ಮಣಿಪುರ ಹಿಂಸಾಚಾರ ತಡೆಯುವಲ್ಲಿ ರಾಜ್ಯ, ಕೇಂದ್ರ ಸರ್ಕಾರ ಸಂಪೂರ್ಣ ವಿಫಲ; ದಸಂಸ ಕಿಡಿ

Date:

Advertisements

ಮಣಿಪುರದಲ್ಲಿ ಕುಕ್ಕಿ ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ ಇಡೀ ಸಮಾಜವೇ ತಲೆತಗ್ಗಿಸುವಂತಹ ಘಟನೆಯಾಗಿದೆ. ಇದನ್ನು ತಡೆಯುವಲ್ಲಿ ಬಿಜೆಪಿ ನೇತೃತ್ವದ ಮಣಿಪುರ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದಸಂಸ ಪ್ರತಿಭಟನಾಕಾರರು ವಿಜಯನಗರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿ ಮಾತನಾಡಿದರು. “ಕಳೆದ 3 ತಿಂಗಳುಗಳಿಂದ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿರುವ ಮಣಿಪುರದಲ್ಲಿ ಮತ್ತೆ ಘರ್ಷಣೆ ನಡೆದಿದ್ದು, ಮೂವರ ಹತ್ಯೆ ನಡೆದಿದೆ. ತಮ್ಮ ನಿವಾಸದಲ್ಲಿ ಮಲಗಿದ್ದ ಮೂವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಬಳಿಕ ಮಾರಕಾಸ್ತ್ರದಿಂದ ಕೊಚ್ಚಿ, ಕ್ರೂರವಾಗಿ ಹತ್ಯೆ ಮಾಡಿರುವುದು ತಿಳಿದುಬಂದಿದೆ” ಎಂದರು.

“ಪೊಲೀಸರು ಮತ್ತು ದುಷ್ಕರ್ಮಿಗಳು ಒಟ್ಟಾಗಿ ಸೇರಿಯೇ ಈ ದುಷ್ಕೃತ್ಯ ಎಸಗಿದ್ದಾರೆ. ರಕ್ಷಣೆ ಕೇಳಿದ ಮಹಿಳೆಯರನ್ನು ಪೊಲೀಸರೇ ಪುಂಡರ ಗುಂಪಿಗೆ ಒಪ್ಪಿಸಿರುವುದು ಇದಕ್ಕೆ ಸಾಕ್ಷಿ. ಮಣಿಪುರ ಪೊಲೀಸರ ತನಿಖೆಯ ಮೇಲೆ ನಮಗೆ ವಿಶ್ವಾಸವಿಲ್ಲ. ಭದ್ರತೆ ದೃಷ್ಟಿಯಿಂದ ಹತ್ತಿರದ ನ್ಯಾಯಾಲಯಗಳಿಗೆ ದಾಖಲಿಸಲು ಅವಕಾಶ ಕಲ್ಪಿಸಬೇಕು” ಎಂದು ಮನವಿ ಮಾಡಿದರು.

Advertisements

“ಸಂತ್ರಸ್ತೆಯರು ಮಾನಸಿಕ ಆಘಾತಕ್ಕೆ ಒಳಗಾಗಿದ್ದು, ಭಯಬೀತರಾಗಿದ್ದಾರೆ. ಸಿಬಿಐ ಮುಂದೆ ಸತ್ಯ ಹೇಳುತ್ತಾರೆಂಬ ವಿಶ್ವಾಸವಿಲ್ಲ. ಹಾಗಾಗಿ ಮಹಿಳೆಯರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯಿಂದ ತನಿಖೆ ನಡೆಸಬೇಕು ಆಗಷ್ಟೆ ಅವರು ಸತ್ಯ ಹಂಚಿಕೊಳ್ಳಲು ಸಾಧ್ಯ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪೋಷಕರಿಲ್ಲದ ಪ್ರತಿಭಾವಂತೆ ಶಿಕ್ಷಣಕ್ಕೆ ದಾನಿಗಳಿಂದ ₹2.35 ಲಕ್ಷ ಆರ್ಥಿಕ ನೆರವು

ಡಿಜಿಪಿ ದರ್ಜೆಯ ಪೊಲೀಸ್ ಅಧಿಕಾರಿ ನೇತೃತ್ವದ ವಿಶೇಷ ತಂಡದ ಮೂಲಕ ತನಿಖೆ ನಡೆಸಬೇಕು. ವಿಚಾರಣೆಯನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು. ಸೂಕ್ತ ನ್ಯಾಯ ದೊರೆಯಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಮರಿಸ್ವಾಮಿ ಕೊಟ್ಟರು, ಎಚ್ ಸೋಮಶೇಖರ್, ಲಕ್ಷ್ಮಣ, ವೈ ಶೇಖರ, ನಾಗಪ್ಪ, ದುರುಗೇಶ್ ಕೂಡ್ಲಿಗಿ, ಅನಿಲ್ ಹುಲಿಕುಂಟೆ ಸೇರಿದಂತೆ ಬಹುತೇಕ ಮುಖಂಡರು, ಕಾರ್ಯಕರ್ತರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X