ಚಿತ್ರದುರ್ಗ | ನಿಗಮ ಮಂಡಳಿಗೆ ಪರಿಗಣಿಸದೇ ಅನ್ಯಾಯ: ಕಾಂಗ್ರೆಸ್ಸಿನ ಆರ್ ಕೆ ಸರ್ದಾರ್ ಬೆಂಬಲಿಗರ ಆಕ್ರೋಶ

Date:

Advertisements

ʼʼಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ ಹಾಗೂ ಚಿತ್ರದುರ್ಗದ ಹಿರಿಯ ಮುಖಂಡರು ಮುಸ್ಲಿಂ ನಾಯಕರಾದ ಆರ್ ಕೆ ಸರ್ದಾರ್ ರವರಿಗೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತು ಉಳಿಸಿಕೊಳ್ಳದೆ, ಇವರಿಗೆ ಮೋಸ  ಮಾಡುತ್ತಿದೆ. ನಿಗಮ ಮಂಡಳಿ ನೇಮಕಕ್ಕೆ ಪರಿಗಣಿಸದೇ ಅನ್ಯಾಯ ಮಾಡಿದೆʼʼ ಎಂದು ಆರ್ ಕೆ ಸರ್ದಾರ್ ಬೆಂಬಲಿಗರು ಚಿತ್ರದುರ್ಗ ಕಾಂಗ್ರೆಸ್ ಪಕ್ಷದ ಕಛೇರಿ ಮುಂಬಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 10 03 at 3.23.27 PM 1

ಬೆಂಬಲಿಗರೊಬ್ಬರು ಮಾತನಾಡಿ ʼʼಚಿತ್ರದುರ್ಗದ ಮುಖಂಡರಾದ ಆರ್ ಕೆ ಸರ್ದಾರ್ ಕಾಂಗ್ರೆಸ್ ಪಕ್ಷದ ಏಳಿಗೆಗಾಗಿ ಶ್ರಮಿಸುವ ಮೂಲಕ ಸಾಕಷ್ಟು ದುಡಿದಿದ್ದಾರೆ. ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಬದಲು ಕಡೆಗಣಿಸಲಾಗಿದೆ. ಮುಂದೆ ಬರುವ ಪಂಚಾಯಿತಿ ಮತ್ತು ಕೌನ್ಸಿಲರ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆರ್ ಕೆ ಸರ್ದಾರ್ ರವರಿಗೆ ಯಾವುದಾದರೂ ಉನ್ನತಮಟ್ಟದ ನಿಗಮ ಅಧ್ಯಕ್ಷ  ಸ್ಥಾನವನ್ನು ನೀಡಬೇಕುʼʼ ಎಂದು  ಒತ್ತಾಯಿಸಿದರು.

WhatsApp Image 2025 10 03 at 3.23.26 PM 2

ʼʼಸೂಕ್ತ ಸ್ಥಾನಮಾನ ನೀಡದಿದ್ದಲ್ಲಿ ಬೆಂಬಲಿಗರು ಕಾಂಗ್ರೆಸ್ ಪಕ್ಷಕೆ ಸಾಮೂಹಿಕ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದೇವೆ ಹಾಗೂ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನೈತಿಕ ರಾಜಕಾರಣಕ್ಕೆ ಗಾಂಧೀಜಿ ಹಾಗೂ ಶಾಸ್ತ್ರೀಜಿ ಮಾದರಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

WhatsApp Image 2025 10 03 at 3.23.26 PM 1

ಚಿತ್ರದುರ್ಗದ ಪ್ರವಾಸಿ ಬಂಗಲೆಯಿಂದ ಕಾಂಗ್ರೆಸ್ ಪಕ್ಷದ ಕಛೇರಿಯವರೆಗೆ ನಡೆದ ಮೌನ ಪ್ರತಿಭಟನೆಯಲ್ಲಿ ಆರ್ ಕೆ ಸರ್ದಾರ್ ಬೆಂಬಲಿಗರಾದ ರೆಹಮಾನ್ ಖಾನ್, ನಿವೃತ್ತ ಡಿವೈಎಸ್ಪಿ ಮೆಹಬೂಬ್ ಖಾನ್, ದಾದಾ ಪೀರ್ ಭರಮಸಾಗರ, ರೈತ ವಿಭಾಗದ ಅಧ್ಯಕ್ಷ ರಾಘವೇಂದ್ರ , ಓಬಳೇಶ್, ಜಾಕೀರ್ ಹುಸೇನ್, ನಯಾಜ್ ಬಾಬು, ಯುವ ಕಾಂಗ್ರೆಸ್ ಅಸೆಂಬ್ಲಿ ಸೆಕ್ರೆಟರಿ ಎಂ ಡಿ ಯಾಸೀನ್, ಪ್ರಸನ್ನ ಕುಮಾರ್, ಚೇತನ್, ವಸೀಂ, ರಿಯಾಜ್, ಆರ್ ಕೆ ಅಲಿ, ಸಿರಾಜ್, ಯೂಸುಫ್, ನಿಜಾಮ್  ಮುಬಾರಕ್ ಸೇರಿದಂತೆ ಇತರ  ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಪೂ ಎಂಬ ಪವಾಡದ ಅನ್ವೇಷಣೆ…

ಇಂದು ರಾಷ್ಟ್ರಪಿತ ಬಾಪೂ ಜನ್ಮದಿನ. ಆ ನೆನಪಿನಲ್ಲಿ ಸದ್ಯದಲ್ಲೇ ಹೊರಬರಲಿರುವ ಎನ್.ಎಸ್.‌...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

Download Eedina App Android / iOS

X