ಬಳ್ಳಾರಿ | ಕಲಬೆರಕೆ ವಸ್ತು ಮಾರಾಟಗಾರರ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements
  • ಬಳ್ಳಾರಿ ಜಿಲ್ಲಾದ್ಯಂತ ನಕಲಿ ಪ್ರಾಡಕ್ಟ್ ಗಳ ಹಾವಳಿ ಹೆಚ್ಚಾಗಿದೆ
  • ಗ್ರಾಹಕರು ಮೋಸ ಹೋಗುವುದು ತಪ್ಪಿಸುವಂತೆ ವಿತರಕರ ಸಂಘ ಒತ್ತಾ

ಬಳ್ಳಾರಿ ಜಿಲ್ಲೆಯಲ್ಲಿ ಗ್ರಾಹಕರಿಗೆ ಕಲಬೆರಕೆ ಮತ್ತು ನಕಲಿ ಪ್ರಾಡಕ್ಟ್ ಗಳನ್ನು ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಳ್ಳಾರಿ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ಕಿಶೋರ್ ಬಾಬು  ಆಗ್ರಹಿಸಿದರು.

ನಗರದ ಪತ್ರಿಕಾಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ ಅವರು, “ಇತ್ತೀಚೆಗೆ ಬಳ್ಳಾರಿಯಲ್ಲಿ
ನಕಲಿ ಪ್ರಾಡಕ್ಟ್  ಮಾರಾಟ ಹಾವಳಿ ಹೆಚ್ಚಾಗಿದೆ, ಗ್ರಾಹಕರು ಮೋಸ ಹೋಗುವುದನ್ನು ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು. ಕ್ಲಿನಿಕ್ ಪ್ಲಸ್ ಶಾಂಪೂ, ಮೈಸೂರು ಸ್ಯಾಂಡಲ್ ಸೇರಿದಂತೆ ಮುಂತಾದ ನಕಲಿ ಪ್ರಾಡಕ್ಟ್ ಗಳು ಮಾರಾಟ ದಂಧೆ ನಡೆಯುತ್ತಿದೆ. ರಾಜಲಕ್ಷ್ಮಿ ಅಂಗಡಿಯಲ್ಲಿ ನಕಲಿ ಪ್ಯಾರಾಚೂಟ್ ಎಣ್ಣೆ ಮಾರಾಟ ವೇಳೆ ಸಿಕ್ಕಿಬಿದ್ದ ಅಂಗಡಿಯ ಮಾಲೀಕ ದಿನೇಶ್ ವಿರುದ್ಧ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ” ಎಂದು ತಿಳಿಸಿದರು.

“ಜಿಲ್ಲಾ ವಿತರಕರ ಸಂಘದ ಮುಖಂಡ ಮರೇಗೌಡ ನಕಲಿ ಪ್ರಾಡಕ್ಟ್ ಖರೀದಿಸಿ ಕಡಿಮೆ ಬೆಲೆಗೆ ವಸ್ತುಗಳನ್ನು ಮಾರಾಟ ಮಾಡುತ್ತಾರೆ.ಜಿ ಎಸ್ ಟಿ ತೆರಿಗೆ ಪಾವತಿ ಮಾಡುವುದಿಲ್ಲ. ಗ್ರಾಹಕರು ಕಡಿಮೆ ದರದಲ್ಲಿ ಸಿಗುವ ವಸ್ತುಗಳನ್ನು ಖರೀದಿಗೆ ಮುಂದಾಗುತ್ತಾರೆ.ಇದರಿಂದ ಗ್ರಾಹಕರು ಮೋಸ ಹೋಗುವುದು ಸಾಮಾನ್ಯವಾಗಿದೆ” ಆರೋಪಿಸಿದರು.

Advertisements

ಈ ಪತ್ರಿಕಾಗೋಷ್ಠಿಯಲ್ಲಿ ಗಿರಿರಾಜ್ ವಿಕ್ರಂ ಸಿಂಹ, ಸಂತೋಷ, ಎರಿಸ್ವಾಮಿ ಸೋಮಶೇಖರ್ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X