ಕಾವೇರಿ ನೀರು | ಜನರ ಹಿತ ಕಾಯಲಿ, ನಾವು ಸಹಕಾರ ಕೊಡುತ್ತೇವೆ: ಮಾಜಿ ಸಿಎಂ ಬೊಮ್ಮಾಯಿ

Date:

Advertisements
  • ‘ಈಗಿರುವ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವಲ್ಲಿ ಸರ್ಕಾರ ವಿಫಲ
  • ರಾಜ್ಯದ ರೈತರ ಕೂಗಿಗೆ ಸ್ಪಂದಿಸುವ ಕೆಲಸ ಮಾಡಬೇಕು: ಬೊಮ್ಮಾಯಿ

ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, “ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಈಗಾಗಲೇ ಟ್ರಿಬ್ಯುನಲ್ ಆದೇಶ ಬಂದು ಒಂದು ವ್ಯವಸ್ಥೆ ಇರುವ ಸಂದರ್ಭದಲ್ಲಿ ಈಗಿರುವ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ” ಎಂದು ದೂರಿದರು.

“ಒಂದೆಡೆ ನೀರು ಬಿಡುತ್ತದೆ ಮತ್ತೊಂದೆಡೆ ವಾದ ಮಾಡುತ್ತಾರೆ. ಸುಪ್ರೀಂ ಕೋರ್ಟ್‌ನಲ್ಲಿ ಕಾನೂನಾತ್ಮಕವಾಗಿ ಹೋರಾಟ ಮಾಡಲು ಪ್ರಯತ್ನ ಮಾಡಬೇಕು‌. ನಾವು ವಿರೋಧ ಪಕ್ಷವಾಗಿ ಎಲ್ಲ ರೀತಿಯ ಸಹಕಾರ ನೀಡಲು ಸಿದ್ದರಿದ್ದೇವೆ. ಮಂಡ್ಯ ಮೈಸೂರು ಭಾಗದ ರೈತರು ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಇಡೀ ವರ್ಷ ನೀರಿನ ಕೊರತೆ ನಿರ್ವಹಣೆ ಮಾಡಬೇಕಿದೆ. ರಾಜ್ಯದ ರೈತರ ಕೂಗಿಗೆ ಸ್ಪಂದಿಸುವ ಕೆಲಸ ಮಾಡಬೇಕು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

“ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಬಿಜೆಪಿ, ಜೆಡಿಎಸ್ ನವರಿಗೆ ಉತ್ತರ ಕೊಡಬೇಕಿಲ್ಲ ಎಂದು ಹೇಳಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಡಿ‌ಕೆ ಶಿವಕುಮಾರ್ ನೀರಾವರಿ ಸಚಿವರು ಅವರು ರಾಜ್ಯದ ಜನತೆಗೆ, ರೈತರಿಗೆ, ಬೆಂಗಳೂರಿನ ಜನತೆಗೆ ಉತ್ತರ ಕೊಡಲಿ. ನಾವು ವಿರೋಧ ಪಕ್ಷವಾಗಿ ನಮ್ಮ ಅಭಿಪ್ರಾಯ ಹೇಳಿದ್ದೇವೆ. ರೈತರನ್ನು ಕೋರ್ಟ್‌ಗೆ ಹೋಗಿ ಎಂದರೆ ಹೇಗೆ? ಅವರು ರಾಜ್ಯದ ಜನರ ಹಿತ ಕಾಯಲಿ ನಾವು ಅವರಿಗೆ ಸಹಕಾರ ನೀಡುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸರ್, ನೀವು ಸಹಕಾರ ಕೊಟ್ಟರೂ ಕೊಡದಿದ್ದರೂ
    ಎಲ್ಲಾ ಗ್ಯಾರಂಟಿ ಜಾರಿಗೊಳಿಸಲು ಸರ್ಕಾರ ಸಿದ್ಧವಿದೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X