ಬಳ್ಳಾರಿ | ಜನತಾದರ್ಶನದಲ್ಲಿ ನೂಕು ನುಗ್ಗಲು: ಅಹವಾಲು ನೀಡಲು ಹೈರಾಣಾದ ಜನತೆ

Date:

Advertisements

ಬಳ್ಳಾರಿ ನಗರದ ಹೊಸ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ ಝಡ್‌ ಜಮೀರ್ ಅಹಮದ್‌ ಖಾನ್‌ ಉಪಸ್ಥಿತಿಯೊಂದಿಗೆ ನಡೆದ ಜನತಾದರ್ಶನಕ್ಕೆ ನಗರದ ಹಾಗೂ ಸುತ್ತಮುತ್ತಲ ಪ್ರದೇಶದ ಬಹಳಷ್ಟು ಸಾರ್ವಜನಿಕರು ನೆರೆದಿದ್ದು, ಅರ್ಜಿ ಸಲ್ಲಿಸಲು ನಾ ಮುಂದು ತಾ ಮುಂದು ಎಂದು ವೇದಿಕೆ ಕಡೆ ನುಗ್ಗತೊಡಗಿದರು. ಜನರನ್ನು ತಡೆದು ಸರತಿ ಸಾಲಿನಲ್ಲಿ ನಿಲ್ಲಿಸಲು ಕಂದಾಯ ಇಲಾಖೆಯ ಪರಿವೀಕ್ಷಕರು ಗ್ರಾಮಾಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಪೊಲೀಸರೊಂದಿಗೆ ಸೇರಿ ಹರಸಾಹಸಪಟ್ಟರು.

ಅಹವಾಲು ಸಲ್ಲಿಸಲು ಸೇರಿದ ಜನ ನಾವು ಸಚಿವರಿಗೇ ಮನವಿ ಕೊಡಬೇಕೆಂದು ಪಟ್ಟು ಹಿಡಿದುಕೊಂಡಿದ್ದರಿಂದ ಈ ನೂಕುನುಗ್ಗಲು ಮತ್ತು ಗೊಂದಲಕ್ಕೆ ಕಾರಣವಾಯಿತು. ಜನತಾದರ್ಶನ ಆಯೋಜಿಸಿದ ಜಿಲ್ಲಾಡಳಿತ ವ್ಯವಸ್ಥಿತವಾದ ಸಿದ್ಧತೆಯನ್ನು ಮಾಡಿಕೊಳ್ಳದೇ ಇದ್ದುದರಿಂದ ಈ ಗೊಂದಲಕ್ಕೆ ಕಾರಣವಾಯಿತೆಂದು ಮನವಿ ಕೊಡಲು ಬಂದವರು ದೂರಿದರು. ಇದಕ್ಕೆ ಕೆಲ ಹೊತ್ತು ಮಳೆರಾಯನ ಕಾಟದಿಂದಲೂ ಕಾರ್ಯಕ್ರಮ ಗಲಿಬಿಲಿಯಾಗಲು ಕಾರಣವಾಯಿತು. ಈ ನಡುವೆ ಅಹವಾಲು ಸಲ್ಲಿಸಲು ಬಂದ ಜನತೆ ಹೈರಾಣಾದರು.

ಈ ಸುದ್ದಿ ಓದಿದ್ದೀರಾ? ಗದಗ | ಜಿಲ್ಲೆಯಲ್ಲಿ 1,12,438 ಹೆಕ್ಟೇರ ಪ್ರದೇಶ ಬೆಳೆ ಹಾನಿ; 121.33 ಕೋಟಿ ರೂ ಪರಿಹಾರ ನೀಡಲು ಪ್ರಸ್ತಾವನೆ : ಸಚಿವ ಎಚ್ ಕೆ ಪಾಟೀಲ

ಜಿಲ್ಲಾ ಉಸ್ತುವಾರಿ ಸಚಿವರು, ಗ್ರಾಮೀಣ ಶಾಸಕ ನಾಗೇಂದ್ರ, ನಗರ ಶಾಸಕ ಭರತ್ ರೆಡ್ಡಿಯವರು ಸಾಧ್ಯವಾದಷ್ಟು ಎಲ್ಲರಿಂದಲೂ ಮನವಿ ಪತ್ರಗಳನ್ನು ಪಡೆದುಕೊಂಡು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.

ವೇದಿಕೆ ಮೇಲೆ ಬರಲು ಸಾಧ್ಯವಾಗದ ಜನರ ಹತ್ತಿರ ಖುದ್ದಾಗಿ ಉಸ್ತುವಾರಿ ಸಚಿವರು ಮತ್ತು ಶಾಸಕರುಗಳು ಹೋಗಿ ಮನವಿ ಪತ್ರವನ್ನು ಪಡೆದುಕೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X