ರಾಯಚೂರು | ಸಮೀಕ್ಷೆಗೆ ಗೈರು: 57 ಸಿಬ್ಬಂದಿಗೆ ನೋಟಿಸ್; 6 ಜನ ಅಂಗನವಾಡಿ ಕಾರ್ಯಕರ್ತೆಯರ ಅಮಾನತು

Date:

Advertisements

ಹಿಂದುಳಿದ ವರ್ಗಗಳ ಸಮೀಕ್ಷೆಗೆ ಗೈರಾದ 57 ಅಧಿಕಾರಿಗಳಿಗೆ ನೋಟಿಸ್ ಹಾಗೂ ಸಮೀಕ್ಷೆ ಪ್ರಗತಿ ಕಾಣದ ಹಿನ್ನೆಲೆಯಲ್ಲಿ 6 ಜನ ಅಂಗನವಾಡಿ ಕಾರ್ಯಕರ್ತೆಯರನ್ನು ಅಮಾನತು ಮಾಡಲಾಗಿದೆ.

ಲಿಂಗಸೂಗುರು ತಾಲೂಕಿನಲ್ಲಿ ಸಮೀಕ್ಷೆಗೆ ಹಾಜರಾಗದೇ ಗೈರಾದ 57 ಸಿಬ್ಬಂದಿಗಳಿಗೆ ತಾಲ್ಲೂಕು ಸಮನ್ವಯ ಸಮಿತಿ ಅಧ್ಯಕ್ಷ, ಉಪ ವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

ಲಿಂಗಸೂಗುರು ತಾಲೂಕಿನಲ್ಲಿ ಸಮೀಕ್ಷೆಗೆ ನೇಮಕಗೊಂಡ ಸಿಬ್ಬಂದಿಗಳ ಪೈಕಿ 57 ಜನರು ಸಮೀಕ್ಷೆಗೆ ಹಾಜರಾಗದೇ ಗೈರಾಗಿದ್ದಾರೆ. ಹಾಜರಾಗುವಂತೆ ಸೂಚಿಸಿದರೂ ಗೈರಾಗಿದ್ದಾರೆ, ಇದರಿಂದ ಸಮೀಕ್ಷಾ ಕಾರ್ಯ ಕುಂಠಿತವಾಗಿದೆ. 24 ಗಂಟೆಯೊಳಗೆ ಸಮಜಾಯಿಷಿ ನೀಡಿ ಎಂದು ಸೂಚಿಸಿದ್ದಾರೆ.
ದೇವದುರ್ಗ ತಾಲ್ಲೂಕಿನ 6 ಜನ ಅಂಗನವಾಡಿ ಕಾರ್ಯಕರ್ತೆಯರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ್ ಯು. ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಮಶಾನವಿಲ್ಲದೆ ಮನೆ ಮುಂದೆಯೇ ಅಂತ್ಯಕ್ರಿಯೆ ಮಾಡುತ್ತಿದ್ದ ರಂಗಾಪುರ ಗ್ರಾಮಕ್ಕೆ ಅಧಿಕಾರಿಗಳ ಭೇಟಿ

ಅಂಜಳ-2 ಕೇಂದ್ರದ ಗುಂಡಮ್ಮ, ನಗರಗುಂಡ-2 ರಂಗಮ್ಮ, ಅಶೋಕ-ನೇತಾಜಿ ಓಣಿಯ ಮುತ್ತಮ್ಮ, ಮಟ್ಟೇರ್‌ದೊಡ್ಡಿಯ ಚಾಂದಬಿ, ದೇವದುರ್ಗದ ನೇತಾಜಿ ಓಣಿಯ ವಿಜಯಲಕ್ಷ್ಮಿ ಹಾಗೂ ಬಾಪೂಜಿ ಓಣಿಯ ರೇಣುಕಾ ಅವರನ್ನು ಅಮಾನತುಗೊಳಿಸಿ ‘ನಾಲ್ಕು ದಿನವಾದರೂ ಸಮೀಕ್ಷೆಯಲ್ಲಿ ಪ್ರಗತಿ ಕಾಣಿಸಿಲ್ಲ. ಗಣತಿ ಕಾರ್ಯಕ್ಕೆ ಹೋಗದಂತೆ ಬೇರೆ ಕಾರ್ಯಕರ್ತೆಯರಿಗೂ ಪ್ರಚೋದಿಸಿದ್ದಾರೆ. ಗಣತಿ ಕಾರ್ಯಕ್ಕೂ ಹಾಜರಾಗಿಲ್ಲ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X