ಉಡುಪಿ | AKMS ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ, ಹಣಕಾಸಿನ ವ್ಯವಹಾರಕ್ಕೆ ನಡೆದಿರುವುದು ಸ್ಪಷ್ಟ

Date:

Advertisements

ಉಡುಪಿ ಜಿಲ್ಲೆಯ ಹೆಸರಾಂತ ಎಕೆಎಂಎಸ್ ಬಸ್ ಮಾಲಕ ಹಾಗೂ ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣದ ತನಿಖೆ ಮತ್ತೊಂದು ತಿರುವು ಪಡೆದಿದೆ. ಬಂಧಿತ ಮೂವರು ಆರೋಪಿಗಳನ್ನು ಬಳಸಿಕೊಂಡು ಕೆಲವರು ಈ ಕೊಲೆ ಮಾಡಿಸಿರುವುದು ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ. ಹಣಕ್ಕಾಗಿ ಈ ಕೊಲೆ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ಸ್ಪಷ್ಟವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಇಂದು ಎಸ್ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಧಿತ ಆರೋಪಿಗಳಾದ ಫೈಝಲ್, ಶರೀಫ್ ಹಾಗೂ ಶುಕೂರಿಗೆ ಸೈಫ್‌ನ ವಿರುದ್ಧ ವೈಯಕ್ತಿಕ ಧ್ವೇಷ ಇತ್ತು ಎಂದು ಹೇಳಿದರು. ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾಗ ಸೈಫ್ ಯಾವುದೇ ರೀತಿಯ ಸಹಕಾರ ನೀಡದಿದ್ದ ಕಾರಣದಿಂದ ಶರೀಫ್ ಮತ್ತು ಶುಕೂರು ಅಸಮಾಧಾನಗೊಂಡಿದ್ದರು. ಫೈಝಲ್‌ಗೂ ತನ್ನ ಪತ್ನಿಯೊಂದಿಗೆ ಸೈಫ್ ಸಂಪರ್ಕದಲ್ಲಿದ್ದಾನೆ ಎಂಬ ಅನುಮಾನದಿಂದ ದ್ವೇಷ ಹುಟ್ಟಿತ್ತು. ಈ ಕಾರಣಗಳನ್ನು ಬಳಸಿಕೊಂಡು ಕೆಲವು ಮಂದಿ ಸೇರಿ ಕೊಲೆಗೈದಿದ್ದಾರೆ ಎಂದು ಹೇಳಿದರು.

WhatsApp Image 2025 10 06 at 9.38.18 AM

ಸೈಫ್‌ನನ್ನು ಕೊಲೆ ಮಾಡಲು ಆರೋಪಿಗಳು ಹಲವು ತಿಂಗಳಿನಿಂದ ಸಂಚು ರೂಪಿಸಿದ್ದರು. ಸುಮಾರು ಎರಡು ತಿಂಗಳ ಹಿಂದೆ ಈ ಯೋಜನೆ ಅಂತಿಮಗೊಂಡಿತ್ತು. ಸೆಪ್ಟೆಂಬರ್ 27ರಂದು ಫೈಝಲ್ ಸೈಫ್‌ನನ್ನು “ಬಸ್ಸಿನ ವ್ಯವಹಾರದ ಕುರಿತು ಮಾತನಾಡಲು ಮಂಗಳೂರಿಗೆ ಹೋಗೋಣ” ಎಂದು ಹೇಳಿ ಮನೆಗೆ ಕರೆದುಕೊಂಡು ಬಂದಿದ್ದ. ನಂತರ “ನಿನ್ನನ್ನು ನೋಡಲು ರಿಧಾ ಕೊಡವೂರಿನ ಮನೆಯಲ್ಲಿ ಕಾಯುತ್ತಿದ್ದಾಳೆ” ಎಂದು ಸುಳ್ಳು ಹೇಳಿ ಆತನನ್ನು ಕೊಡವೂರಿನ ಮನೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಶರೀಫ್ ಮತ್ತು ಶುಕೂರು ಶೆಡ್‌ನಲ್ಲಿ ಅಡಗಿ ಕುಳಿತಿದ್ದು, ಸೈಫ್ ಮನೆಗೆ ಪ್ರವೇಶಿಸುತ್ತಿದ್ದಂತೆಯೇ ಮೂವರು ಸೇರಿಕೊಂಡು ಕೊಲೆಗೈದಿದ್ದಾರೆ ಎಂದು ಎಸ್ಪಿ ವಿವರಿಸಿದರು.

Advertisements
WhatsApp Image 2025 10 06 at 9.36.30 AM

ಈ ಸಂಚಿನಲ್ಲಿ ಫೈಝಲ್‌ನ ಪತ್ನಿ ರಿಧಾ ಶಭಾನಳೂ ಭಾಗಿಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಆಕೆಯನ್ನು ಈಗಾಗಲೇ ಬಂಧಿಸಲಾಗಿದೆ. ಸೈಫ್ ಆಕೆಗೆ ಕಿರುಕುಳ ನೀಡುತ್ತಿದ್ದಾನೆ ಎಂಬ ಫೈಝಲ್‌ನ ಹೇಳಿಕೆಯನ್ನು ಪೊಲೀಸರು ಪರಿಶೀಲಿಸಿದಾಗ, ಅವರಿಬ್ಬರ ಮಧ್ಯೆ ಸಾಕಷ್ಟು ಫೋನ್‌ಕಾಲ್‌ಗಳು ಹಾಗೂ ಚಾಟ್‌ಗಳ ದಾಖಲೆಗಳು ದೊರೆತಿದ್ದು, ಕಿರುಕುಳದ ಆರೋಪ ಸಾಬೀತಾಗಿಲ್ಲವೆಂದು ಎಸ್‌ ಪಿ ಸ್ಪಷ್ಟಪಡಿಸಿದರು. ಕನಿಷ್ಠ ಒಂದು ವರ್ಷದಿಂದ ಸೈಫ್ ಮತ್ತು ರಿಧಾಳ ನಡುವೆ ಸಂಪರ್ಕ ಇದ್ದದ್ದು ತನಿಖೆಯಿಂದ ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಇನ್ನೂ ಕೆಲವರು ಸಂಚಿನಲ್ಲಿ ಭಾಗಿಯಾಗಿರುವ ಸಾಧ್ಯತೆ ಇದ್ದು, ಅವರನ್ನೂ ಬಂಧಿಸುವ ಕಾರ್ಯ ನಡೆಯುತ್ತಿದೆ. ಸಂಚಿನಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

ಮೈಸೂರು | ಮಾಹಿತಿ ಹಕ್ಕು ಅನುಷ್ಠಾನ ಸಭೆ; ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ

ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಹಿತಿ ಹಕ್ಕು ಅನುಷ್ಠಾನ ಕುರಿತಾಗಿ ನಡೆದ...

Download Eedina App Android / iOS

X