ವಿದ್ಯಾರ್ಥಿನಿ ಸಲ್ಲಿಸಿದ್ದ RTI ಅರ್ಜಿಯಲ್ಲಿ ಬೆಳಕಿಗೆ ಬಂದು ಭಾರೀ ಅಕ್ರಮ!

Date:

Advertisements

ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅರ್ಜಿಯಲ್ಲಿ ಬರೋಬ್ಬರಿ 90 ಲಕ್ಷ ರೂ. ಅಕ್ರಮ ನಡೆದಿದೆ ಎಂಬುದು ಮುಂಬೈನಲ್ಲಿ ಬೆಳಕಿಗೆ ಬಂದಿದೆ.

ಘಟ್ಕೋಪರ್ ಮೂಲದ ಬಿಎಂಎಸ್‌ ವಿದ್ಯಾರ್ಥಿನಿ ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ಅವ್ಯವಹಾರ ಬೆಳಕಿಗೆ ಬಂದಿದೆ. 2018ರಲ್ಲಿ ನಡೆದ ಮುಂಬೈನ ಮುಳಂದ್‌ ರಸ್ತೆ ಕಾಮಗಾರಿಯಲ್ಲಿ 90 ಲಕ್ಷ ರೂ. ಅಕ್ರಮ ನಡೆದಿದೆ ಎಂದು ತಿಳಿದುಬಂದಿದೆ.

ಅವ್ಯವಹಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬಾಂಬೆ ಹೈಕೋರ್ಟ್, ಈ ಆರೋಪಗಳ ಕುರಿತು ತನಿಖೆ ನಡೆಸಲು ಹೆಚ್ಚುವರಿ ಆಯುಕ್ತ ಹಾಗೂ ಮುಖ್ಯ ಇಂಜಿನಿಯರ್‌ರನ್ನು ಒಳಗೊಂಡ ಸಮಿತಿಯನ್ನು ರಚಿಸುವಂತೆ ಬೃಹನ್ ಮುಂಬೈ ಮಹಾನಗರ ಪಾಲಿಕೆಗೆ ಆದೇಶಿಸಿದೆ.

ತನ್ನ ಕಾಲೇಜಿನಲ್ಲಿನ ನಾಗರಿಕ ಹಕ್ಕುಗಳು ಮತ್ತು ಮಾಹಿತಿ ಹಕ್ಕು ಕಾಯ್ದೆ ಕುರಿತ ಅಭಿಯಾನದಿಂದ ಅರ್ಜಿ ಸಲ್ಲಿಸಿದ

ವಿದ್ಯಾರ್ಥಿನಿ ಪ್ರೇರಿತಳಾಗಿದ್ದಾಳೆ ಎಂಬುದನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯ, ನಾಗರಿಕ ವಿಚಾರಗಳಲ್ಲಿ ಯುವ ಜನತೆ ಭಾಗಿಯಾಗಬೇಕಾದ ಅಗತ್ಯವನ್ನು ಒತ್ತಿ ಹೇಳಿತು.

ವಿದ್ಯಾರ್ಥಿನಿಯು 2021ರಲ್ಲಿ ಮುಳುಂದ್ ರಸ್ತೆ ಯೋಜನೆ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದಳು. ಈ ಕಾಯ್ದೆಯಡಿ ದೊರೆತಿರುವ ದಾಖಲೆಗಳಿಂದ ಮುಳುಂದ್ ರಸ್ತೆ ಯೋಜನೆಯಲ್ಲಿ ಗಂಭೀರ ಸ್ವರೂಪದ ಅವ್ಯವಹಾರಗಳು ನಡೆದಿರುವುದು ಬೆಳಕಿಗೆ ಬಂದಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುರ್ಗಾ ಪೂಜೆ ವೇಳೆ ಅವಗಢ; ಮಧ್ಯಪ್ರದೇಶದಲ್ಲಿ 14 ಮಂದಿ ಸಾವು

ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ದುರ್ಗಾ ಪೂಜೆ ವೇಳೆ ಖಾಂಡ್ವಾ ಮತ್ತು ಶಹದೋಲ್ ಜಿಲ್ಲೆಗಳಲ್ಲಿ...

ಸೋನಮ್ ವಾಂಗ್‌ಚುಕ್ ಬಂಧನ ಪ್ರಶ್ನಿಸಿ ಪತ್ನಿಯಿಂದ ಸುಪ್ರೀಂ ಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಲಡಾಖ್‌ನ ಪರಿಸರ ಕಾರ್ಯಕರ್ತ ಹಾಗೂ ಶಿಕ್ಷಣ ಸುಧಾರಕ ಸೋನಮ್ ವಾಂಗ್‌ಚುಕ್ ಬಂಧನವನ್ನು...

ಭಾರತ ಅವಮಾನ ಸ್ವೀಕರಿಸದು: ಅಮೆರಿಕಕ್ಕೆ ಪುಟಿನ್‌ ತಿರುಗೇಟು

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಗುರುವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌...

ಇದೇ ಮೊದಲ ಬಾರಿಗೆ ಭಾರತಕ್ಕೆ ತಾಲಿಬಾನ್ ಸಚಿವರ ಭೇಟಿ; ಐತಿಹಾಸಿಕ ಹೆಜ್ಜೆ

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಖಾನ್ ಮುತ್ತಖಿ...

Download Eedina App Android / iOS

X