ಹೆಣ್ಣು ಮಕ್ಕಳು ನಮ್ಮ ದೇಶದ ಮುಂದಿನ ಭವಿಷ್ಯ: ಕ್ರೀಡಾಪಟು ಅಂಜು ಬಾಬಿ‌ ಜಾರ್ಜ್

Date:

Advertisements

ಹೆಣ್ಣು ಮಕ್ಕಳು ನಮ್ಮ ದೇಶದ ಮುಂದಿನ ಭವಿಷ್ಯ.‌ ಕ್ರೀಡೆ ಸೇರಿದಂತೆ ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಕಾಲಿಡುತ್ತಿದ್ದಾರೆ. ಇದು ಆಶಾದಾಯಕ ಬೆಳೆವಣಿಗೆ ಎಂದು ಅರ್ಜುನ ಪ್ರಶಸ್ತಿ ಪುರಸ್ಕೃತೆ ಕ್ರೀಡಾಪಟು ಅಂಜು ಬಾಬಿ ಜಾರ್ಜ್ ತಿಳಿಸಿದರು.

ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್, ದಕ್ಷಿಣ ಪ್ರದೇಶ-II ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಎರಡು ದಿನಗಳ ಅಂತರ-ಪ್ರಾದೇಶಿಕ ಅಥ್ಲೆಟಿಕ್ಸ್ ಕೂಟ 2025 ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪವರ್ ಗ್ರಿಡ್ ಸಂಸ್ಥೆಯ ವಿವಿಧ 11 ಪ್ರದೇಶಗಳ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಒಟ್ಟುಗೂಡಿಸಿ, ನೌಕರರಲ್ಲಿ ಸೌಹಾರ್ದತೆ, ಕ್ರೀಡಾ ಮನೋಭಾವ ಮತ್ತು ಆರೋಗ್ಯಕರ ಸ್ಪರ್ಧೆಯ ಮನೋಭಾವವನ್ನು ಬೆಳೆಸುತ್ತಿರುವುದು ಉತ್ತಮ ಬೆಳವಣಿಗೆ. ಕ್ರೀಡೆಯಲ್ಲಿ ಸೋಲು-ಗೆಲುವು ಇದ್ದದ್ದೇ. ಸೋಲನ್ನೇ ಸವಾಲಾಗಿ ಸ್ವೀಕರಿಸಿ ಉನ್ನತ ಸ್ಥಾನಕ್ಕೆ ಏರಬೇಕು. ವೃತ್ತಿಪರ ಜೀವನದಲ್ಲಿ ಕ್ರೀಡೆಗಳನ್ನು ಸಂಯೋಜಿಸುವುದು ಕೂಡ ಮಹತ್ವವಾದುದು ಎಂದು ಅಂಜು ಬಾಬಿ ಜಾರ್ಜ್ ಹೇಳಿದರು.

1002436738

ಶಾಂತಿಯ ಸಂಕೇತವಾಗಿ ಕಾರ್ಯಕ್ರಮದಲ್ಲಿ ಪಾರಿವಾಳವನ್ನು ಹಾರಿಬಿಡಲಾಯಿತು. ಸಿಆರ್‌ಪಿಎಫ್ ಬ್ಯಾಂಡ್ ತಂಡದಿಂದ ಆಕರ್ಷಕ ಬ್ಯಾಂಡ್ ಪ್ರದರ್ಶನ ನಡೆಸಲಾಯಿತು.

ಕಾರ್ಯಕ್ರಮದಲ್ಲಿ SR-II ನ ಪ್ರಭಾರ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಸ್. ಹೆಜಿಬ್, ರಮೇಶ್ ಬೇಬಿ, ಸಿಎಂ ಸೀನಿಯರ್ ಜಿಎಂ (ಎಫ್ & ಎ) ಟಾಫರ್ ಮೆಂಡೆಜ್, ಸಿಎಂ ಜಿಎಂ (ಎಚ್‌ಆರ್) ಅನ್ಶುಲಾ ಒಮೆಗಾ ಸಿಂಗ್, ಸಾರ್ವಜನಿಕ ಸಂಪರ್ಕಾಧಿಕಾರಿ – ಅಜಿತ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾಗರ್ ಉದ್ಘಾಟನಾ ಸಮಾರಂಭವನ್ನು ನಿರೂಪಿಸಿದರು.

1002436730

ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮಗ್ರ ಅಭಿವೃದ್ಧಿ ಮತ್ತು ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆಯನ್ನು ಉತ್ತೇಜಿಸುವುದಕ್ಕಾಗಿ ಪವರ್ ಗ್ರಿಡ್ ಸಂಸ್ಥೆಯಿಂದ ಈ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿತ್ತು.

1002436957
1002436822
1002436825
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

Download Eedina App Android / iOS

X