ವಿಜಯಪುರ | ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜಿಗೆ ವಿರೋಧ; 18ನೇ ದಿನಕ್ಕೆ ಕಾಲಿಟ್ಟ ಧರಣಿ

Date:

Advertisements

ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪಿಪಿಪಿ ಮಾದರಿ ವಿರೋಧಿಸಿ, ಸಂಪೂರ್ಣ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ 18ನೇ ದಿನ ಪೂರೈಸಿದೆ. ಸತ್ಯಾಗ್ರಹದಲ್ಲಿ ಜಿಲ್ಲೆಯ ಕವಿಗಳು, ಪ್ರತಿರೋಧ ಕವಿಗೋಷ್ಠಿ ನಡೆಸುವ ಮೂಲಕ ಜಿಲ್ಲೆಗೆ ಪೂರ್ಣ ಪ್ರಮಾಣದ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಕವಿತೆ ಓದುವ ಮೂಲಕ ಪ್ರತಿರೋಧ ಕವಿ ಗೋಷ್ಠಿಗೆ ಚಾಲನೆ ನೀಡಿದ ಸಾಹಿತಿ ಪರಶುರಾಮ ಶಿವಶರಣ ಮಾತನಾಡಿ, “ಕೈ ಬಿಡದಿದ್ದರೆ ಪಿಪಿಪಿ ವೈದ್ಯಕೀಯ ಕಾಲೇಜಿನ ಪಿಂಡ, ರಾಜಕಾರಣಿಗಳ ಬುಡಕ್ಕೆ ತಾಗುವುದು ಪ್ರಮುಖರ ಹೋರಾಟದ ಕೆಂಡ” ಎಂಬ ಕವಿತೆ ವಾಚಿಸುವ ಮೂಲಕ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿದರು.

WhatsApp Image 2025 10 06 at 7.27.31 AM

ಪ್ರೊ. ಅಡವಿ ಸ್ವಾಮಿ ಕೊಳಮಲಿ, ನಿಂಗೊಂಡಪ್ಪ ರೋಡಗಿ, ದೀಪಕ ಶಿಂದೆ, ಲಲಿತ ಬಿಜ್ಜರಗಿ, ಭರತ್ ಕುಮಾರ್ ಎಚ್ ಟಿ, ಗಂಗೂಬಾಯಿ ಉಳ್ಳಾಗಡ್ಡಿ, ರಮೇಶ ಜೋಗುರ ಸೇರಿದಂತೆ 20ಕೂ ಅಧಿಕ ಕವಿಗಳು ಕವಿತೆಗಳನ್ನು ವಾಚಿಸಿ ಜಿಲ್ಲೆಗೆ ಪೂರ್ಣ ಪ್ರಮಾಣದ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿದರು.

ಇದನ್ನೂ ಓದಿ: ವಿಜಯಪುರ | ನೆರೆ ಹಾವಳಿ ವೀಕ್ಷಿಸಿದ ಬಿಜೆಪಿ ತಂಡ

ಹೋರಾಟಗಾರರಾದ ಅನಿಲ ಹೊಸಮನಿ, ಭಗವಾನ ರೆಡ್ಡಿ, ಮಲ್ಲಿಕಾರ್ಜುನ ಯಂಡಿಗೇರಿ, ಅರವಿಂದ ಕುಲಕರಣಿ, ಮಲ್ಲಿಕಾರ್ಜುನ ಕೆಂಗನಾಳ, ಮಲ್ಲಿಕಾರ್ಜುನ ಎಚ್ ಟಿ,ಸಿದ್ದಲಿಂಗ ಬಾಗೇವಾಡಿ, ಗೀತಾಎಚ್ ಟಿ, ಅಕ್ಷಯ ಕುಮಾರ ಅಜಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X