ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

Date:

Advertisements

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ ತಾಯಿ- ಶಿಶುಮರಣ ಹೆಚ್ಚಾಗುತ್ತಿರುವುದನ್ನು ಖಂಡಿಸಿ ರಾಜ್ಯ ಮಹಿಳಾ ಒಕ್ಕೂಟ(ಕುಟುಂಬ ಬಲವರ್ಧನೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಚಳವಳಿ)ದ ವತಿಯಿಂದ ಅನಿರ್ಧಿಷ್ಠಾವಧಿ ಧರಣಿ ಆರಂಭಿಸಿದ್ದಾರೆ.

ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಅಣಕು ಗರ್ಭಿಣಿ ಹಾಗೂ ನವಜಾತ ಶಿಶುವಿನ ಪ್ರತಿಕೃತಿಗೆ ಹೂವಿನ ಹಾರ ಹಾಕಿ ಸತ್ತಂತೆ ಬಿಂಬಿಸಿ ಶೋಕ ವ್ಯಕ್ತಪಡಿಸಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲೆಯ ಲಿಂಗಸುಗೂರು, ರಾಯಚೂರು ತಾಲೂಕು, ಮಾನ್ವಿ ಸೇರಿ ಹಲವೆಡೆ ಬಾಣಂತಿಯರು, ನವಜಾತ ಶಿಶು ಮೃತಪಟ್ಟ ಕುಟುಂಬಸ್ಥರು ಭಾಗವಹಿಸಿ ಸರ್ಕಾರದ, ಅಧಿಕಾರಿಗಳ ನಿಷ್ಕಾಳಜಿ, ಅವ್ಯವಸ್ಥೆಯಿಂದಾಗಿ ಜೀವಹಾನಿಗಳಾಗಿದೆ ಎಂದು ಅಳುತ್ತಾ ವ್ಯವಸ್ಥೆಯ ವಿರುದ್ದ ತಮ್ಮ ಅಳಲು ವ್ಯಕ್ತಪಡಿಸಿದ್ದು ಮನಕಲುಕುವಂತಿತ್ತು.

75050

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮೌಕ್ಷಮ್ಮ ಮಸ್ಕಿ ರಾಯಚೂರು ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಿಶೋರಿಯರಲ್ಲಿ, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ತಾಯಿ ಮರಣ ಹಾಗೂ ಶಿಶು ಮರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಯಚೂರು ಜಿಲ್ಲೆಯಲ್ಲಿ ಅತಿಹೆಚ್ಚು ಶಿಶುಮರಣಗಳು ಹೆಚ್ಚಾಗಿದೆ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳ ಮೇಲುಸ್ತುವಾರಿ ವಹಿಸಿದ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ. ಮಕ್ಕಳ ಹಾಗೂ ಮಹಿಳೆಯರ ಅಪೌಷ್ಟಿಕತೆ ನಿವಾರಣೆಗಾಗಿ ಮಹಿಳಾ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳಿದ್ದರೂ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ ಎಂದು ಪ್ರತಿಭಟನಾನಿರತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 30 ಲಕ್ಷಕ್ಕಿಂತ ಹೆಚ್ಚು ಮಹಿಳೆಯರು ರಕ್ತ ಹೀನತೆ ಹಾಗೂ ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿದ್ದಾರೆ ರಾಯಚೂರು ಜಿಲ್ಲೆಯಲ್ಲಿ ಅಪೌಷ್ಟಿಕತೆ, ಶಿಶುಮರಣ ಹಾಗೂ ತಾಯಿ ಮರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಈ ಬಗ್ಗೆ 2025ರ ಜನವರಿ 25 ರಂದು ರಾಯಚೂರಿನ ಜಿಲ್ಲಾ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಅನಿರ್ಧಿಷ್ಠಾವಧಿ ಧರಣಿ ನಡೆಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಸ್ಪಂದಿಸಿ ನಾವು ಈಗಾಗಲೇ ಅಪೌಷ್ಟಿಕತೆ ನಿವಾರಣೆಗೆ ಪ್ರಯೋಗಿಕ ಯೋಹನೆ ಅನುಷ್ಠಾನಕ್ಕೆ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದರೂ ಆದರೆ ಯಾವುದೇ ಕಾರ್ಯಕ್ರಮ ಜಾರಿಯಾಗಿಲ್ಲ ಎಂದು ದೂರಿದರು.

75064

ಕಳೆದ ಎರಡು ವರ್ಷಗಳಿಂದ ಅನೇಕ ಹೋರಾಟ ಮಾಡಿ ಈ ಭಾಗದ ಸಚಿವರು, ಶಾಸಕರು ಕಾಲಮಿತಿಯಲ್ಲಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರೂ ಕಾರ್ಯರೂಪಕ್ಕೆ ಬರಲಿಲ್ಲ. ತಾಯಿ ಹಾಗೂ ಶಿಶುಮರಣ ಹೆಚ್ಚಾಗುತ್ತಲೇ ಇದೆ ಸರ್ಕಾರ ಕೂಡಲೇ ನಿರ್ಧಿಷ್ಟ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಧರಣಿಯಲ್ಲಿ ಮಹಿಳಾ ಒಕ್ಕೂಟದ ಸಂಚಾಲಕಿ ವಿದ್ಯಾ ಪಾಟೀಲ್, ಶಾಂಭವಿ, ರೇಣುಕಾ, ಗುರುರಾಜ, ಮಾರೆಮ್ಮ, ಬಸವರಾಜ, ಈರಮ್ಮ, ಗಿರಿಜಮ್ಮ , ಪಾರ್ವತಿ ಸಿರವಾರ, ಲಕ್ಷ್ಮೀ ಹಲ್ಕಾವಾಟಗಿ ಮತ್ತಿತರರು ಪಾಲ್ಗೊಂಡಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

ಮೈಸೂರು | ಮಾಹಿತಿ ಹಕ್ಕು ಅನುಷ್ಠಾನ ಸಭೆ; ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ

ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಹಿತಿ ಹಕ್ಕು ಅನುಷ್ಠಾನ ಕುರಿತಾಗಿ ನಡೆದ...

Download Eedina App Android / iOS

X