ದಾವಣಗೆರೆ | ಮಾರಕ ಆಯುಧದೊಂದಿಗೆ ಓಡಾಟ: ಆತಂಕ ಭಯ ಹುಟ್ಟಿಸಿದ ವ್ಯಕ್ತಿ ಬಂಧಿಸಿದ ಪೊಲೀಸರು

Date:

Advertisements

ಕಬ್ಬಿಣದ ಲಾಂಗ್ ನಂತಹ ಮಾರಕ ಆಯುಧವನ್ನು ಹಿಡಿದುಕೊಂಡು ಓಡಾಡಿ ಆರ್‌ಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಭಯ, ಆತಂಕ ಉಂಟು ಮಾಡಿದ್ದ ವ್ಯಕ್ತಿಯನ್ನು ದಾವಣಗೆರೆ ಆರ್‌ಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆಯ ಟಿಪ್ಪುನಗರದ ಅಬ್ದುಲ್ ಸಮದ್ ಬಂಧಿತ ಆರೋಪಿಯಾಗಿದ್ದು, ನಗರದ ಆನೆಕೊಂಡ ಬಸವೇಶ್ವರ ದೇವಸ್ಥಾನದಿಂದ ಕಲ್ಲೇಶ್ವರ ಮಿಲ್ ಕಡೆ ಹೋಗುವ ರಸ್ತೆಯಲ್ಲಿ ಲಾಂಗ್ ಹಿಡಿದು ರಾಜಾರೋಷವಾಗಿ ನಡೆದಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇತ್ತೀಚೆಗೆ ಗುಂಪುಗಳ ಮಧ್ಯೆ ಹಲವು ಅಹಿತಕರ ಘಟನೆಗಳು, ವಾಗ್ವಾದ ನಡೆದಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ಜನರಲ್ಲಿ ಭಯ ಉಂಟುಮಾಡುವಂತೆ ರಸ್ತೆಯಲ್ಲಿ ಆಯುಧ ಹಿಡಿದು, ಭಯ ಅಶಾಂತಿಯನ್ನುಂಟು ಮಾಡುವಂತ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವೀಡಿಯೋ ಆಧರಿಸಿ ಪೊಲೀಸರು ಆರ್‌ಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಾನೂನು ಸಲಹಾ ಕೇಂದ್ರ; ಸಮಾಜದ ಕಡೆಯ ವ್ಯಕ್ತಿಗೂ ಸಮಾನ ನ್ಯಾಯ: ನ್ಯಾ.ರವಿ ವಿ.ಹೊಸಮನಿ

ಘಟನೆ ಸಂಬಂಧ ಎಚ್ಚರಿಕೆ ನೀಡಿರುವ ದಾವಣಗೆರೆ ಪೊಲೀಸರು ಮಾರಕ ಆಯುಧಗಳನ್ನು ಹಿಡಿದು ಸಾರ್ವಜನಿಕವಾಗಿ ಅಡ್ಡಾಡುವುದು, ಸಾರ್ವಜನಿಕರಿಗೆ ಭಯ ಉಂಟು ಮಾಡುವುದು ಹಾಗೂ ಅಶಾಂತಿ ಉಂಟು ಮಾಡುವಂತೆ ವರ್ತಿಸುವುದು ಕಾನೂನು ಬಾಹಿರವಾಗಿದೆ. ಅಂತಹ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಅತಿಥಿ ಉಪನ್ಯಾಸಕರ ಹಾಗೂ ಶೈಕ್ಷಣಿಕ ಗೊಂದಲ ಸರಿಪಡಿಸಲು ಪದವಿ ವಿದ್ಯಾರ್ಥಿಗಳ ತರಗತಿ ಬಹಿಷ್ಕಾರ

ಯುಜಿಸಿ ನಿಯಮ, ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲದಿಂದ ಪದವಿ ವಿದ್ಯಾರ್ಥಿಗಳು ಶೈಕ್ಷಣಿಕ...

ದಾವಣಗೆರೆ | ಹೊಲಿಗೆಯಂತ್ರ ತರಬೇತಿಗೆ ಅಪರಿಚಿತರಿಗೆ ಹಣ ಪಾವತಿಸಿ ಮೋಸಹೋಗಬೇಡಿ: ಕೈಗಾರಿಕಾ ಇಲಾಖೆ ಸ್ಪಷ್ಟನೆ

"ದಾವಣಗೆರೆ ಕೌಶಲ್ಯ ಆಧಾರಿತ ಯೋಜನೆಯಡಿ ಇಲಾಖೆಯ ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಗ್ರಾಮೀಣ...

ದಾವಣಗೆರೆ | ಮಕ್ಕಳ ಪಾಲನೆ ವಿಚಾರಕ್ಕೆ ಬಾಲ ನ್ಯಾಯಮಂಡಳಿ ಆವರಣದಲ್ಲಿ ಚಾಕುವಿನಿಂದ ಇರಿದು ಪತ್ನಿ ಹತ್ಯೆ

ಮಕ್ಕಳ ಪಾಲನೆಗೆ ಸಂಬಂಧಿಸಿದ ಕೌಟುಂಬಿಕ ಸಮಸ್ಯೆ ಇತ್ಯರ್ಥಕ್ಕೆಂದು ಬಾಲ‌ ನ್ಯಾಯ‌ಮಂಡಳಿಗೆ ಆಗಮಿಸಿದ್ದ...

ದಾವಣಗೆರೆ | ದಲಿತ ವಾಣಿಜ್ಯ, ಕೈಗಾರಿಕೋದ್ಯಮಿಗಳ ಸಂಘದಿಂದ ಉದ್ಯಮ ಅಭಿವೃದ್ಧಿ ಕಾರ್ಯಕ್ರಮ

ದಲಿತ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ (DICCI) ದಾವಣಗೆರೆ , ನ್ಯಾಷನಲ್...

Download Eedina App Android / iOS

X