ಕರಾವಳಿ ಗಡಿ ಗ್ರಾಮಗಳಲ್ಲಿ ‘ವೈಬ್ರಂಟ್ ವಿಲೇಜ್ ಪ್ರೋಗಾಮ್’ ಜಾರಿಗೆ ಕೇಂದ್ರ ಚಿಂತನೆ: ಅಬ್ದುಲ್ ಅಹದ್

Date:

Advertisements

ಅರುಣಾಚಲ ಪ್ರದೇಶ ಸೇರಿದಂತೆ ದೇಶದ ಗಡಿಗಳಲ್ಲಿರುವ ಹಳ್ಳಿಗಳ ಜನರು ವಲಸೆ ಹೋಗದಂತೆ ತಡೆಯುವ ಮತ್ತು ಗ್ರಾಮಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಕೇಂದ್ರ ಸರ್ಕಾರದ ವೈಬ್ರಂಟ್ ವಿಲೇಜ್ ಪ್ರೋಗಾಮ್‌ ಕರ್ನಾಟಕ ಕರಾವಳಿ ಗಡಿಯಲ್ಲಿಯೂ ಅನುಷ್ಠಾನಕ್ಕೆ ತರಲು ಚಿಂತನೆ ನಡೆಯುತ್ತಿದೆ. ಈ ಸಂಬಂಧ ಕರಾವಳಿ ಕಾವಲು ಪೊಲೀಸ್ ಅಧಿಕಾರಿಗಳು ಇಲ್ಲಿನ ಗ್ರಾಮಗಳ ಬಗ್ಗೆ ಅಧ್ಯಯನ ಮಾಡಿ ವರದಿಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಮಲ್ಪೆ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ತಿಳಿಸಿದ್ದಾರೆ.

ಉಡುಪಿ ಪತ್ರಿಕಾ ಭವನ ಸಮಿತಿಯ ವತಿಯಿಂದ ಆಗಸ್ಟ್‌ 22ರಂದು ಪತ್ರಿಕಾ ಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಾದಕ ದ್ರವ್ಯ ಸಾಗಾಟ ಪ್ರಕರಣಗಳು ನಮ್ಮ ವ್ಯಾಪ್ತಿಯ ಸಮುದ್ರ ತೀರದಲ್ಲಿ ಈವರೆಗೆ ಕಂಡುಬಂದಿಲ್ಲ. ಇದು ಹೆಚ್ಚು ದುಬಾರಿಯಾಗಿರುವುದರಿಂದ ದುಷ್ಕರ್ಮಿಗಳು ಸಮುದ್ರ ತೀರದಲ್ಲಿ ಇವುಗಳನ್ನು ಸಾಗಿಸುವುದಿಲ್ಲ. ಆದರೂ ನಾವು ಜಾಗೃತರಾಗಿದ್ದು, ಕಾರ್ಯ ನಿರ್ವಹಿಸುತ್ತಿದ್ದೇವೆ” ಎಂದರು.

Advertisements

“ಮಾದಕ ದ್ರವ್ಯ ಎಂಬುದು ಸಾಮಾಜಿಕ ಪಿಡುಗು ಮಾತ್ರವಲ್ಲದೆ ದೇಶದ ಭದ್ರತೆಗೆ ದೊಡ್ಡ ಮಾರಕವಾಗಿದೆ. ಹಾಗಾಗಿ ಇದರ ವಿರುದ್ಧ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಾಗಿದೆ. ಬೀಚ್‌ಗಳಲ್ಲಿ ಗಾಂಜಾ ಸೇವನೆ ಮತ್ತು ಗಾಂಜಾ ಮಾರಾಟಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದರು.

