ಗುಜರಾತ್ ಚುನಾವಣೆ | ಬಿಜೆಪಿ ₹209 ಕೋಟಿ, ಕಾಂಗ್ರೆಸ್ ₹103 ಕೋಟಿ ಖರ್ಚು ಮಾಡಿವೆ

Date:

Advertisements

2022ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 209 ಕೋಟಿ ರೂಪಾಯಿ ಖರ್ಚು ಮಾಡಿದೆ. ಈ ಮೊತ್ತವು ಕಾಂಗ್ರೆಸ್ ಖರ್ಚು ಮಾಡಿದ್ದಕ್ಕಿಂತ ದುಪ್ಪಟ್ಟಿದೆ ಎಂದು ಚುನಾವಣಾ ಆಯೋಗಕ್ಕೆ ಪಕ್ಷಗಳು ಸಲ್ಲಿಸಿದ ವೆಚ್ಚದ ವರದಿಯಲ್ಲಿ ತಿಳಿದುಬಂದಿದೆ.

ಚುನಾವಣಾ ಆಯೋಗವು ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಎಲ್ಲ ಪಕ್ಷಗಳ ಚುನಾವಣಾ ವೆಚ್ಚದ ಮಾಹಿತಿಯನ್ನು ಪ್ರಕಟಿಸಿದೆ. ಬಿಜೆಪಿಯು ಒಟ್ಟು 209.97 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿರುವುದಾಗಿ ಹೇಳಿದೆ. ಅದರಲ್ಲಿ 163.77 ಕೋಟಿ ರೂಪಾಯಿಗಳನ್ನು ‘ಪಕ್ಷದ ಪ್ರಚಾರ’ಕ್ಕಾಗಿಯೇ ವೆಚ್ಚ ಮಾಡಿದ್ದಾಗಿ ಹೇಳಿಕೊಂಡಿದೆ.

ಪಕ್ಷವು ತನ್ನ ಅಭ್ಯರ್ಥಿಗಳ ಅಪರಾಧಗಳಿಗೆ ಸಂಬಂಧಿಸಿದ ಪೂರ್ವಾಪರಗಳ ಪ್ರಚಾರಕ್ಕಾಗಿ 5.15 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. (ಅಭ್ಯರ್ಥಿಗಳ ವಿರುದ್ಧದ ಪ್ರಕರಣಗಳನ್ನು ಪ್ರಚಾರ ಪಡಿಸುವುದು ಸುಪ್ರೀಂ ಕೋರ್ಟ್ ಆದೇಶಗಳು ಮತ್ತು ಇಸಿ ನಿರ್ದೇಶನಗಳ ಪ್ರಕಾರ ಕಡ್ಡಾಯವಾಗಿದೆ)

Advertisements

ಇನ್ನು ಕಾಂಗ್ರೆಸ್‌ 103.26 ಕೋಟಿ ರೂಪಾಯಿಯನ್ನು ಚುನಾವಣೆಗೆ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದೆ. ಅಲ್ಲದೆ, ರಾಜ್ಯದಲ್ಲಿ ಮೂರನೇ ಪಕ್ಷವಾಗಿ ಹೊರಹೊಮ್ಮಿದ್ದ ಎಎಪಿಯು 33.8 ಕೋಟಿ ರೂಪಾಯಿಯನ್ನು ಖರ್ಚು ಮಾಡಿದ್ದಾಗಿ ಹೇಳಿದೆ.

ಗುಜರಾತ್ ವಿಧಾನಸಭೆಯ ಒಟ್ಟು 182 ಸ್ಥಾನಗಳ ಪೈಕಿ ಬಿಜೆಪಿ 156 ಸ್ಥಾನಗಳನ್ನು ಗೆದ್ದು, ಬಾರೀ ಬಹುಮತದ ಸರ್ಕಾರ ರಚಿಸಿದೆ. ಉಳಿದಂತೆ ಕಾಂಗ್ರೆಸ್‌ ಕೇವಲ17 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಎಎಪಿ 5 ಮತ್ತು ಇತರರು 4 ಸ್ಥಾನಗಳಲ್ಲಿ ಗೆದ್ದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X