗಳಲ್ಲಿ ಸಾಧನೆ ಮಾಡಿರುವ ಪ್ರಗತಿ ಪರ ರೈತ ಹಾಗೂ ರೈತ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಿದರು.

ಕೃಷಿಯಲ್ಲಿ ಸಾಧನೆ ಮಾಡಿರುವ ಮೈಸೂರು ತಾಲ್ಲೂಕಿನ ವರುಣಾ ಹೋಬಳಿಯ ವರಕೋಡು ಗ್ರಾಮದ ಮುದ್ದರಾಮೇಗೌಡ ಬಿನ್ ನಿಂಗರಾಮೇಗೌಡ, ಜಯಪುರ ಹೋಬಳಿಯ ಹಾರೋಹಳ್ಳಿ ಗ್ತಾಮದ ಮಹೇಶ ಬಿನ್ ಮಹದೇವಯ್ಯ, ತೋಟಗಾರಿಕೆ ಇಲಾಖೆಯಿಂದ ಜಯಪುರ ಹೋಬಳಿಯ ಟಿ.ಕಾಟೂರು ಗ್ರಾಮದ ಮರಂಕಯ್ಯ ಬಿನ್ ನಾಗನಾಯಕ, ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಹೋಬಳಿಯ ಹಳೇಪುರ ಗ್ರಾಮದ ಹೆಚ್.ಎಸ್.ಮಹದೇವಯ್ಯ ಬಿನ್ ಸಿದ್ದಯ್ಯ, ಪಶು ಸಂಗೋಪನೆಯಿಂದ ಪಿರಿಯಾಪಟ್ಟದ ಬೆಟ್ಟದಪುರ ಗ್ರಾಮದ ರವಿ ಬಿನ್ ಈರೇಗೌಡ, ವರುಣಾ ಹೋಬಳಿಯ ಮೇಗಳಾಪುರ ಗ್ರಾಮದ ಮಂಜುಳ ಬಿನ್ ಜಗದೀಶ್, ರೇಷ್ಮೆ‌ ಇಲಾಖೆಯಿಂದ ಹುಣಸೂರು ತಾಲ್ಲೂಕಿನಿಂದ ಬಿಳಿಕೆರೆ ಹೋಬಳಿಯ ದಾಸನಪುರ ಗ್ರಾಮದ ಮಹೇಂದ್ರ ಬಿನ್ ಸ್ವಾಮಿಗೌಡ,‌ಕೆ.ಆರ್.ನಗರ ತಾಲ್ಲೂಕಿನ ಕಾಮೇನಹಳ್ಳಿ ಗ್ರಾಮದ ಎನ್. ಶಿವರಾಮೇಗೌಡ ಬಿನ್ ಶಿವಣ್ಣ ಹಾಗೂ ಮೀನುಗಾರಿಕೆಯಿಂದ ತಿ.ನರಸೀಪುರ ತಾಲ್ಲೂಕಿನ ಕೊಡಗಳ್ಳಿ ಗ್ರಾಮದ ದೀಪಿಕಾ ಕೋಂ ಕಿರಣ್ ಕುಮಾರ್ ಅವರ ಅತ್ಯುನ್ನತ ಸಾಧನೆಗೆ ಸನ್ಮಾನಿಸಿ ಗೌರವಿಸಲಾಯಿತು.

ಗ್ರಾಮೀಣ ಭಾಗಗಳಲ್ಲಿ ಕೃಷಿಗೆ ಸಂಬಂಧಿಸಿದ ಚಟುವಟಿಕೆ ಕುರಿತ ಮಾಹಿತಿ ತಿಳಿಸುವ ಸಲುವಾಗಿ ಕೃಷಿ ಪರಿಸರ ಪ್ರವಾಸೋದ್ಯಮದ ಕೈಪಿಡಿ ಬಿಡುಗಡೆಗೊಳಿಸಲಾಯಿತು.

ಈ ವಿಶೇಷ ಸುದ್ದಿ ಓದಿದ್ದೀರಾ? ಚಾಮರಾಜನಗರ | ಸಾಗಡೆ ಗ್ರಾಮ ಪಂಚಾಯತಿ ಸಿಬ್ಬಂದಿಗಳ ಲಂಚದಾಹ; ‘ಇ-ಸ್ವತ್ತಿ’ಗಾಗಿ ಅಲೆದಾಟ

ಕಾರ್ಯಕ್ರಮದಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಶಾಸಕರಾದ ಕೆ.ಹರೀಶ್ ಗೌಡ, ಡಿ. ರವಿಶಂಕರ್, ದಸರಾ ಉಪ ಸಮಿತಿ ವಿಶೇಷಾಧಿಕಾರಿ ಭೀಮಪ್ಪ ಕೆ. ಲಾಳಿ, ಕಾರ್ಯಾಧ್ಯಕ್ಷ ಕೆ.ಹೆಚ್.ರವಿ, ಅಧ್ಯಕ್ಷರಾದ ಕೆ.ಪಿ.ಯೋಗೇಶ್, ಉಪಾಧ್ಯಕ್ಷ ಹರೀಶ್ ಮೊಗಣ್ಣ, ಗೋವಿಂದ ಶೆಟ್ಟಿ, ಶ್ರೀನಿವಾಸ್, ರಘು, ಕೆ.ಎಸ್.ಕೃಷ್ಣಮೂರ್ತಿ, ಉಪ ಕೃಷಿ‌ ನಿರ್ದೇಶಕ ಡಾ.ಬಿ.ಎನ್.ಧನಂಜಯ, ಉಪ ಸಮಿತಿಯ ಸದಸ್ಯರು ಸೇರಿದಂತೆ‌ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X