ಉಡುಪಿ | ದೇವರಾಜ ಅರಸು: ವಂಚಿತರಿಗೆ ಸಾಮಾಜಿಕ ನ್ಯಾಯ ಒದಗಿಸಿದ ಚೇತನ

Date:

Advertisements
  • ಉಳುವವನೇ ಭೂ ಓಡೆಯ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದವರು ದೇವರಾಜ್ ಅರಸು
  • ಬಿಜೆಪಿ ಪಕ್ಷ ಸುಳ್ಳಿನ ಮೇಲೆಯೇ ದೇಶವನ್ನಾಳಲು ಹೊರಟಿದೆ

ಮಾಹಿತಿ ತಂತ್ರಜ್ಞಾನ ಮತ್ತು ಇಂಟರ್ನೆಟ್ ವ್ಯವಸ್ಥೆಯಲ್ಲಿ ಕ್ರಾಂತಿ ತಂದು ಭವ್ಯ ಭಾರತ ನಿರ್ಮಾಣವನ್ನು ಸಾಕರಗೊಳಿಸಿದ ರಾಜೀವ್ ಗಾಂಧಿ ಹಾಗೂ ಉಳುವವನೇ ಭೂ ಒಡೆಯ ಕಾಯ್ದೆಯನ್ನು ಅನುಷ್ಠಾನಗೊಳಿಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸಿದ ದೇವರಾಜ ಅರಸು ಮಹಾ ಚೇತನರು ಎಂದು ಉಡುಪಿ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಹರೀಶ್ ಕಿಣಿ ಹೇಳಿದರು.

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಗಾಂಧಿ ಸಂಘಟನೆಯ ಆಶ್ರಯದಲ್ಲಿ ನಗರದ ಓಸ್ಕರ್ ಸ್ಮಾರಕ ಕಾಂಗ್ರೆಸ್ ಭವನದಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸ್ ರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಮುಖಂಡ ನಾಗೇಶ್ ಉದ್ಯಾವರ್ ಮಾತನಾಡಿ , “ಇಂದು ವ್ಯಾಪಕವಾಗೆ ಸುಳ್ಳು ಸುದ್ದಿಗಳನ್ನು ಹರಡಿಸುವ ಬಿಜೆಪಿ ಸುಳ್ಳಿನ ಮೇಲೆಯೇ ದೇಶವನ್ನಾಳಲು ಹೊರಟಿದೆ. ಆದರೆ ಸುಳ್ಳುಗಳಿಂದ ದೇಶ ಸುಧಾರಣೆ ಸಾಧ್ಯವಿಲ್ಲ. ನಮ್ಮ ಹಿರಿಯ ಚೇತನರಾದ ರಾಜೀವ್ ಗಾಂಧಿ, ದೇವರಾಜ್ ಅರಸು ಸೇರಿದಂತೆ ಮಂತಾದವರ ಆದರ್ಶಗಳನ್ನು ಅನುಷ್ಠಾನಗೊಳಿಸಿ ಈ ಸುಳ್ಳು ಪಡೆಯನ್ನು ನಿಶಕ್ತಗೊಳಿಸಿ ಸಮೃದ್ಧ ಭಾರತ ಕಟ್ಟೋಣ” ಎಂದರು.

Advertisements

“ದೇಶದ ಎಲ್ಲಾ ರಂಗಗಳಲ್ಲೂ ಯುವ ಸಮೂಹದ ಭವಿಷ್ಯ ರೂಪಿಸುವಲ್ಲಿ ರಾಜೀವ್ ಗಾಂಧಿಯವರ ಕೊಡುಗೆ ಅಪಾರವಾಗಿದೆ. ನಾಡಿನ ಹಿಂದುಳಿದ ಸಮುದಾಯಕ್ಕೆ ಮೀಸಲಾತಿ ಜಾರಿಗೊಳಿಸಿ ಭೂ ಮಸೂದೆ ಕಾನೂನು ಮೂಲಕ ಕ್ರಾಂತಿಗೈದ ಡಿ.ದೇವರಾಜ್ ಅರಸುಗೆ ಸಲ್ಲುತ್ತದೆ” ಎಂದು ನಗರ ಸಭೆಯ ಸದಸ್ಯ ರಮೇಶ್ ಕಾಂಚನ್‌ ನುಡಿದರು.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಿ. ನರಸಿಂಹ ಮೂರ್ತಿ ಮಾತನಾಡಿದರು. ಇದೇ ಸಂದರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಅಮೃತಾ ಪೂಜಾರಿ ಅವರು ಅಲೆವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದಕ್ಕೆ ಜಿಲ್ಲಾ ಸಮಿತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಸಹ ಸಂಚಾಲಕಿ ರೋಶಿನಿ ವಲಿವರ್, ಗೌರವ ಸಲಹೆಗಾರ ವೆರೋನಿಕ ಕರ್ನೇಲಿಯೋ, ಜಿಲ್ಲಾ ಉಸ್ತುವಾರಿ ಡಾ.ಸುನೀತಾ ಶೆಟ್ಟಿ, ಕಿಶನ್ ಹೆಗ್ಡೆ, ರೋಶನ್ ಶೆಟ್ಟಿ, ಕುಶಲ ಶೆಟ್ಟಿ ಕೀರ್ತಿ ಶೆಟ್ಟಿ ಶಶಿಧರ್ ಶೆಟ್ಟಿ, ಶಬರೀಶ್, ಮೇರಿ ಡಿಸೋಜ, ಸೂರ್ಯ ಸಾಲಿಯಾನ್, ಶಂಕರ ನಾಯ್ಕ, ಮಾರ್ಗರೇಟ್ ಸೀಮಾ, ಶಾಂತಿ ಪಿರೇರಾ, ಸತೀಶ್ ಜಪ್ತಿ,ಜೋಯ್ಸ್ ಟೆನ್ನಿಸ್, ಲಿಲ್ಲಿ ಡಿಸೋಜ, ಉದಯ, ನಜೀರ್, ರೋನಾಲ್ಡ್, ಲಕ್ಷ್ಮಿ ನಾರಾಯಣ, ಕುಮುದ, ವಾರೀಜಾಕ್ಷಿ ಮತ್ತಿತರರಿದ್ದರು. ಆನಂದ್ ಪೂಜಾರಿ ಸ್ವಾಗತಿಸಿ, ರೋಶನ್ ಬರಟೋ ವಂದಿಸಿದರು, ಅಮೃತಾ ಪೂಜಾರಿ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X