ಕಲಬುರಗಿ | ರೋಗಿಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್‌ ಆಗ್ರಹ

Date:

Advertisements

ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದಿಸದೇ, ಔಷಧಿಗಳನ್ನು ಸಮಪರ್ಕವಾಗಿ ನೀಡದೆ ರೋಗಿಗಳನ್ನು ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್‌ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಮನವಿ ಸಲ್ಲಿದ್ದಾರೆ.

ಅನಾರೋಗ್ಯ ಕಾರಣ ವಿದ್ಯಾರ್ಥಿ ಆಕಾಶ್ ಸಿಂಧನಮಡು ಎಂಬುವವರು ಸರ್ಕಾರಿ ಆಸ್ಪತ್ರೆಗೆ ಹೋಗಿದ್ದ, ಸಂದರ್ಭದಲ್ಲಿ ವೈದ್ಯರು ಕೆಲವು ಔಷಧಿಗಳನ್ನು ರಶೀದಿಯಲ್ಲಿ ಬರೆದು ನೀಡುತ್ತಾರೆ. ಈ ಔಷಧಿಗಳು ಸರ್ಕಾರಿ ಮೆಡಿಕಲ್‌ನಲ್ಲಿ ಇಲ್ಲವೆಂದು ತಿಳಿದ ಹಿನ್ನೆಲೆ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ.ನಾಗರಾಜ ಮನ್ನೆಯವರು ಬಳಿ ಔಷಧಿಯ ಬಗ್ಗೆ ವಿಚಾರಿಸಿದಾಗ ನನಗೆ ಕೇಳಬೇಡ ಹೋಗಿ ಡಿಹೆಚ್‌ಓಗೆ ಕೇಳು ಎಂದು ಅಸಡ್ಡೆಯಿಂದ ಉತ್ತರ ನೀಡಿದರೆಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ | ಮುಂದುವರೆದ ಧರಣಿ ಸತ್ಯಾಗ್ರಹ; ಅತಿವೃಷ್ಟಿ ಹಾನಿಗೆ ಶೀಘ್ರ ಪರಿಹಾರಕ್ಕೆ ಪ್ರಗತಿಪರರ ಆಗ್ರಹ

ಡಿಹೆಚ್‌ಓ ಅವರನ್ನು ಸಂಪರ್ಕಿಸಿದ ವೇಳೆ ಆಸ್ಪತ್ರೆಯಲ್ಲಿ ಔಷಧಿ ಇರುವ ಬಗ್ಗೆ ಆಡಳಿತ ಅಧಿಕಾರಿ ಬಳಿಯಲ್ಲಿ ಮಾಹಿತಿ ಇರುತ್ತದೆ. ನಮ್ಮ ಬಳಿಯಲ್ಲಿ ಇರುವುದಿಲ್ಲ ಎಂದು ಉತ್ತರ ನೀಡುತ್ತಾರೆ. ಇದರ ಬಗ್ಗೆ ಆಡಳಿತ ಅಧಿಕಾರಿ ಡಾ.ನಾಗರಾಜ ಮನ್ನೆಯವರಿಗೆ ತಿಳಿಸಿದರೆ ಅವರು ಅದಕ್ಕೆ ಸ್ಪಂದನೆ ನೀಡದೇ ಅವಾಚ್ಯ ಶಬ್ದಗಳಿಂದ ನಿಂದಿಸಿದರೆ ಎಂದು ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್‌ ಆರೋಪಿಸಿದೆ. ಅಧಿಕಾರಿಗಳು ಸಾರ್ವಜನಿಕರ ಪರವಾಗಿ ಇರದೇ ಗೂಂಡಾಗಳಂತೆ ವರ್ತನೆ ಮಾಡುತ್ತಿದ್ದಾರೆ. ಇವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವ ಜತೆಗೆ ಆಸ್ಪತ್ರೆಗಳಿಗೆ ಸಕಾಲದಲ್ಲಿ ಔಷಧಿಗಳನ್ನು ಒದಗಿಸುವಂತೆ ಆಗ್ರಹಿಸಿದೆ.


ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ಟೂಡೆಂಟ ಅಸೋಸಿಯೇಷನ್‌ನ ಜಿಲ್ಲಾ ಅಧ್ಯಕ್ಷರದ ಸಿದ್ದಾರ್ಥ ಎಂ.ಪಿ., ಉಪಾಧ್ಯಕ್ಷರದ ಮಹೇಶ ದೊಡ್ಡಮನಿ, ಕಾರ್ಯದರ್ಶಿಗಳಾದ ಕಾರ್ತಿಕ ಶೆಟ್ಟಿ, ನಾಗೇಶ್ ಪೂಜಾರಿ, ಆಕಾಶ, ದರ್ಶನ, ರಾಜು, ಬಸವರಾಜ, ಚಂದು, ಪ್ರಭಾಕರ ಇತರರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

ಮೈಸೂರು | ಮಾಹಿತಿ ಹಕ್ಕು ಅನುಷ್ಠಾನ ಸಭೆ; ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ

ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಹಿತಿ ಹಕ್ಕು ಅನುಷ್ಠಾನ ಕುರಿತಾಗಿ ನಡೆದ...

Download Eedina App Android / iOS

X