ತೆಲಂಗಾಣ | ಚುನಾವಣೆ ಘೋಷಣೆಗೂ ಮುನ್ನವೇ ಬಹುತೇಕ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದ ಕೆಸಿಆರ್

Date:

Advertisements

ತೆಲಂಗಾಣ ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳು ಬಾಕಿ ಇರುವ ಮುನ್ನವೇ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ತಮ್ಮ ಬಿಆರ್‌ಎಸ್‌ ಪಕ್ಷದ ಬಹುತೇಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.

ತೆಲಂಗಾಣದ ಒಟ್ಟು 119 ಕ್ಷೇತ್ರಗಳಲ್ಲಿ 115 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆಗೊಳಿಸಲಾಗಿದೆ. ಬೋತ್, ಖಾನಾಪುರ, ವೈರಾ, ಕೋರುಟ್ಲಾ, ಉಪ್ಪಲ್, ಆಸಿಫಾಬಾದ್ ಮತ್ತು ಮೆಟ್ಪಲ್ಲಿ ಕ್ಷೇತ್ರಗಳಿಗೆ ಹೊಸಬರನ್ನು ಘೋಷಿಸಿರುವುದನ್ನು ಬಿಟ್ಟರೆ 108 ಕ್ಷೇತ್ರಗಳಲ್ಲಿ ಹಾಲಿ ಶಾಸಕರನ್ನು ಕಣಕ್ಕಿಳಿಸಲಾಗುತ್ತಿದೆ.

ಗೋಶಾಮಹಲ್, ನಾಂಪಲ್ಲಿ, ಜನಾಂವ್ ಮತ್ತು ನರಸಾಪುರ ಎಂಬ ನಾಲ್ಕು ಕ್ಷೇತ್ರಗಳಿಗೆ ಪಕ್ಷವು ಇನ್ನೂ ಅಭ್ಯರ್ಥಿಗಳನ್ನು ನಿರ್ಧರಿಸಿಲ್ಲ.

Advertisements

ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕ – ತಮಿಳುನಾಡು ಕಾವೇರಿ ನದಿ ವಿವಾದ: ನೀರು ಹಂಚಿಕೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಒಪ್ಪಿಗೆ

115 ಕ್ಷೇತ್ರಗಳ ಪೈಕಿ ಆರು ಮಹಿಳೆಯರಿಗೆ ಬಿಆರ್‌ಎಸ್ ಪಕ್ಷ ಟಿಕೆಟ್ ನೀಡಿದೆ. ಪದ್ಮಾ, ಜಿ. ಲಾಸ್ಯ, ನಂದಿತಾ, ಕೋವ ಲಕ್ಷ್ಮಿ, ಬಾನೋತ್ ಹರಿಪ್ರಿಯಾ ನಾಯ್ಕ್, ಬಡೇ ನಾಗಜ್ಯೋತಿ, ಮತ್ತು ಗೊಂಗಿಡಿ ಸುನೀತಾ ಅವರಿಗೆ ಕ್ರಮವಾಗಿ ಸಿಕಂದರಾಬಾದ್ ಕಂಟೋನ್ಮೆಂಟ್, ಆಸಿಫಾಬಾದ್, ಯಲ್ಲಂಡು, ಮುಲುಗು ಮತ್ತು ಅಲೈರ್‌ನಿಂದ ಟಿಕೆಟ್ ನೀಡಲಾಗಿದೆ. ರಾಜ್ಯದ 30 ಕ್ಷೇತ್ರಗಳಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಆರ್‌ಎಸ್ 95-105 ಸ್ಥಾನಗಳನ್ನು ಗೆಲ್ಲಲಿದೆ. ಎಐಎಂಐಎಂ ಮತ್ತು ಹೈದರಾಬಾದ್ ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿಯೊಂದಿಗೆ ಬಿಆರ್‌ಎಸ್ ಸ್ನೇಹ ಮುಂದುವರಿಯುತ್ತದೆ ಎಂದು ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್ ತಿಳಿಸಿದ್ದಾರೆ.

2018ರ ಚುನಾವಣೆಯಲ್ಲಿ 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ ಬಿಆರ್‌ಎಸ್ 88 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಕಾಂಗ್ರೆಸ್ ಮತ್ತು ಎಐಎಂಐಎಂ ಕ್ರಮವಾಗಿ 19 ಮತ್ತು 7 ಸ್ಥಾನಗಳನ್ನು ಗಳಿಸಿದ್ದವು. ಬಿಜೆಪಿ ಕೇವಲ 1 ಸ್ಥಾನವನ್ನು ಪಡೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X