ಬೆಂಗಳೂರು | ಬಸ್‌ನಲ್ಲಿ ಪ್ರಯಾಣಿಕರ ಲ್ಯಾಪ್‌ಟಾಪ್ ಕದಿಯುತ್ತಿದ್ದ ಖದೀಮರ ಬಂಧನ

Date:

Advertisements

ಆಂಧ್ರಪ್ರದೇಶ-ಬೆಂಗಳೂರು ಬಸ್‌ನಲ್ಲಿ ಪ್ರಯಾಣಿಕರ ಲ್ಯಾಪ್‌ಟಾಪ್, ಮೊಬೈಲ್ ಸೇರಿದಂತೆ ಇನ್ನಿತರ ದುಬಾರಿ ಬೆಲೆಯ ವಸ್ತುಗಳನ್ನು ಕದಿಯುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಮೂಲತಃ ಆಂಧ್ರಪ್ರದೇಶದವರು. ಬಂಧಿತರಿಂದ 39 ಲ್ಯಾಪ್‌ಟಾಪ್‌ಗಳನ್ನು ಕೊಡಿಗೇಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆಂಧ್ರಪ್ರದೇಶ-ಬೆಂಗಳೂರು, ಬೆಂಗಳೂರು-ಆಂಧ್ರಪ್ರದೇಶ ರಾತ್ರಿ ವೇಳೆ ಸಂಚರಿಸುವ ಈ ಬಸ್‌ಗಳಲ್ಲಿ ಕಳ್ಳರು ಹೊಂಚು ಹಾಕಿ ಪ್ರಯಾಣಿಕರು ಮಲಗಿದ್ದಾಗ ಅವರ ಲ್ಯಾಪ್‌ಟಾಪ್‌, ಮೊಬೈಲ್ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗುತ್ತಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 63 ವರ್ಷದ ಅಜ್ಜಿಗೆ ಪ್ರೀತಿಸಿ ಮೋಸ ಮಾಡಿದ 70 ವರ್ಷದ ಅಜ್ಜ: ದೂರು ದಾಖಲು

ಈ ಆರೋಪಿಗಳು ರಿಸರ್ವ್‌ ಬಸ್‌ಗಳನ್ನು ಟಾರ್ಗೆಟ್‌ ಮಾಡುತ್ತಿದ್ದರು. ಇವರು ಕೂಡ ಪ್ರಯಾಣಿಕರ ಸೋಗಿನಲ್ಲಿ ಬಸ್‌ ಬುಕ್ ಮಾಡಿ ಪ್ರಯಾಣ ಬೆಳೆಸುತ್ತಿದ್ದರು.

ಈ ಬಗ್ಗೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X