ಬೀದರ್‌ | ಸಮೀಕ್ಷೆಗಿರುವ ನ್ಯೂನತೆ ಸರಿಪಡಿಸಲು ಸರ್ಕಾರಿ ನೌಕರರ ಸಂಘ ಆಗ್ರಹ

Date:

Advertisements

ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಸಮೀಕ್ಷೆದಾರರಿಗೆ ದಸರಾ ರಜೆ ನೀಡುವುದು, ಸಮೀಕ್ಷೆಗಿರುವ ನ್ಯೂನತೆಗಳನ್ನು ಸರಿಪಡಿಸವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಎಂದು ಭಾಲ್ಕಿ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ತಾಲೂಕು ಸರಕಾರಿ ನೌಕರರ ಸಂಘ ಒತ್ತಾಯಿಸಿದೆ.

ಈ ಕುರಿತು ಭಾಲ್ಕಿ ಪಟ್ಟಣದ ತಹಸೀಲ್ ಕಚೇರಿಯಲ್ಲಿ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ ಮತ್ತು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಬನ್ನಾಳೆ ನೇತೃತ್ವದಲ್ಲಿ ಶುಕ್ರವಾರ ತಹಸೀಲ್ದಾರಗೆ ಮನವಿ ಪತ್ರ ಸಲ್ಲಿಸಿದರು.

ʼಸಮೀಕ್ಷೆ ಕಾರ್ಯದಲ್ಲಿ ಕೈಗೊಂಡಿರುವ ಸಮೀಕ್ಷೆದಾರರು ಹಲವು ತಾಂತ್ರಿಕ ತೊಂದರೆ ಅನುಭವಿಸುತ್ತಿದ್ದಾರೆ. ಸಮೀಕ್ಷೆ ಕಾರ್ಯದಲ್ಲಿ ಇಂಟರ್‌ನೆಟ್ ಸಮಸ್ಯೆ ಎದುರಾಗುತ್ತಿದೆ. ಕುಟುಂಬ ಸದಸ್ಯರಿಗೆ ಒಟಿಪಿ ಸಮಸ್ಯೆ ಕಾಡುತ್ತಿದೆ. ಸಮೀಕ್ಷೆದಾರರಿಗೆ 150 ಮನೆಗಳನ್ನು ನಿಯೋಜಿಸಿರುವುದರಿಂದ ಕೆಲಸದ ಒತ್ತಡ ಹೆಚ್ಚಾಗುತ್ತಿದೆ. ಹಾಗಾಗಿ ಮೇಲಾಧಿಕಾರಿಗಳು ಗಮನ ಹರಿಸಿ ಸಮೀಕ್ಷೆಗಿರುವ ಎಲ್ಲ ಅಡೆತಡೆಗಳನ್ನು ನಿವಾರಿಸುವುದರ ಜತೆಗೆ ಸಮೀಕ್ಷೆದಾರರಿಗೆ ಇರುವ ಮನೆಗಳನ್ನು ಕಡಿತಗೊಳಿಸಬೇಕು. ಸಮೀಕ್ಷೆಯಲ್ಲಿ ಬಹುತೇಕ ಶಿಕ್ಷಕರೇ ಇದ್ದಾರೆ. ಆದ್ದರಿಂದ ಸಮೀಕ್ಷೆದಾರರಿಗೆ ತಮ್ಮ ಸೇವೆಯ ವ್ಯಾಪ್ತಿಯಲ್ಲಿ ಸಮೀಕ್ಷೆ ಕೈಗೊಳ್ಳಲು ಅವಕಾಶ ಕಲ್ಪಿಸಬೇಕುʼ ಎಂದು ಮನವಿ ಮಾಡಿದರು.

ʼಬಹುತೇಕ ಸಮೀಕ್ಷೆದಾರರಿಗೆ ಇನ್ನೂ ಸಮೀಕ್ಷೆ ಕಿಟ್ ತಲುಪಿರುವುದಿಲ್ಲ. ಕೂಡಲೇ ಸಮೀಕ್ಷೆ ಕಿಟ್ ವಿತರಿಸುವುದರ ಜತೆಗೆ ಸಮೀಕ್ಷೆಯಲ್ಲಿ ಪಾಲ್ಗೊಂಡ ಸಮೀಕ್ಷೆದಾರರಿಗೆ ನಾಡಿನ ದೊಡ್ಡ ಹಬ್ಬ ಆಗಿರುವ ದಸರಾ ಹಬ್ಬದಲ್ಲಿ ನಾಲ್ಕೈದು ದಿವಸ ರಜೆ ನೀಡಬೇಕು ಎಂದು ವಿನಂತಿಸಿದರು.

ಇದನ್ನೂ ಓದಿ : ಬೀದರ್‌ | ಭಾರಿ ಮಳೆ : ಒಡೆದ ಐತಿಹಾಸಿಕ ತ್ರಿಪುರಾಂತ ಕೆರೆ

ತಾಲೂಕು ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ರಾಜಪ್ಪ ಪಾಟೀಲ್, ಪ್ರಮುಖರಾದ ಅಶೋಕ ಕುಂಬಾರ, ವಸಂತ ಹುಣಸನಾಳೆ, ಪ್ರಭು ಡಿಗ್ಗೆ, ನಿರಂಜಪ್ಪ ಪಾತ್ರೆ, ಶಿವಕಾಂತ ಬಾಪುರ್ಸೆ, ಅಶೋಕ, ಗದಗೆಪ್ಪ ಪಾಟೀಲ್, ಕೃಷ್ಣ ಲಾಂಚಕರ್, ವೆಂಕಟ ಮಲಗೊಂಡ, ಪ್ರಕಾಶ, ವಿಶ್ವನಾಥ, ಓಂಕಾರ, ಮಲ್ಲಿಕಾರ್ಜುನ ಪಾಟೀಲ್, ದಯಾನಂದ ಕಣಜೆ, ಶಿವಕುಮಾರ ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X