ಬೆಳಗಾವಿ : ಜಾರಕಿಹೊಳಿ ಸಹೋದರರಿಂದ ಹುಕ್ಕೇರಿಯಲ್ಲಿ ಮದ್ಯ–ಮಾಂಸ ಬಾಡೂಟ : ರಮೇಶ ಕತ್ತಿ ಆರೋಪ

Date:

Advertisements

ಬೆಳಗಾವಿ ಜಿಲ್ಲೆಯ ಸಹಕಾರಿ ಸಂಘಗಳ ಚುನಾವಣಾ ಹಿನ್ನಲೆಯಲ್ಲಿ ಹುಕ್ಕೇರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಮದ್ಯ, ಮಾಂಸ ಸೇರಿದಂತೆ ಬಾಡೂಟಗಳು ಜೋರಾಗಿ ನಡೆಯುತ್ತಿರುವುದಾಗಿ ಮಾಜಿ ಸಂಸದ ರಮೇಶ್ ಕತ್ತಿ ಗಂಭೀರ ಆರೋಪ ಮಾಡಿದ್ದಾರೆ.

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಪ್ರಚಾರ ಸಭೆಗಳಲ್ಲಿ ಮಾತನಾಡಿದ ಅವರು, ಜಾರಕಿಹೊಳಿ ಸಹೋದರರು ಯುವಕರನ್ನು ಕೆಟ್ಟ ಮಾರ್ಗದತ್ತ ಕೊಂಡೊಯ್ಯುತ್ತಿದ್ದಾರೆ. ಇದರಿಂದ ಗ್ರಾಮೀಣ ಸಂಸ್ಕಾರ ಹಾಳಾಗುತ್ತಿದೆ ಎಂದು ಟೀಕಿಸಿದರು.

ಅವರು ಮುಂದುವರಿದು, ನವರಾತ್ರಿ ಸಮಯದಲ್ಲಿ ಮನೆಮನೆಗಳಲ್ಲಿ ದೇವರಿಗೆ ದೀಪ ಹಚ್ಚಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮತದಾರರಿಗೆ ಮದ್ಯ ಮಾಂಸ ಬಡಿಸುವವರನ್ನು ದುರ್ಗಾದೇವಿಯೇ ಸರಿಯಾದ ಬುದ್ಧಿ ಕಲಿಸುತ್ತಾಳೆ. ನಮ್ಮ ಕ್ಷೇತ್ರದಲ್ಲಿ ಇಷ್ಟು ವರ್ಷಗಳಿಂದ ಚುನಾವಣೆ ನಡೆದರೂ ಬಾಡೂಟದ ಸಂಸ್ಕೃತಿ ಇರಲಿಲ್ಲ ಎಂದು ಹೇಳಿದರು.

ಮತದಾರರಿಗೆ ಕರೆ ನೀಡಿದ ಅವರು, ಬೇರೆಯವರ ಜಮೀನಿನಲ್ಲಿ ಕುರಿ–ಕೋಳಿ ಜೀವ ತೆಗೆಯುತ್ತ ಬಾಡೂಟಕ್ಕೆ ಹೋಗಬೇಡಿ. ಮನೆಯಲ್ಲಿನ ಸಂಸ್ಕಾರವನ್ನು ಕಾಪಾಡಿಕೊಳ್ಳಿ. ದುರ್ಗಾದೇವಿ ಆರಾಧನೆಯ ಸಮಯದಲ್ಲಿ ಉಪವಾಸ ಮತ್ತು ಭಕ್ತಿಯೇ ಮುಖ್ಯ ಎಂದು ಒತ್ತಿ ಹೇಳಿದರು.

ರಮೇಶ್ ಕತ್ತಿ ಕೊನೆಯಲ್ಲಿ, ಮದ್ಯ–ಮಾಂಸ ಬಾಡೂಟಗಳ ಮೂಲಕ ಮತದಾರರನ್ನು ದಾರಿ ತಪ್ಪಿಸುವ ಕುತಂತ್ರಿಗಳಿಗೆ ಸರಿಯಾದ ಪಾಠ ಕಲಿಸಬೇಕಾಗಿದೆ ಎಂದು ಕಿಡಿಕಾರಿದರು.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬದಲಾವಣೆ ಪ್ರಿಂಟ್ ಮಿಸ್ಟೇಕ್ ? : ಶಾಸಕ ರಾಜು ಕಾಗೆ

ಬೆಳಗಾವಿ ಜಿಲ್ಲೆಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಶಾಸಕ ರಾಜು ಕಾಗೆ...

ಬೆಳಗಾವಿ : ಸಭೆಯಲ್ಲಿ ಕಣ್ಣೀರು ಹಾಕಿದ ಮಾಜಿ ಸಂಸದ ರಮೇಶ ಕತ್ತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಮಾಜಿ ಸಚಿವ...

ಬೆಳಗಾವಿ : ನಗರದಲ್ಲಿ ರೈತರ ಪ್ರತಿಭಟನೆ ಎಫ್‌ಐಆರ್ ದಾಖಲು

ಜೈ ಕಿಸಾನ್ ತರಕಾರಿ ಮಾರುಕಟ್ಟೆ ಓಪನ್ ಮಾಡುವಂತೆ ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿ...

ಬೆಳಗಾವಿ : ಪಾದಯಾತ್ರಿಗಳಿಗೆ ಕಾರು ಡಿಕ್ಕಿ 7 ಜನರಿಗೆ ಗಂಭೀರ ಗಾಯ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಕ್ರಾಸ್‌ ಸಮೀಪ ರಸ್ತೆ...

Download Eedina App Android / iOS

X