500 ಸಿಟಿಟಿವಿ ಅಳವಡಿಕೆ

“ಭದ್ರತೆಯ ದೃಷ್ಠಿಯಿಂದ ಸಾರ್ವಜನಿಕರ ಸಹಭಾಗಿತ್ವದಲ್ಲಿ ಅಭಿಯಾನದ ಮೂಲಕ ಕಾರವಾರದಿಂದ ಮಂಗಳೂರುವರೆಗಿನ ಕರಾವಳಿ ತೀರದಲ್ಲಿ 500ಕ್ಕೂ ಅಧಿಕ ಕಡೆಗಳಲ್ಲಿ ಸಿಸಿಟಿವಿಯನ್ನು ಆಳವಡಿಸಲಾಗಿದೆ. ಖಾಸಗಿ ವ್ಯಕ್ತಿಗಳು ನಮ್ಮ ಮನವಿಗೆ ಸ್ಪಂದಿಸಿದ್ದು, ಸಮುದ್ರದ ದಿಕ್ಕಿನ ಕಡೆಗೂ ತಮ್ಮ ಮನೆ, ಕಟ್ಟಡಗಳಲ್ಲಿ ಸಿಟಿಟಿವಿ ಅಳವಡಿಸಿಕೊಂಡಿದ್ದಾರೆ” ಎಂದು ಎಸ್‌ಪಿ ಅಬ್ದುಲ್ ಅಹದ್ ತಿಳಿಸಿದರು.

“ಕರಾವಳಿ ಕಾವಲು ಪೊಲೀಸ್ ಸಮುದ್ರದಲ್ಲಿ 12 ನಾಟಿಕಲ್ ಮೈಲ್(20 ಕಿಮೀ) ಹಾಗೂ ನೆಲದಲ್ಲಿ 500 ಮೀಟರ್ ಸಿಆರ್‌ಝಡ್ ಪ್ರದೇಶದಲ್ಲಿ ಕಾರ್ಯ‌ ನಿರ್ವಹಿಸುತ್ತದೆ. ಭದ್ರತೆ ದೃಷ್ಠಿಯಿಂದ ರೆಸಾರ್ಟ್‌ಗಳಲ್ಲಿ ತಂಗಿರುವ ವಿದೇಶಿಯವರ ಬಗ್ಗೆ ಮಾಹಿತಿ ಸಂಗ್ರಹಿಸುವ ಕಾರ್ಯ ಮಾಡಲಾಗುತ್ತದೆ. ಅದೇ ರೀತಿ ಬಂದರುಗಳಲ್ಲಿಯೂ ತಪಾಸಣೆ ಮಾಡಲಾಗುತ್ತದೆ. ದೇಶದ ಭದ್ರತೆ ವಿಚಾರದಲ್ಲಿ ಎಲ್ಲರೂ ನಮಗೆ ಉತ್ತಮ ಸಹಕಾರ ನೀಡುತ್ತಾರೆ” ಎಂದರು.

“ಇಲಾಖೆಯಲ್ಲಿ ಡ್ರೋನ್ ಹಾಗೂ ಬೋಟುಗಳಿವೆ. ಬೇಕಾದ ಎಲ್ಲ ರೀತಿಯ ಸೌಲಭ್ಯಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒದಗಿಸುತ್ತಿವೆ. ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ಧವಾಗಿದ್ದಾಗ ದ್ವೀಪಗಳಲ್ಲಿನ ಚಟುವಟಿಕೆಗಳನ್ನು ವೀಕ್ಷಿಸಲು ಡ್ರೋನ್‌ಗಳನ್ನು ಬಳಸಿಕೊಳ್ಳುತ್ತೇವೆ. ಇಲಾಖೆಗೆ ಇನ್ನು ಹೆಚ್ಚಿನ ಡ್ರೋನ್ ಬರುವ ಸಾಧ್ಯತೆ ಇದೆ. ಸಾಗರ ರಕ್ಷಕ ದಳದಲ್ಲಿ 1200ಕ್ಕೂ ಅಧಿಕ ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ” ಎಂದು ಹೇಳಿದರು.

