2 ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ, ನ.14 ಕ್ಕೆ ಮತ ಎಣಿಕೆ

Date:

Advertisements

ಬಿಹಾರದ ವಿಧಾನಸಭೆ ಚುನಾವಣೆ ನ. 6 ಮತ್ತು ನ. 11 ರಂದು 2 ಹಂತಗಳಲ್ಲಿ ನಡೆಯಲಿದ್ದು, ಮತ ಎಣಿಕೆ ನವೆಂಬರ್‌ 14 ರಂದು ನಡೆಯಲಿದೆ.

ಈ ಕುರಿತು ದೆಹಲಿಯಲ್ಲಿ ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಬಿಹಾರ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 6 ರಂದು ಮೊದಲ ಹಂತದ ಮತದಾನ ಮತ್ತು ನವೆಂಬರ್ 11ರಂದು ಎರಡನೇ ಹಂತದ ಮತದಾನ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ನಂತರ ಮೊದಲ ಬಾರಿಗೆ ಬಿಹಾರ ಚುನಾವಣೆ ನಡೆಯುತ್ತಿದೆ. ಈ ಪರಿಷ್ಕರಣೆಯಲ್ಲಿ 68.5 ಲಕ್ಷ ಮತದಾರರ ಹೆಸರನ್ನು ಡಿಲಿಟ್ ಮಾಡಲಾಗಿದೆ ಮತ್ತು 21.5 ಲಕ್ಷ ಹೊಸ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಬಿಹಾರ ಮತದಾರರ ಪಟ್ಟಿಗಳಿಗೆ ಸಂಬಂಧಿತ ಆಕ್ಷೇಪಣೆಗಳಿಗೆ ಇನ್ನೂ ಅವಕಾಶವಿದೆ ಎಂದು ಜ್ಞಾನೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ 243 ಕ್ಷೇತ್ರಗಳಿವೆ. ಅವುಗಳಲ್ಲಿ 38 ಪರಿಶಿಷ್ಟ ಜಾತಿ ಮತ್ತು ಎರಡು ಪರಿಶಿಷ್ಟ ಪಂಗಡ ಕ್ಷೇತ್ರಗಳು ಸೇರಿವೆ. ಬಿಹಾರ ವಿಧಾನಸಭೆಯ ಅವಧಿ ನವೆಂಬರ್ 22, 2025ರಂದು ಕೊನೆಗೊಳ್ಳಲಿದೆ.

ಅಕ್ಟೋಬರ್ 10ರಂದು ಮೊದಲನೇ ಹಂತಕ್ಕೆ ಹಾಗೂ ಅಕ್ಟೋಬರ್ 13ರಂದು ಎರಡನೇ ಹಂತಕ್ಕೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 17 (ಮೊದಲನೇ ಹಂತ) ಹಾಗೂ ಅಕ್ಟೋಬರ್ 20 (ಎರಡನೇ ಹಂತ) ಕೊನೆಯ ದಿನಾಂಕವಾಗಿದೆ.

ಬಿಹಾರದಲ್ಲಿ ಒಟ್ಟು 7.42 ಕೋಟಿ ಮತದಾರರಿದ್ದು, ಈ ಪೈಕಿ 3.9 ಕೋಟಿ ಪುರುಷ ಮತ್ತು 3.5 ಕೋಟಿ ಮಹಿಳಾ ಮತದಾರರಿದ್ದಾರೆ. ಹೊಸದಾಗಿ ಸೇರಿಸಲ್ಪಟ್ಟ ಮತದಾರರಿಗೆ ಮತದಾರರ ಗುರುತಿನ ಚೀಟಿ ನೀಡಲಾಗುವುದು. ಮತದಾರರ ಚೀಟಿಯಲ್ಲಿ ಮಾಹಿತಿ ಬದಲಾವಣೆಗೆ 15 ದಿನಗಳ ಕಾಲಾವಕಾಶ ನೀಡಲಾಗುವುದು. ಶೇ. 100ರಷ್ಟು ಮತದಾನ ಕೇಂದ್ರದಲ್ಲಿ ವೆಬ್‌ ಕಾಸ್ಟಿಂಗ್‌ಗೆ ಅವಕಾಶ ಕಲ್ಪಿಸಲಾಗುವುದು. ಮತಗಟ್ಟೆಯ ಒಳಗೆ ಮತದಾರರು ಮೊಬೈಲ್‌ ಫೋನ್‌ ಕೊಂಡೊಯ್ಯುವಂತಿಲ್ಲ. ಮತದಾನದ ಬಳಿಕ ಸಿಬ್ಬಂದಿಯಿಂದ ಮೊಬೈಲ್‌ ಪಡೆಯತಕ್ಕದ್ದು ಎಂದು ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.

ಬಿಹಾರ ಚುನಾವಣೆಯ ಮುಖ್ಯಾಂಶಗಳು:

243 ವಿಧಾನಸಭೆ ಕ್ಷೇತ್ರಗಳು

ಒಟ್ಟು ಮತದಾರರು: 7.43 ಕೋಟಿ

ಹೊಸ ಮತದಾರರು: 14 ಲಕ್ಷ

ಮತಗಟ್ಟೆಗಳು: 90,712

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವರದಕ್ಷಿಣೆ ದೌರ್ಜನ್ಯ | ಯೋಗಿ ರಾಜ್ಯದಲ್ಲಿ ಗರ್ಭಿಣಿಯನ್ನು ಹೊಡೆದು ಕೊಂದ ದುರುಳ ಕುಟುಂಬ

ರಾಮ ರಾಜ್ಯವನ್ನು ನಿರ್ಮಾಣ ಮಾಡುತ್ತೇವೆಂದು ಅಧಿಕಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ...

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆವವರೆಗೂ ಜೈಲಿನಲ್ಲಿರಲು ಸಿದ್ದ: ಸೋನಂ ವಾಂಗ್ಚುಕ್

ಇತ್ತೀಚೆಗೆ ಲಡಾಖ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರ ಹತ್ಯೆಯಾಗಿದೆ. ಆ ಹತ್ಯೆಗಳ ಕುರಿತು...

ಮುಂಬೈ | ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ರಿಯಲ್ ಎಸ್ಟೇಟ್ ಏಜೆಂಟ್ ಬಂಧನ

ಮುಂಬೈನ ಪೂರ್ವ ಅಂಧೇರಿಯ ಚಕಾಲಾ ಬಳಿಯ ವಸತಿ ಕಟ್ಟಡವೊಂದರಲ್ಲಿ ಶನಿವಾರ ಮಧ್ಯಾಹ್ನ...

ಅಮೆರಿಕ: ಡೆಂಟನ್‌ನಲ್ಲಿ ಭಾರತೀಯ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನ ಡೆಂಟನ್‌ನಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ....

Download Eedina App Android / iOS

X