ಬಾಗಲಕೋಟೆ | ʼಆಶ್ರಯʼದಡಿ 500 ಮನೆ ನಿರ್ಮಾಣಕ್ಕೆ ಸರ್ಕಾರ ಆದೇಶ: ಶಾಸಕ ವಿಜಯಾನಂದ ಕಾಶಪ್ಪನವರ

Date:

Advertisements

ಆಶ್ರಯ ಯೋಜನೆಯಡಿ 500 ಮನೆಗಳ ನಿರ್ಮಾಣಕ್ಕೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟದ ಪುರಸಭೆ ಸುವರ್ಣ ಮಹೋತ್ಸವ ಸಂಭ್ರಮದ ಹಿನ್ನೆಲೆ ಪುರಸಭೆ ಕಚೇರಿಯಲ್ಲಿ ನೂತನವಾಗಿ ನಿರ್ಮಿಸಿದ ಸಭಾ ಭವನ ಉದ್ವಟನೆ, 500 ಆಶ್ರಯ ಫಲಾನುಭವಿಗಳಿಗೆ ಮನೆ ಕಟ್ಟಡದ ಕಾರ್ಯಾದೇಶ ಪತ್ರ, ಬೀದಿ ವ್ಯಾಪಾರಿಗಳ ಗುರುತಿನ ಚೀಟಿ ವಿತರಣೆ ಹಾಗೂ ಹೊನ್ನಾಪುರ ಸ್ಮರಣೆ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳಿಗೆ 3.5 ಲಕ್ಷ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ಫಲಾನುಭವಿಗಳಿಗೆ 2.70 ಲಕ್ಷ ರೂಳನ್ನು ಫಲನುಭವಿಗಳ ಖಾತೆಗೆ ನಾಲ್ಕು ಹಂತದಲ್ಲಿ ಜಮೆ ಮಾಡಲಾಗುವುದು. ಇದಕ್ಕಾಗಿ ಜನಪ್ರತಿನಿಧಿಗಳು ಸೇರಿದಂತೆ ಯಾವುದೇ ಸಿಬ್ಬಂದಿ ಗೆ ಹಣ ಕೊಡುವ ಅವಶ್ಯಕತೆ ಇರುವುದಿಲ್ಲ. 2018ರಿಂದ 2023 ರ ಅವಧಿಯಲ್ಲಿ ಹುನಗುಂದ ಪಟ್ಟಣದ ಅಭಿವೃದ್ಧಿ ಮರೀಚಿಕೆಯಾಗಿತ್ತು. ಅಮೃತ-2 ಯೋಜನೆಡಿಯಲ್ಲಿ 60 ಕೋಟಿ ಮಂಜೂರಾಗಿದೆ. ಈ ಅನುದಾನ ಬಳಸಿ ನಾನಾ ಕಾಮಗಾರಿ ಕೈಗೊಳ್ಳಲಾಗುವುದು” ಎಂದರು.

WhatsApp Image 2025 10 04 at 8.40.17 AM

ಪುರಸಭೆ ಮಾಜಿ ಅಧ್ಯಕ್ಷರ ಜತೆಗೆ ನಾನಾ ಕ್ಷೇರ್ತಾಗಳಲ್ಲಿ ಸಾಧನೆ ಮಾಡಿದ 50 ಜನರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ: ಬಾಗಲಕೋಟೆ | ಭಾರೀ ಮಳೆಯಿಂದ ಈರುಳ್ಳಿ ಬೆಳೆನಾಶ; ಪರಿಹಾರಕ್ಕೆ ಕಿಸಾನ್‌ ಸಂಘ ಆಗ್ರಹ

ಕಾರ್ಯಕ್ರಮದಲ್ಲಿ ಅಮರೇಶ್ವೇರ ದೇವರು, ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಪುರಸಭೆ ಉಪಾಧ್ಯಕ್ಷೆ ರಾಜಮ್ಮ ಬಾದಾಮಿ, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಡುವಿನಮನಿ, ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ, ತಾಪಂ ಮುರಳಿಧರ ದೇಶಪಾಂಡೆ, ಪುರಸಭೆ ಸದಸ್ಯರಾದ ಮೈನುಸಾಬ ಧನ್ನೂರ, ಚಂದ್ರಪ್ಪ ತಳವಾರ, ಬಸವರಾಜ ಗೊನ್ನಾಗಾರ, ಮಹಮ್ಮದ್ ಹುಸೇನ್ ದೊಟಿಹಾಳ, ಪರ್ವೀಜ್ ಖಾಜಿ, ಶರಣಮ್ಮ ಮುಕ್ಕಣ್ಣವರ, ಶಾಂತಮ್ಮ ಮೇಲಿನಮನಿ,ಶಾಂತಪ್ಪ ಹೊಸಮನಿ, ನಾಗರತ್ನ ತಾಳಿಕೋಟಿ, ಶರಣಪ್ಪ ಬೆಲ್ಲದ, ಗಿರಿಜಮ್ಮ ಮಠ, ಕಮಲವ್ವ ಸಂದಿಮನಿ, ಮುಖಾಂಡಾರದ ಸಂಗಣ್ಣ ಗಂಜಿಹಾಳ, ಮಹಾಂತೇಶ ಅವಾರಿ, ಶಿವಾನಂದ ಕಂಠಿ, ಮುತ್ತಣ್ಣ ಕಲಗೋಡಿ, ಬಸವರಾಜ ಗದ್ದಿ, ವಿಶ್ವನಾಥ ಬ್ಯಾಳಿ, ಜಬ್ಬಾರ ಕಲಬುರಗಿ, ಮೆಹಬೂಬ ಸರಕಾವಸ, ಜೈನೂಸಾಬ ಹಗೆದಾಳ, ಸಿದ್ದಪ್ಪ ಹೊಸೂರು, ಮಹಾಂತೇಶ ನಾಡಗೌಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಅರವಿಂದ ಕುಲಕರ್ಣಿ ತಿರುಗೇಟು

ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ, ಎಲ್ಲರೂ ಉನ್ನತ ಶಿಕ್ಷಣ ಅಧ್ಯಯನ ಮಾಡಿದಂಥವರು....

ಶಿರೋಡಾ ಕಡಲತೀರದಲ್ಲಿ ಭೀಕರ ದುರಂತ; ಏಳು ಮಂದಿ ನೀರುಪಾಲು, ಓರ್ವನ ಸ್ಥಿತಿ ಗಂಭೀರ

ಪಕ್ಕದ ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆಯ ಶಿರೋಡಾ ಸಮುದ್ರ ತೀರದಲ್ಲಿ ಭೀಕರ ದುರಂತ...

ಯಾದಗಿರಿ: ಲಂಚಕ್ಕೆ ಬೇಡಿಕೆ; ಲೋಕಾ ಬಲೆಗೆ ಬಿದ್ದ ಬಿಲ್‌ ಕಲೆಕ್ಟರ್

ನಗರಸಭೆಯಲ್ಲಿ ಬಾಕಿ ಉಳಿದ ಇ-ಖಾತಾ ದಾಖಲೆ ನೀಡಲು ಲಂಚ ಬೇಡಿಕೆ ಇಟ್ಟಿದ್ದ...

ಕಲಬುರಗಿ | ಕಾರಾಗೃಹದಲ್ಲಿ ಕೈದಿಗಳ ಗಲಾಟೆ; ಒಬ್ಬನಿಗೆ ಗಂಭೀರ ಗಾಯ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಧ್ಯೆ ಗಲಾಟೆ ನಡೆದು, ಒಬ್ಬ ಕೈದಿ...

Download Eedina App Android / iOS

X