ಧರ್ಮಸ್ಥಳ ಪ್ರಕರಣ‌ | ಹುಲಿಗೆ ರಕ್ತದ ರುಚಿ ಸಿಕ್ಕಿದೆ, ಬೇರೆ ದೇವಸ್ಥಾನದ ಮೇಲೂ ದಾಳಿ ನಡೆಯಬಹುದು: ಬಿ ಎಲ್‌ ಸಂತೋಷ್

Date:

Advertisements

ಧರ್ಮಸ್ಥಳ ಪ್ರಕರಣ ಗಮನಿಸಿದರೆ ಹುಲಿಗೆ ರಕ್ತದ ರುಚಿ ಸಿಕ್ಕಿದೆ. ಮೂರು ವರ್ಷಗಳ ಹಿಂದೆ ಉಡುಪಿ ಕೃಷ್ಣ ಮಠದ ಮೇಲೂ ಇಂತಹ ಆಕ್ರಮಣ ನಡೆದಿತ್ತು. ಇನ್ನು ಸ್ವಲ್ಪ ದಿನ ತಡೆದರೆ ಬೇರೆ ಬೇರೆ ದೇವಸ್ಥಾನಗಳ ಮೇಲೂ ಆಕ್ರಮಣಗಳು ನಡೆಯಬಹುದು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದ್ದಾರೆ.

ಉಡುಪಿಯ ಬಿಜೆಪಿ ಜಿಲ್ಲಾ ಕಚೇರಿಯ ನೂತನ ಕಟ್ಟಡದ ಭೂಮಿ ಪೂಜೆಯನ್ನು ಶುಕ್ರವಾರ ನೆರವೇರಿಸಿ ಅವರು ಮಾತನಾಡಿ, “ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವುದು ವೈಚಾರಿಕ ಆಕ್ರಮಣ. ನಾವು ಇದನ್ನು ಎದುರಿಸಬೇಕಿದೆ. ಇದೆ ನಮ್ಮ ಮುಂದಿರುವ ಸವಾಲು” ಎಂದು ತಿಳಿಸಿದರು.

“ಈಗಾಗಲೇ ವೈಚಾರಿಕವಾಗಿರುವ ವಾಮಪಂಥೀಯರು, ರಾಜಕೀಯ ಶಕ್ತಿಗಳು ಶಬರಿಮಲೆಯಲ್ಲಿ ಸ್ವಲ್ಪ ರಕ್ತದ ರುಚಿ ನೋಡಿದ್ದಾರೆ. ಈಶ ಆಶ್ರಮದಲ್ಲಿ, ಶನಿ ಶಿಂಗ್ನಾಪುರದಲ್ಲಿ ರಕ್ತದ ರುಚಿ ನೋಡಿದರು. ಧರ್ಮಸ್ಥಳದಲ್ಲೂ ಅದನ್ನೇ ಪ್ರಯತ್ನಿಸುತ್ತಿದ್ದಾರೆ” ಎಂದು ಮಾರ್ಮಿಕವಾಗಿ ನುಡಿದರು.

Advertisements

“ಕುಂಭಮೇಳದ ಬಗ್ಗೆಯೂ ಸಾಕಷ್ಟು ಅಪಪ್ರಚಾರಗಳು ನಡೆದವು. ಆದರೆ ನಂಬಿಕೆ ಗೆದ್ದಿದೆ. ನಮ್ಮ ದೇಶದಲ್ಲಿ ಹಿಂದುತ್ವದ ಬಗ್ಗೆ ಗಟ್ಟಿ ನಂಬಿಕೆ ಇದೆ. ಅಪಪ್ರಚಾರ ಮಾಡಿದಷ್ಟು ಅಲ್ಲಿಗೆ ಹೆಚ್ಚು ಜನರು ಹೋಗಿ ಬಂದರು” ಎಂದರು.

“ಈಗ ನಡೆದಿರುವ ಆಕ್ರಮಣಗಳಿಗೆ ಶಿಕ್ಷೆ ಆಗಬೇಕು. ಜೊತೆಗೆ ನಡೆಯುತ್ತಿರುವ ಅಪಪ್ರಚಾರಗಳಿಗೂ ತಕ್ಕನಾದ ಶಿಕ್ಷೆಯಾಗಲಿ. ದೇಶಕ್ಕೆ, ಸಂಸ್ಕೃತಿಗೆ ಎದುರಾಗುವ ಸವಾಲುಗಳಿಗೆ ನಾವು ಉತ್ತರ ಕೊಡಲು ಸಿದ್ಧ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್‌ಪಾಲ್‌ ಸುವರ್ಣ, ಸುನಿಲ್‌ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಲಿ, ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪ್ರವಾಹದಲ್ಲಿ ಕೊಚ್ಚಿಹೋದ ಬದುಕು, ಕಣ್ಣೀರೊರೆಸುವುದೇ ಸರ್ಕಾರ?

ಅಧಿಕಾರಿಗಳ ಸ್ಥಳ ಪರಿಶೀಲನೆ, ಸಾಂತ್ವನ, ಸ್ಪಂದನೆಗಳು ಕೇವಲ ಕಾಗದಕ್ಕೆ ಸೀಮಿತವಾಗದೆ ರೈತರಿಗೆ...

ಕೊಪ್ಪಳ | ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ; ಎಲ್ಲ 9 ಆರೋಪಿಗಳು ಖುಲಾಸೆ

ಒಂದು ದಶಕದ ಹಿಂದೆ ರಾಜ್ಯದ ರಾಜಕಾರಣದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದ್ದ ವಿದ್ಯಾರ್ಥಿ...

ಸಮೀಕ್ಷೆಯ ಸಮೀಕ್ಷೆ; ನಗರವಾಸಿಗಳ ಜಾತಿ ಮನಸ್ಥಿತಿ ಅನಾವರಣ

ಸಮೀಕ್ಷೆಯ ಸಮೀಕ್ಷೆ ಮಾಡಿದರೆ ಜಾತಿ ವ್ಯವಸ್ಥೆಯ ಕರಾಳತೆ ಅನಾವರಣವಾಗುತ್ತದೆ. ಇಷ್ಟೆಲ್ಲ ತೊಡಕುಗಳ...

Download Eedina App Android / iOS

X