ಚಿತ್ರದುರ್ಗ | ಸ್ವಚ್ಛತೆ ಕೊರತೆ ಅನೈರ್ಮಲ್ಯ; ಕ್ರಮ ಕೈಗೊಳ್ಳದ ಗ್ರಾ. ಪಂ. ಅಧಿಕಾರಿಗಳ ವರ್ಗಾವಣೆಗೆ ಆಗ್ರಹ

Date:

Advertisements

ವಾಲ್ಮೀಕಿ ಭವನ, ಆಂಜನೇಯ ದೇವಸ್ಥಾನ, ನೀರಿನ ತೊಟ್ಟಿ, ಊರಿನ ಚರಂಡಿಗಳು ಸೇರಿದಂತೆ ಸ್ವಚ್ಛತೆ ಇಲ್ಲದೇ ನೈರ್ಮಲ್ಯದ ಕೊರತೆ ಎದುರಿಸುತ್ತಿರುವ, ದುರ್ವಾಸನೆಯಿಂದ ಬೇಸತ್ತಿರುವ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿ ಗ್ರಾಮಸ್ಥರು ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಮತ್ತು ತಾಲೂಕು ಪಂಚಾಯತಿಗೆ ಮನವಿ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 09 28 at 9.33.22 PM 2

ಮನವಿ ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ʼʼದೊಡ್ಡ ಉಳಾರ್ತಿ ಗ್ರಾಮದ ವಾಲ್ಮೀಕಿ ಭವನದ ಹತ್ತಿರವಿರುವ ಬಾವಿಯಲ್ಲಿ ಗಿಡ ಬೆಳೆದು ಪಾಳು ಬಿದ್ದಿದ್ದು, ಬಾವಿಯಲ್ಲಿರುವ ನೀರು ಮಲಿನಗೊಂಡು ದುರ್ವಾಸನೆ ಬೀರುತ್ತಿದ್ದು, ಸುತ್ತಮುತ್ತ ಇರುವ ಮನೆಗಳು ವಾಸ ಮಾಡಲು ಕಷ್ಟವಾಗಿದೆ. ಅಲ್ಲದೆ ಗೊಲ್ಲರಹಟ್ಟಿಯ ಆಂಜನೇಯ ದೇವಸ್ಥಾನದಿಂದ ಕುಡಿಯುವ ನೀರಿನ ಘಟಕದ ಹತ್ತಿರದವರೆಗೂ ಚರಂಡಿ ಸ್ವಚ್ಛತೆ ಮಾಡದೆ ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು ಇದರಿಂದ ರಸ್ತೆಯಲ್ಲಿ ಕೊಳಚೆ ನೀರು ತುಂಬಿಕೊಂಡಿದ್ದು, ಸಾರ್ವಜನಿಕರಿಗೆ ರೋಗರುಜಿನದ ಭೀತಿ ಎದುರಾಗಿದೆʼʼ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ʼʼಚಳ್ಳಕೆರೆ ರಸ್ತೆಯ ಹೋಟೆಲ್ ಬಳಿ ಇರುವ ನೀರಿನ ತೊಟ್ಟಿ ಮುರಿದು ಬಿದ್ದು ತಿಂಗಳಾಗುತ್ತಾ ಬಂದರೂ ಸರಿ ಮಾಡಿಸದೆ ಪಶುಪಕ್ಷಿ, ದನಕರುಗಳಿಗೆ ಕುಡಿಯಲು ನೀರು ಇಲ್ಲದೆ ಪರದಾಡುವಂತಾಗಿದೆ. ಅಲ್ಲದೆ ಸಾಕಷ್ಟು ದೂರು ನೀಡಿದರೂ, ಗ್ರಾಮದ ಚರಂಡಿಗಳನ್ನು ಸ್ವಚ್ಛತೆ ಮಾಡಿಸದೆ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರಿದ್ದು, ಇದರಿಂದ ಗ್ರಾಮದಲ್ಲಿ ಸ್ವಚ್ಛತೆ ಎನ್ನುವುದು ಮರೀಚಿಕೆಯಾಗಿದೆʼʼ ಎಂದು ಕಿಡಿಕಾರಿದ್ದಾರೆ.

WhatsApp Image 2025 09 28 at 9.33.21 PM

ಈ ಕುರಿತು ಮಾತನಾಡಿದ ಗ್ರಾಮದ ಮುಖಂಡರು “ಬಾವಿಯನ್ನು ಮತ್ತು ಕುಡಿಯುವ ನೀರಿನ ಘಟಕದ ಬಳಿಯ ಚರಂಡಿ ಹಾಗೂ ಊರಿನ ಚರಂಡಿಗಳನ್ನು ಸ್ವಚ್ಚ ಮಾಡಿಸಲು ಹಲವು ಬಾರಿ ಮನವಿ ನೀಡಿದರೂ, ಗ್ರಾಮ ಪಂಚಾಯಿತಿಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿಸಿದ್ದಾರೆ. ಸ್ವಚ್ಛತೆಗೆ ಕ್ರಮ ಕೈಗೊಳ್ಳುತ್ತಿಲ್ಲ. ಆದ್ದರಿಂದ ಈ ಅಧಿಕಾರಿಗಳನ್ನು ಬೇರೆಡೆ ವರ್ಗಾವಣೆ ಮಾಡಿ ಉತ್ತಮ ಅಧಿಕಾರಿಗಳನ್ನು ನೇಮಿಸಬೇಕುʼʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಾರಕ ಆಯುಧದೊಂದಿಗೆ ಓಡಾಟ: ಆತಂಕ ಭಯ ಹುಟ್ಟಿಸಿದ ವ್ಯಕ್ತಿ ಬಂಧಿಸಿದ ಪೊಲೀಸರು

ದೊಡ್ಡ ಉಳ್ಳಾರ್ತಿ ಗ್ರಾಮದ ಮಂಜುನಾಥ ಕೆ ಎಲ್, ಶ್ರೀನಿವಾಸ, ಓಬಳೇಶಪ್ಪ, ತಿಪ್ಪೇಸ್ವಾಮಿ, ಬೋರಯ್ಯ, ಶಿವಣ್ಣ, ಅಮಿತ್, ಲೋಹಿತ್ ಕುಮಾರ್, ಅಜಯ್ ಕುಮಾರ್, ರಾಮಣ್ಣ, ನಾಗರಾಜ, ಪಾಲನಾಯಕ, ತಿಪ್ಪೇಶ, ರಾಜಪ್ಪ, ಶಶಿಕುಮಾರ, ಮಂಜುನಾಥ ಬಿ, ಅಪ್ಪು, ನರಸಿಂಹ ವಿನೋದ್ ಶಿವಶಂಕರ್ ರಾಜಣ್ಣ ಎಚ್, ನರಸಿಂಹ ಪಾಟೀಲ್, ತಿಪ್ಪೇಸ್ವಾಮಿ ಟಿ, ರಮೇಶ, ಮಹಾಂತೇಶ, ಭೀಮಪ್ಪ, ಭರತೇಶ್, ಗೌರೀಶ್, ತಿಪ್ಪಯ್ಯ, ಮಂಜುನಾಥ, ರವಿತೇಜ ನಾಯಕ, ದರ್ಶನ್, ಪ್ರಕಾಶ್, ಹೇಮಣ್ಣ ಸೇರಿದಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X