ಸೀ(ಸಮುದ್ರ) ಅಂಬ್ಯುಲೆನ್ಸ್ ಅಗತ್ಯ

“ಕರ್ನಾಟಕ ಕರಾವಳಿಗೆ ಸೀ ಅಂಬ್ಯುಲೆನ್ಸ್‌ನ ಅಗತ್ಯ ಬಹುತೇಕವಾಗಿದ್ದು, ಇದನ್ನು ಒದಗಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಇಲಾಖೆಗೆ ಸಂಬಂಧಿಸಿದಂತೆ ಕೋಡಿಕನ್ಯಾನದಲ್ಲಿರುವ 25 ಎಕರೆ ಜಾಗದಲ್ಲಿ ಕೋಸ್ಟಲ್ ಸೆಕ್ಯೂರಿಟಿ ತರಬೇತಿ ಕೇಂದ್ರ, ಆಸ್ಪತ್ರೆಗಳನ್ನು ಹಲವು ಕಡೆ ನಿರ್ಮಾಣ ಮಾಡಿ, ಸೋಲಾರ್ ಪ್ಲಾಂಟ್‌ಗಳನ್ನು ಸ್ಥಾಪಿಸಲು ಚಿಂತನೆಗಳು ನಡೆಯುತ್ತಿದೆ. ಈ ಕಾರ್ಯ ಹಂತ ಹಂತವಾಗಿ ನಡೆಯಲಿದೆ” ಎಂದು ಎಸ್‌ಪಿ ಮಾಹಿತಿ ನೀಡಿದರು.

“ಮಳೆಗಾಲದಲ್ಲಿ ಕೆಲವೊಂದು ರಕ್ಷಣಾ ಕಾರ್ಯಾಚರಣೆ ಸಂದರ್ಭ ಅಲೆಗಳ ಅಬ್ಬರ ಜೋರು ಇರುವಾಗ ನಮ್ಮ ಬೋಟು ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಆಗ ಮೀನುಗಾರರ ಬೋಟುಗಳನ್ನೇ ಬಳಸಿ ಕೊಳ್ಳಬೇಕಾಗುತ್ತದೆ. ಕಳೆದ ಬಾರಿ 13 ರಕ್ಷಣೆ ಕಾರ್ಯಾಚರಣೆಗಳನ್ನು ನಾವು ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಲಾಖೆಗೆ ಹೆಚ್ಚು ಸಾಮರ್ಥ್ಯದ ಬೋಟುಗಳು ತಲುಪಿದಲ್ಲಿ ಇಲ್ಲಿನ ಕೆಲವೊಂದು ಸಮಸ್ಯೆಗಳ ಪರಿಹಾರ ಕಾಣುತ್ತದೆ. ಇಲಾಖೆಗೆ ಬಲ ತುಂಬಿಸುವ ಕಾರ್ಯವನ್ನು ಸರ್ಕಾರ ಹಂತ‌ ಹಂತವಾಗಿ ಮಾಡುತ್ತಿದೆ” ಎಂದರು.‌

ಈ ಸುದ್ದಿ ಓದಿದ್ದೀರಾ? ಮೈಸೂರು | ವಾಹನ ತಪಾಸಣೆ ಹೆಸರಲ್ಲಿ ಹಗಲು ದರೋಡೆ; ಸ್ಥಳೀಯರ ಆರೋಪ

“ಸದಾ ಕಾಲ ಸಮುದ್ರದಲ್ಲಿರುವ ಮೀನುಗಾರರಿಂದ ಎಲ್ಲ ರೀತಿಯ ಸಹಕಾರ ನಮಗೆ ಸಿಗುತ್ತಿದೆ. ಇಲ್ಲಿನ ಮೀನುಗಾರರು ಯಾವಾಗಲೂ ತುಂಬಾ ಜಾಗರೂಕತೆಯಿಂದ ಎಚ್ಚರವಾಗಿರುತ್ತಾರೆ. ಯಾವುದೇ ಹೊಸ ಅಥವಾ ಅನುಮಾನಾಸ್ಪದ ಬೋಟುಗಳು ಕಂಡುಬಂದರೆ ಕೂಡಲೇ ನಮಗೆ ಮಾಹಿತಿ ನೀಡುತ್ತಾರೆ. ಮೀನುಗಾರರೇ ನಮ್ಮ ಬಹಳ ದೊಡ್ಡ ಶಕ್ತಿಯಾಗಿದ್ದಾರೆ” ಎಂದು ಎಸ್‌ಪಿ ಅಬ್ದುಲ್ ಅಹದ್ ತಿಳಿಸಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X