ರಾಯಚೂರು | ರೈತರ ಕಡೆಗಣನೆ; ಸಚಿವ ತಿಮ್ಮಾಪುರರ ವಜಾಕ್ಕೆ ರೈತ ಸಂಘ

Date:

Advertisements

ಕೃಷ್ಣ ಭಾಗ್ಯ ಜಲ ನಿಗಮ ಆಲಮಟ್ಟಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ರೈತರನ್ನು ಹೊರಗಿಟ್ಟು ಸಭೆ ನಡೆಸಿ ಅವಮಾನಿಸಿದ ಸಚಿವ ಆರ್.ಬಿ ತಿಮ್ಮಾಪೂರ ಅವರನ್ನು ವಜಾಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟಿಸಿದರು.

“ಆ.21 ರಂದು ಆಲಮಟ್ಟಿಯಲ್ಲಿ ಕೃಷ್ಣ ಭಾಗ್ಯ ಜಲ ನಿಗಮದ ನೀರಾವರಿ ಸಲಹಾ ಸಮಿತಿ ಸಭೆ ಕರೆಯಲಾಗಿತ್ತು, ಶಾಸಕರು, ಅಧಿಕಾರಿಗಳು ಹಾಗೂ ರೈತರನ್ನು ಆಹ್ವಾನ ನೀಡಿತ್ತು. ಆದರೆ, ಸಭೆಯ ಅಧ್ಯಕ್ಷತೆ ವಹಿಸಿದ ಸಲಹಾ ಸಮಿತಿ ಅಧ್ಯಕ್ಷ ಸಚಿವ ಆರ್.ಬಿ ತಿಮ್ಮಾಪೂರ ಅವರು ರೈತರನ್ನು ಹೊರಗಿಟ್ಟು ಸಭೆ ನಡೆಸಿದ್ದಾರೆ. ರೈತರ ಅಭಿಪ್ರಾಯವನ್ನು ಸಂಗ್ರಹಿಸದೇ ಹಾಗೂ ಶಾಸಕರ ಮಾತಿಗೆ ಬೆಲೆ ನೀಡದೇ ಏಕ ಪಕ್ಷಿಯವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ. ಎಂಟು ಜಿಲ್ಲೆಗಳಲ್ಲಿ ಬರಗಾಲವಿದ್ದರೂ ಸಭೆಯಲ್ಲಿ 14 ದಿನ ನೀರು ಹರಿಸಿ 10 ದಿನ ಬಂದ್ ಮಾಡುವ ನಿರ್ಣಯ ತೆಗೆದುಕೊಂಡಿದ್ದು ಏಕ ಪಕ್ಷಿಯ ನಿರ್ಣಯ” ಎಂದು ಖಂಡಿಸಿದರು.

“10 ದಿನದ ನಂತರ ನೀರು ಹರಿಸಿದರೆ ಕೊನೆ ಭಾಗಕ್ಕೆ ನೀರು ತಲುಪುವುದಿಲ್ಲ, 3 ರಿಂದ 4 ದಿನ ಬೇಕಾಗುತ್ತದೆ, ಈಗಾಗಲೇ ಬೆಳೆದ ಬೆಳೆ ಹತ್ತಿ, ಮೆಣಸಿನಕಾಯಿ ಒಣಗುತ್ತಿವೆ, ಸಭೆಯಲ್ಲಿ ತೆಗೆದುಕೊಂಡ ಒಮ್ಮತದ ನಿರ್ಣಯದಿಂದ ರೈತರಿಗೆ ಬಾರೀ ತೊಂದರೆಯಾಗಲಿದೆ. ಕೂಡಲೇ ಈ ನಿರ್ಣಯ ಹಿಂಪಡೆಯಬೇಕು, ಇಲ್ಲದಿದ್ದರೆ ಹೋರಾಟ ನಡೆಸಲಾಗುತ್ತದೆ” ಎಂದು ಆಕ್ರೋಶ ಹೊರಹಾಕಿದರು.

Advertisements

“ರೈತರನ್ನು ಹೊರಗಿಟ್ಟು ಏಕ ಪಕ್ಷಿಯವಾಗಿ ನಿರ್ಧಾರ ಕೈಗೊಂಡ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಸಂಪುಟದಿಂದ ಕೈಬಿಡಬೇಕು, ರೈತರ ವಿರುದ್ಧ ನಿರ್ಣಯ ಖಂಡಿಸಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ನರಸಿಂಹ ನಾಯಕ, ಕಾರ್ಯದರ್ಶಿ ಸಾಜೀದ್ ಹುಸೇನ್, ತಾಲೂಕ ಅಧ್ಯಕ್ಷ ಶಿವಪ್ಪ, ಈರಣ್ಣ, ಮಸ್ತಾನ್, ಹಬುಮೇಶ, ಸಂಗಮೇಶ ನಾಯಕ, ಈರಣ್ಣ ಸರ್ಜಾಪೂರ ರಂಗನಾಥ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪತಿ ಅಂತ್ಯಕ್ರಿಯಲ್ಲಿ ಪತ್ನಿ ಸಾವು; ಸಾವಿನಲ್ಲೂ ಒಂದಾದ ದಂಪತಿ

ಪತಿ ಅಂತ್ಯಕ್ರಿಯೆ ವೇಳೆ ಪತ್ನಿಯೂ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ...

ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ : ಕೆ.ಎನ್ ರಾಜಣ್ಣ ಬೆಂಬಲಿಗರ ಭರ್ಜರಿ ಗೆಲುವು

ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನದ...

ಗದಗ | ಬೆಳೆ ಹಾನಿ ವೀಕ್ಷಣೆ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಹೆಚ್. ಕೆ. ಪಾಟೀಲ 

ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ...

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

Download Eedina App Android / iOS

X