ಬೀದರ್‌ | ಸಾಲಬಾಧೆ : ಮನೆಯಲ್ಲಿ ನೇಣಿಗೆ ಶರಣಾದ ರೈತ

Date:

Advertisements

ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಟಗುಪ್ಪಾ ತಾಲ್ಲೂಕಿನ ಉಡಬಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಮಲ್ಲಿಕಾರ್ಜುನ ತಿಪ್ಪಣ್ಣಾ (38) ಮೃತ ರೈತ. ಮಲ್ಲಿಕಾರ್ಜನ ಅವರಿಗೆ ತಂದೆಯ ಹೆಸರಿನಲ್ಲಿ 2.25 ಎಕರೆ ಜಮೀನು ಇತ್ತು. ಅಲ್ಲದೆ ಬೇರೆಯವರ ಜಮೀನು ಲಾವಣಿಗೆ ಪಡೆದು ಕೃಷಿ ಮಾಡುತ್ತಿದ್ದರು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಬೆಳೆದಿದ್ದ ಬೆಳೆಗಳು ಜಲಾವೃತಗೊಂಡು ನಾಶವಾಗಿತ್ತು ಎಂದು ತಿಳಿದು ಬಂದಿದೆ.

ಕೃಷಿಗಾಗಿ ಮಾಡಿರುವ ಸಾಲ ತೀರಿಸುವುದು ಹೇಗೆ ಎಂದು ಚಿಂತೆಗೀಡಾಗಿ ಜಮೀನಿನಲ್ಲಿ ಇರುವ ಮನೆಯಲ್ಲಿ ತಮ್ಮ ಅಂಗಿಯಿಂದ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿಗಾಗಿ ನಿರ್ಣಾ ಗ್ರಾಮದ ಎಸ್‌ಬಿಐ ಬ್ಯಾಂಕ್‌ ನಲ್ಲಿ 1.50 ಲಕ್ಷ, ಇತರೆ ಕಡೆ ಕೈಸಾಲ ಸೇರಿ ಒಟ್ಟು 4-5 ಲಕ್ಷ ಸಾಲ ಮಾಡಿಕೊಂಡಿದ್ದರು ಎಂದು ಮೃತರ ಸಹೋದರ ಸತೀಷ ʼಈದಿನʼಕ್ಕೆ ತಿಳಿಸಿದ್ದಾರೆ.

ಈ ಸಂಬಂಧ ಮೃತರ ಪತ್ನಿ ಮಂಗಲಾ ಅವರು ನೀಡಿದ ದೂರಿನ ಮೇರೆಗೆ ಚಿಟಗುಪ್ಪ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಅರವಿಂದ ಕುಲಕರ್ಣಿ ತಿರುಗೇಟು

ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ, ಎಲ್ಲರೂ ಉನ್ನತ ಶಿಕ್ಷಣ ಅಧ್ಯಯನ ಮಾಡಿದಂಥವರು....

ಶಿರೋಡಾ ಕಡಲತೀರದಲ್ಲಿ ಭೀಕರ ದುರಂತ; ಏಳು ಮಂದಿ ನೀರುಪಾಲು, ಓರ್ವನ ಸ್ಥಿತಿ ಗಂಭೀರ

ಪಕ್ಕದ ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆಯ ಶಿರೋಡಾ ಸಮುದ್ರ ತೀರದಲ್ಲಿ ಭೀಕರ ದುರಂತ...

ಯಾದಗಿರಿ: ಲಂಚಕ್ಕೆ ಬೇಡಿಕೆ; ಲೋಕಾ ಬಲೆಗೆ ಬಿದ್ದ ಬಿಲ್‌ ಕಲೆಕ್ಟರ್

ನಗರಸಭೆಯಲ್ಲಿ ಬಾಕಿ ಉಳಿದ ಇ-ಖಾತಾ ದಾಖಲೆ ನೀಡಲು ಲಂಚ ಬೇಡಿಕೆ ಇಟ್ಟಿದ್ದ...

ಕಲಬುರಗಿ | ಕಾರಾಗೃಹದಲ್ಲಿ ಕೈದಿಗಳ ಗಲಾಟೆ; ಒಬ್ಬನಿಗೆ ಗಂಭೀರ ಗಾಯ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಧ್ಯೆ ಗಲಾಟೆ ನಡೆದು, ಒಬ್ಬ ಕೈದಿ...

Download Eedina App Android / iOS

X