ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆವವರೆಗೂ ಜೈಲಿನಲ್ಲಿರಲು ಸಿದ್ದ: ಸೋನಂ ವಾಂಗ್ಚುಕ್

Date:

Advertisements

ಇತ್ತೀಚೆಗೆ ಲಡಾಖ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರ ಹತ್ಯೆಯಾಗಿದೆ. ಆ ಹತ್ಯೆಗಳ ಕುರಿತು ಸ್ವತಂತ್ರ ನ್ಯಾಯಾಂಗ ತನಿಖೆ ಆರಂಭವಾಗುವವರೆಗೂ ನಾನು ಜೈಲಿನಲ್ಲಿರಲು ಸಿದ್ದನಿದ್ದೇನೆ ಎಂದು ಹವಾಮಾನ ಹೋರಾಟಗಾರ, ಲಡಾಖ್ ಜನರಿಗಾಗಿ ಹೊರಾಟ ನಡೆಸುತ್ತಿರುವ ಸೋನಂ ವಾಂಗ್ಚುಕ್ ಹೇಳಿದ್ದಾರೆ.

ಲಡಾಖ್ ಹಿಂಸಾಚಾರಕ್ಕೆ ಪ್ರಚೊದನೆ ನೀಡಿದ ಆರೋಪದ ಮೇಲೆ ಸೋನಮ್ ವಾಂಗ್ಚುಕ್ ಅವರನ್ನು ಸೆಪ್ಟೆಂಬರ್ 26ರಂದು ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿದೆ. ಜೋಧ್‌ಪುರ ಜೈಲಿನಲ್ಲಿರುವ ಅವರು, ಜೈಲಿನಿಂದಲೇ ಸಂದೇಶ ಕಳಿಸಿದ್ದಾರೆ.

“ನಮ್ಮ ನಾಲ್ಕು ಜನರ ಹತ್ಯೆ ಕುರಿತು ನ್ಯಾಯಾಂಗ ತನಿಖೆಯನ್ನು ನಡೆಸಬೇಕು. ತನಿಖೆಗೆ ಆದೇಶಿಸುವವರೆಗೂ ಜೈಲಿನಲ್ಲಿಯೇ ಇರಲು ನಾನು ಸಿದ್ಧನಿದ್ದೇನೆ. ಲಡಾಖ್‌ಗೆ 6ನೇ ಪರಿಚ್ಛೇಧ ಸ್ಥಾನಮಾನ ನೀಡಬೇಕು, ರಾಜ್ಯತ್ವಕ್ಕಾಗಿ ನಮ್ಮ ಪ್ರಾಮಾಣಿಕವಾದ ಸಾಂವಿಧಾನಿಕ ಬೇಡಿಕೆಗಳ ವಿಷಯದಲ್ಲಿ ನಾನು ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ),ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಹಾಗೂ ಲಡಾಖ್‌ನ ಜನರೊಂದಿಗೆ ದೃಢವಾಗಿ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.

Advertisements

“ಲಡಾಖ್ ಹೋರಾಟ ಮುಂದುವರೆಯಲಿದೆ. ರಾಜ್ಯದ ಜನರು ಶಾಂತಿ ಮತ್ತು ಏಕತೆಯನ್ನು ಕಾಯ್ದುಕೊಂಡು, ಹೋರಾಟ ಮುನ್ನಡೆಸಬೇಕು” ಎಂದು ಜನರಲ್ಲಿ ಕರೆಕೊಟ್ಟಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೂಕುಸಿತ – 18 ಮಂದಿ ದುರ್ಮರಣ

ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು...

ವರದಕ್ಷಿಣೆ ದೌರ್ಜನ್ಯ | ಯೋಗಿ ರಾಜ್ಯದಲ್ಲಿ ಗರ್ಭಿಣಿಯನ್ನು ಹೊಡೆದು ಕೊಂದ ದುರುಳ ಕುಟುಂಬ

ರಾಮ ರಾಜ್ಯವನ್ನು ನಿರ್ಮಾಣ ಮಾಡುತ್ತೇವೆಂದು ಅಧಿಕಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ...

ಮುಂಬೈ | ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ರಿಯಲ್ ಎಸ್ಟೇಟ್ ಏಜೆಂಟ್ ಬಂಧನ

ಮುಂಬೈನ ಪೂರ್ವ ಅಂಧೇರಿಯ ಚಕಾಲಾ ಬಳಿಯ ವಸತಿ ಕಟ್ಟಡವೊಂದರಲ್ಲಿ ಶನಿವಾರ ಮಧ್ಯಾಹ್ನ...

ಅಮೆರಿಕ: ಡೆಂಟನ್‌ನಲ್ಲಿ ಭಾರತೀಯ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನ ಡೆಂಟನ್‌ನಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ....

Download Eedina App Android / iOS

X