ಬೆಳಗಾವಿ : ನಾನು ಮುಖ್ಯಮಂತ್ರಿ ಆಗುವ ಅವಕಾಶವಿದೆ : ಶಾಸಕ ಆಗ್ರಹ

Date:

Advertisements

ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ಹಾಗೂ ವಾಕರಸಾ ಸಂಸ್ಥೆಯ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಅವರು ಸಚಿವ ಸ್ಥಾನ ಯಾಕೆ? ಮುಖ್ಯ ಮಂತ್ರಿ ಆಗುವದಕ್ಕೂ ಅವಕಾಶ ಸಿಗಬೇಕೆಂದು ಆಗ್ರಹಿಸಿದ್ದಾರೆ.

ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಐದು ಬಾರಿ ಶಾಸಕನಾಗಿದ್ದರೂ ಇಂದಿಗೂ ಸಚಿವ ಸ್ಥಾನ ಸಿಗಲಿಲ್ಲ. ನನ್ನಿಗಿಂತ ಕಿರಿಯರಾದ ಕೃಷ್ಣ ಬೈರೇಗೌಡ,ಫ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಸಚಿವರಾಗಿದ್ದಾರೆ. ಅವರಿಗೆ ಸಮರ್ಥವಾಗಿ ಕೆಲಸ ಮಾಡುವ ಸಾಮರ್ಥ್ಯ ಇದ್ದಂತೆ, ನಾನೂ ಅದಕ್ಕಿಂತ ಕಡಿಮೆ ಇಲ್ಲ. ಸಚಿವ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡಿ ತೋರಿಸುತ್ತೇನೆ” ಎಂದರು.

ಅವರು ಮುಂದುವರೆದು, ಉತ್ತರ ಕರ್ನಾಟಕದ ಅಭಿವೃದ್ಧಿ ವಿಷಯದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. “ಕಲ್ಯಾಣ ಕರ್ನಾಟಕ ಭಾಗದ ಪ್ರತಿಯೊಬ್ಬ ಶಾಸಕರಿಗೂ 500 ಕೋಟಿ ರೂ. ಅನುದಾನ ಸಿಗುತ್ತಿದೆ. ಆದರೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಅಥಣಿ ಹೊರತುಪಡಿಸಿ ಉತ್ತರ ಕರ್ನಾಟಕದ ಹಳ್ಳಿಗಳು ಸಾಕಷ್ಟು ಹಿಂದುಳಿದಿವೆ. ಹಾಗಾಗಿ ನಮ್ಮ ಭಾಗಕ್ಕೂ ಸರ್ಕಾರದಿಂದ ವಿಶೇಷ ಅನುದಾನ ನೀಡಬೇಕು” ಎಂದು ಬೇಡಿಕೊಂಡರು.

ಇದೇ ವೇಳೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆಗೆ ಸಹಮತ ವ್ಯಕ್ತಪಡಿಸಿದ ಅವರು, “ಅಭಿವೃದ್ಧಿಯಲ್ಲಿ ಹಿಂದುಳಿದಿರುವುದರಿಂದ ಪ್ರತ್ಯೇಕ ರಾಜ್ಯ ಕೇಳುವುದರಲ್ಲಿ ತಪ್ಪೇನಿಲ್ಲ. ನಾನು ಕೂಡ ಈ ಬೇಡಿಕೆಗೆ ಸಹಮತಿಯಾಗಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬದಲಾವಣೆ ಪ್ರಿಂಟ್ ಮಿಸ್ಟೇಕ್ ? : ಶಾಸಕ ರಾಜು ಕಾಗೆ

ಬೆಳಗಾವಿ ಜಿಲ್ಲೆಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಶಾಸಕ ರಾಜು ಕಾಗೆ...

ಬೆಳಗಾವಿ : ಸಭೆಯಲ್ಲಿ ಕಣ್ಣೀರು ಹಾಕಿದ ಮಾಜಿ ಸಂಸದ ರಮೇಶ ಕತ್ತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಮಾಜಿ ಸಚಿವ...

ಬೆಳಗಾವಿ : ನಗರದಲ್ಲಿ ರೈತರ ಪ್ರತಿಭಟನೆ ಎಫ್‌ಐಆರ್ ದಾಖಲು

ಜೈ ಕಿಸಾನ್ ತರಕಾರಿ ಮಾರುಕಟ್ಟೆ ಓಪನ್ ಮಾಡುವಂತೆ ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿ...

ಬೆಳಗಾವಿ : ಪಾದಯಾತ್ರಿಗಳಿಗೆ ಕಾರು ಡಿಕ್ಕಿ 7 ಜನರಿಗೆ ಗಂಭೀರ ಗಾಯ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಕ್ರಾಸ್‌ ಸಮೀಪ ರಸ್ತೆ...

Download Eedina App Android / iOS

X