6,366 ಕೋಟಿ ರೂ. ನರೇಗಾ ಬಾಕಿ ಉಳಿಸಿಕೊಂಡಿರುವ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ

Date:

Advertisements

ನರೇಗಾ (ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ) ಯೋಜನೆಗೆ ಬಜೆಟ್‌ನಲ್ಲಿ ಮೂರನೇ ಒಂದರಷ್ಟು ಭಾಗದಷ್ಟು ಕಡಿತದ ನಂತರವೂ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ 6,366 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿರುವ ಖರ್ಗೆ, 2005, ಆಗಸ್ಟ್ 23ರಂದು ಕಾಂಗ್ರೆಸ್ ಸರ್ಕಾರ ನರೇಗಾ ಯೋಜನೆಯನ್ನು ಪ್ರಾರಂಭಿಸಿತು. ಇದರಿಂದ ದೇಶದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ ಎಂದು ನರೇಗಾ ಯೋಜನೆಯನ್ನು ಅವರು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ: ಮಲ್ಲಿಕಾರ್ಜುನ ಖರ್ಗೆ

Advertisements

ಹಲವು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನರೇಗಾ ಯೋಜನೆಯಡಿ ನೀಡಬೇಕಾದ 6,366 ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿದೆ ಎಂದು ಖರ್ಗೆ ಆರೋಪ ಮಾಡಿದ್ದಾರೆ.

ಈ ಯೋಜನೆ ಅಡಿಯಲ್ಲಿ ದೇಶದ 14 ಕೋಟಿ ಕಾರ್ಮಿಕರು ಸಕ್ರಿಯರಾಗಿದ್ದಾರೆ. ಇವರಲ್ಲಿ 8 ಕೋಟಿಯಷ್ಟು ಮಹಿಳೆಯರು ಇದ್ದಾರೆ. ಈ ಯೋಜನೆ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಎಂದು ಖರ್ಗೆ ಹೇಳಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ನರೇಗಾ ಯೋಜನೆ ಕೋಟ್ಯಂತರ ಜನರಿಗೆ ಜೀವನ ಭದ್ರತೆ ಒದಗಿಸಿತು. ಮನೆಯಲ್ಲಿ ಕುಳಿತ ಕಾರ್ಮಿಕರಿಗೆ ಭದ್ರತೆ ನೀಡಿತು ಎಂದು ಖರ್ಗೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X