ವಿಧಾನಪರಿಷತ್‌ಗೆ ನಾಮನಿರ್ದೇಶನ ಸದಸ್ಯರಾಗಿ ಉಮಾಶ್ರೀ, ಸೀತಾರಾಮ್‌, ಸುಧಾಮ್‌ ದಾಸ್‌ ಆಯ್ಕೆ

Date:

Advertisements
  • ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂತಿಮ ಮುದ್ರೆ
  • ಅಧಿಕೃತವಾಗಿ ರಾಜ್ಯಪತ್ರದಲ್ಲಿ ಶನಿವಾರ ಆಯ್ಕೆ ಆದೇಶ ಪ್ರಕಟ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್‌ಗೆ ಮಾಜಿ ಸಚಿವರಾದ ಎಂ.ಆರ್. ಸೀತಾರಾಂ, ಉಮಾಶ್ರೀ ಹಾಗೂ ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನು ಅಂತಿಮಗೊಳಿಸಿ, ಮಾಡಿದ್ದ ನಾಮನಿರ್ದೇಶನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂತಿಮ ಮುದ್ರೆ ಒತ್ತಿದ್ದಾರೆ.

ಅಧಿಕೃತವಾಗಿ ರಾಜ್ಯಪತ್ರದಲ್ಲಿ ಶನಿವಾರ ಪ್ರಕಟಗೊಂಡಿದ್ದು, ಎಂ.ಆರ್. ಸೀತಾರಾಂ, ಉಮಾಶ್ರೀ ಹಾಗೂ ಸುಧಾಮ್ ದಾಸ್ ಅವರು ನಾಮನಿರ್ದೇಶನ ಸದಸ್ಯರಾಗಿ ನೇಮಕವಾಗಿದ್ದಾರೆ.

ಕಲಾವಿದರ ಕೋಟಾದಡಿ ಮಾಜಿ ಸಚಿವೆ, ನಟಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದ್ದು, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜ ಸೇವೆ ಕ್ಷೇತ್ರದಿಂದ ಸುಧಾಮ್‌ ದಾಸ್ ಅವರ ಹೆಸರು ಅಂತಿಮಗೊಳಿಸಲಾಗಿದೆ.

Advertisements

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಣದಿಂದ ಸುಧಾಮ್ ದಾಸ್ ಹೆಸರು ಪಾಸಾಗಿದ್ದು, ಸಿದ್ದರಾಮಯ್ಯ ಬಣದಿಂದ ಉಮಾಶ್ರೀ ಹೆಸರು ಅಂತಿಮಗೊಂಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್‌ ಹಸ್ತದ ಚರ್ಚೆ: ನಿರ್ಲಜ್ಜ ರಾಜಕೀಯ ನಡೆಗಳು

ಎಂ ಆರ್ ಸೀತಾರಾಮ್ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅವರ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್ಚಿನ ಮಾಹಿತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಅಲ್ಲದೇ ವಿಧಾನಪರಿಷತ್ ನಾಮನಿರ್ದೇಶನದಲ್ಲಿ ದುಡಿದವರಿಗೆ ಆದ್ಯತೆ ನೀಡಿಲ್ಲ ಎಂಬ ಕೂಗು ಕಾಂಗ್ರೆಸ್‌ನಲ್ಲಿ ಬಲವಾಗಿ ಕೇಳಿ ಬಂದಿತ್ತು. ಮುಂದುವರಿದು ಹೈಕಮಾಂಡ್‌ಗೆ ಕೆಲವು ನಾಯಕರು ಕೂಡ ಪತ್ರ ಬರೆದು, ಅಸಮಾಧಾನ ವ್ಯಕ್ತಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X