ತುಮಕೂರು | ಸಮೀಕ್ಷೆ ವೇಳೆ ಮುಸ್ಲಿಂ ಶಿಕ್ಷಕಿ ವಿರುದ್ಧ ಗಲಾಟೆ : ಕಾನೂನು ಕ್ರಮಕ್ಕೆ ಮುಸ್ಲಿಂ ನೌಕರರ ಸಂಘ ಒತ್ತಾಯ

Date:

Advertisements

  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ರ ಗಣತಿ ಕಾರ್ಯದಲ್ಲಿ ತೊಡಗಿರುವ ಶಿಕ್ಷಕರಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಗಲಾಟೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ತುಮಕೂರು ಜಿಲ್ಲಾಧಿಕಾರಿಗೆ ಮನವಿ ಪತ್ರನೀಡಿದೆ. 

ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಾಯಿದ್ ಅಫ್ರಿದಿ ಅವರ ನಿಯೋಗ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರನ್ನು ಭೇಟಿಯಾಗಿ ಕಾನೂನು ಕ್ರಮಕ್ಕೆ ಮನವಿ ಮಾಡಲಾಗಿದೆ.

ಅ.2 ರಂದು ತುಮಕೂರು ಹೊರವಲಯದ ವಾರ್ಡ್ ನಂಬರ್ 6 ರ ಭೀಮಸಂದ್ರಪಾಳ್ಯದಲ್ಲಿ  ಸಮೀಕ್ಷೆ ಮಾಡುತ್ತಿರುವ ಸಮಯದಲ್ಲಿ ಮಾಹಿತಿ ಕೇಳಿದ ಶಿಕ್ಷಕರಿಗೆ “ಧರ್ಮ ನಿಂದನೆ” ಮಾಡಿದಲ್ಲದೆ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿ, ಗಲಾಟೆ ಮಾಡಿ ಸಮೀಕ್ಷೆಗೆ ಅಡ್ಡಿಮಾಡಲಾಗಿದೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಯಿಂದ ಸಮೀಕ್ಷೆ ಮೇಲು ಪರಿಣಾಮ ಬೀರಲಿದೆ ಹಾಗಾಗಿ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸೂಕ್ತ ಕಾನೂನು ಕ್ರಮ ಕೈಗೊಂಡು, ಗಣತಿಯಲ್ಲಿ ತೊಡಗಿರುವ ಶಿಕ್ಷಕರಿಗೆ ಹಾಗೂ ವಿಶೇಷವಾಗಿ ‘ಮಹಿಳಾ ಶಿಕ್ಷಕಿಯರಿಗೆ ಸೂಕ್ತ ರಕ್ಷಣೆಯನ್ನು” ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ  ಸಂಘ ಒತ್ತಾಯಿಸಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮಳೆಹಾನಿಗೆ ಒಳಗಾದ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸುವಂತೆ ಡಿಸಿ ಸೂಚನೆ

ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಾದ ಅತಿಹೆಚ್ಚು ಮಳೆ ಪ್ರದೇಶಗಳ ಪೈಕಿ...

ಉಡುಪಿ | ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ ; ಕೋಟ್ಯಂತರ ರೂ. ನಷ್ಟ

ಉಡುಪಿ ನಗರಸಭೆಗೆ ಸಂಬಂಧಿಸಿದ ಅಲೆವೂರು ಗ್ರಾಪಂ ವ್ಯಾಪ್ತಿಯ ಕರ್ವಾಲುವಿನಲ್ಲಿರುವ ಘನ ತ್ಯಾಜ್ಯ...

ವಿಜಯಪುರ | ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ ಚುನಾವಣೆ; ಅ.12ರಂದು ಮತದಾನ

ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಗೆ...

ವಿಜಯಪುರ | ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಅರವಿಂದ ಕುಲಕರ್ಣಿ ತಿರುಗೇಟು

ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ, ಎಲ್ಲರೂ ಉನ್ನತ ಶಿಕ್ಷಣ ಅಧ್ಯಯನ ಮಾಡಿದಂಥವರು....

Download Eedina App Android / iOS

X