ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಗೆದ್ದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, “ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರ. ಫಲಿತಾಂಶ ಒಂದೇ – ಭಾರತ ಗೆದ್ದಿದೆ. ನಮ್ಮ ಕ್ರಿಕೆಟಿಗರಿಗೆ ಅಭಿನಂದನೆಗಳು” ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಮೋದಿಯವರು ಈ ಮೂಲಕ ಅವರು ಪಾಕಿಸ್ತಾನದ ಕಾಲೆಳೆದಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧವಾಗಿ ಭಾರತ ಸೇನೆ ಪಾಕಿಸ್ತಾನದಲ್ಲಿದ್ದ ಉಗ್ರರ ಹಡಗುತಾಣಗಳ ಮೇಲೆ ದಾಳಿಗೆ ಉಗ್ರನೆಲೆಗಳನ್ನ ಧ್ವಂಸ ಮಾಡಿತ್ತು. ಇದಕ್ಕೆ ಭಾರತ ಸರ್ಕಾರ ಆಫರೇಷನ್ ಸಿಂಧೂರ ಎಂದು ಹೆಸರಿಟ್ಟಿತ್ತು. ಈ ದಾಳಿಯ ವೇಳೆ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳನ್ನ ಭಾರತ ವಾಯು ಸೇನ್ ಧ್ವಂಸಗೊಳಿಸಿತ್ತು.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಜೈಶ್-ಎ-ಮೊಹಮ್ಮದ್ (JeM) ಮತ್ತು ಲಷ್ಕರ್-ಎ-ತೈಬಾ (LeT) ನಂತಹ ಉಗ್ರ ಸಂಘಟನೆಗಳ 9 ತರಬೇತಿ ಶಿಬಿರಗಳನ್ನು ನಾಶಪಡಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಭಾರತದ ಮೇಲೆ ದಾಳಿ ನಡೆಸಿತ್ತು. ಇದಕ್ಖೂ ಪ್ರತಿಕ್ರಿಯೆ ನೀಡಿದ್ದ ಭಾರತೀಯ ಸೇನೆ ಹಲವು ಪಾಕಿಸ್ತಾನದ ವಾಯುನೆಲೆಗಳನ್ನ ಧ್ವಂಸ ಮಾಡಿತ್ತು.
ಭಾರತ ತಂಡವು ಏಷ್ಯಾ ಕಪ್ 2025ರ ಫೈನಲ್ ಪಂದ್ಯದಲ್ಲಿ ಪಾಕಿಸ್ಥಾನವನ್ನು 5 ವಿಕೆಟ್ಗಳಿಂದ ಸೋಲಿಸಿ ಟ್ರೋಫಿ ಗೆದ್ದುಕೊಂಡಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ಭಾರತದ ಸ್ಪಿನ್ ಬೌಲರ್ಗಳು ಪಾಕಿಸ್ಥಾನದ ಮಧ್ಯಮ ಕ್ರಮಾಂಕವನ್ನು ಧ್ವಂಸಗೊಳಿಸಿದರು. ಪಾಕಿಸ್ಥಾನ 19.1 ಓವರ್ಗಳಲ್ಲಿ 146 ರನ್ಗಳಿಗೆ ಆಲ್ಔಟ್ ಆಯಿತು, ಭಾರತವು ಸಾಧಾರಣ ಗುರಿಯನ್ನ 5 ವಿಕೆಟ್ಗಳು ಕಳೆದುಕೊಂಡು 19.4 ಓವರ್ಗಳಲ್ಲಿ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ 9ನೇ ಏಷ್ಯಾಕಪ್ ತನ್ನದಾಗಿಸಿಕೊಂಡಿತು.