ಕೊಡಗು | ಕಾಡಾನೆ ದಾಳಿ; ಮಹಿಳೆ ಬಲಿ

Date:

Advertisements

ಆನೆ-ಮಾನವ ಸಂಘರ್ಷ ಮಂದುವರಿದಿದ್ದು, ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಡಗ ಬಾಣಂಗಾಲ ಗ್ರಾಮದಲ್ಲಿ ಘಟನೆ ನಡೆದಿದೆ.

ಆಯಿಶಾ(63) ಮೃತ ಮೃತ ದುರ್ಧೈವಿ. ಮನೆ ಸಮೀಪ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಆನೆ ದಾಳಿ ನಡೆಸಿದೆ. ಆಯಿಶಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

“ಕಳೆದ ಒಂದು ವಾರದ ಹಿಂದೆಯೂ ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕರೊಬ್ಬರು ಮೃತ ಪಟ್ಟಿದ್ದರು. ಇದೀಗ ಮತ್ತೆ ಆನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ‌. ಕೂಡಲೇ ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕು” ಎಂದು ಸ್ಥಳೀಯುರು ಆಗ್ರಹಿಸಿದ್ದಾರೆ.

Advertisements

“ಕೆಲವು ಕಾಡಾನೆಗಳ ತಂಡ ಕಾಫಿ ತೋಟಗಳನ್ನೇ ಬಿಡಾರ ಮಾಡಿಕೊಂಡಿವೆ. ಕಾಫಿ ತೋಟಗಳಲ್ಲಿ ಬೇಕಾದಷ್ಟು ಆಹಾರ ಹಾಗೂ ನೀರು ಇವುಗಳಿಗೆ ಸಿಗುತ್ತಿರುವುದರಿಂದ ಇವು ಕಾಡಿಗೆ ಮರಳುತ್ತಿಲ್ಲ. ಎಷ್ಟೇ ಪಟಾಕಿ ಸಿಡಿಸಿ ಗದ್ದಲ ಎಬ್ಬಿಸಿದರೂ ಹೋಗುತ್ತಿಲ್ಲ. ಇವುಗಳಿಂದಾಗಿ ಕಾಫಿ ತೋಟಗಳಿಗೆ ಹೋಗಲು ಹೆದರಿಕೆಯಾಗುತ್ತಿದೆ. ಕೂಲಿ ಮಾಡಲು ಜನ ಸಿಗುತ್ತಿಲ್ಲ” ಎಂದು ಸ್ಥಳೀಯರು ಅಲವತ್ತುಕೊಂಡಿದ್ದಾರೆ.

ಹಾಸನ ಜಿಲ್ಲೆಯಲ್ಲಿಯೂ ಆನೆ ದಾಳಿ ಮುಂದುವರಿದಿದ್ದು, ಕಾಡಾನೆಗಳ ಹಿಂಡಿನ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಸಕಲೇಶಪುರ ತಾಲೂಕಿನ ದೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಈ ಸುಸದ್ದಿ ಓದಿದ್ದೀರಾ? ರಾಮನಗರ | ಮಕ್ಕಳಿಗೆ ಗೂಡ್ಸ್‌ ವಾಹನ ಢಿಕ್ಕಿ ಪ್ರಕರಣ; ರಸ್ತೆ ಮಧ್ಯೆ ಬಾಲಕಿ ಶವವಿಟ್ಟು ಪ್ರತಿಭಟನೆ

ದಾಳಿ ಮಾಡಿರುವ ಆನೆಹಿಂಡು ಕಾಫಿ, ಶುಂಠಿ, ಅಡಿಕೆ ಗಿಡಗಳನ್ನು ನಾಶ ಮಾಡಿದೆ. ನೀರಿನ ಪೈಪ್‌ಗಳನ್ನು ಕಿತ್ತು ಪುಂಡಾನೆಗಳು ಅಟ್ಟಹಾಸ ಮೆರೆದಿವೆ. ಅಪ್ಸರ್ ಎಂಬವರ ಕಾಫಿ ತೋಟದಲ್ಲಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕಾಫಿ ತೋಟದಲ್ಲೇ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಕಷ್ಟಪಟ್ಟು ಬೆಳೆದಿದ್ದ ಅಡಿಕೆ ಗಿಡಗಳನ್ನು ಕಾಡಾನೆಗಳು ನೆಲಸಮ ಮಾಡಿವೆ. ಈ ಹಿನ್ನೆಲೆಯಲ್ಲಿ ತೋಟದ ಮಾಲೀಕ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X