ವಿಜಯಪುರ | ಮಹದೇವಪ್ಪ ಹರಿಜನ ಹತ್ಯೆ ಪ್ರಕರಣ: ಆರೋಪಿಗಳ ಪತ್ತೆಗೆ ಕಾಲಾವಕಾಶ ಕೇಳಿದ ಎಸ್‌ಪಿ

Date:

Advertisements

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನೆಟ್ಟಿ ಪಿ ಎ ಗ್ರಾಮದ ಮಹಾದೇವಪ್ಪ ಹರಿಜನ(ಪೂಜಾರಿ) ಅವರ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಏಳು ದಿನಗಳಿಂದ ನಡೆಯುತ್ತಿದ್ದ ಧರಣಿ ಶನಿವಾರ ಸಂಜೆ ಅಂತ್ಯಗೊಂಡಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸ್ಥಳಕ್ಕೆ ಭೇಟಿ ನೀಡಿ, “ಕೊಲೆ ಪ್ರಕರಣದ ತನಿಖೆ ಸಾಕಷ್ಟು ಪ್ರಗತಿಯಲ್ಲಿದೆ. ಆರೋಪಿಗಳು ಯಾರೇ ಆಗಿರಲಿ ಪತ್ತೆ ಹಚ್ಚುವ ಕಾರ್ಯವನ್ನು ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ತಾವು ಕಾಲಾವಕಾಶ ನೀಡಬೇಕು” ಎಂದು ಧರಣಿನಿರತ ದಲಿತ ಸಂಘಟನೆಗಳ ಒಕ್ಕೂಟದ ಪ್ರಮುಖರಿಗೆ ಮನವರಿಕೆ ಮಾಡಿಕೊಟ್ಟರು.

“ಯಾವುದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಗಳ ಜತೆಗೆ ಸಾಕ್ಷ್ಯಾಧಾರಗಳು ತುಂಬಾ ಮುಖ್ಯ. ಕೋರ್ಟ್ ಅನುಮತಿ ಪಡೆದು ತನಿಖೆ ಮುಂದುವರೆದಿದೆ. ಅರೇಳು ತಿಂಗಳ ಕಾಲಾವಕಾಶ ಬೇಕಿದ್ದ ಈ ವೈಜ್ಞಾನಿಕ ತನಿಖೆಯನ್ನು ಕೇವಲ ಎರಡೇ ತಿಂಗಳಲ್ಲಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ಪ್ರತಿಭಟನೆ ಮಾಡದಿದ್ದರೂ ಪೊಲೀಸ್ ಇಲಾಖೆ ತನ್ನ ತನಿಖಾ ಕಾರ್ಯವನ್ನು ಗಂಭೀರವಾಗಿಯೇ ಮಾಡುತ್ತದೆ. ಹೋದ ವರ್ಷ ಕಲಕೇರಿ ಠಾಣಾ ವ್ಯಾಪ್ತಿಯ ಪ್ರಕರಣ ಕಾಲುವೆಯಲ್ಲಿ ಬರೀ ಎಲುಬು ಹೊಂದಿದ ಅನಾಥ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷದ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಹೀಗಾಗಿ ಕಾಲಾವಕಾಶ ಕೊಟ್ಟರೆ ಆರೋಪಿಯನ್ನು ಪತ್ತೆ ಹಚ್ಚಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ ನಗರಸಭೆಯ ಯುಜಿಡಿ ಸಮಸ್ಯೆಗೆ ಪರಿಹಾರ ಹುಡುಕುವತ್ತ ಹೆಜ್ಜೆ: ನಾಗರಾಜ್ ಜೆ

“ಈ ಪ್ರಕರಣ ಇನ್ನುಮುಂದೆ ನನ್ನ ಜವಾಬ್ದಾರಿ. ಎಲ್ಲ ಆಯಾಮಗಳಲ್ಲಿ ಎಫ್‌ಎಸ್ಎಲ್ ವರದಿಯನ್ವಯ ತನಿಖೆ ಮುಂದುವರೆದಿದೆ. ಸಹಕಾರ ಕೊಡಿ ಪ್ರತಿಭಟನೆ ಕೈಬಿಡಿ” ಎಂದು ಕೇಳಿಕೊಂಡರು.

ದಲಿತ ಸಂಘಟನೆಗಳ ಮುಖಂಡರಾದ ರಮೇಶ ಆಸಂಗಿ, ವಿನಾಯಕ ಗುಣಸಾಗರ, ಬಿ ಎಸ್ ತಳವಾರ, ಚಂದ್ರಕಾಂತ ಸಿಂಗೆ, ಪ್ರಕಾಶ ಗುಡಿಮನಿ, ಶರಣು ಸಿಂಧೆ, ರವಿ ಹೋಳಿ, ಶ್ರೀನಿವಾಸ ಓಲೇಕಾರ, ಅಶೋಕ ಚಲವಾದಿ, ಸುಭದ್ರಾ ಮೇಲಿನಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X