ಬೀದರ್‌ | ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಭ್ರಷ್ಟಾಚಾರ; ತನಿಖೆಗೆ ಆಗ್ರಹ

Date:

Advertisements
  • ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ
  • ಸಮಗ್ರ ತನಿಖೆಗೆ ಆಗ್ರಹಿಸಿ ಆರೋಗ್ಯ ಸಚಿವರಿಗೆ ಮನವಿ

ಬೀದರ್ ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದ್ದು, ತನಿಖೆ ನಡೆಸಿ ಹಾಗೂ ಮಾಹಿತಿ ಅಧಿನಿಯಮದಲ್ಲಿ ಎಂ.ಎಲ್.ಎಚ್.ಪಿ. ನಿಯಮಾನುಸಾರ ಮಾಹಿತಿ ಅಡಿಯಲ್ಲಿ ಕೇಳಿದ ವಿಷಯ ಮಾಹಿತಿ ನೀಡುತ್ತಿಲ್ಲ ಎಂದು ವಿಶ್ವಕ್ರಾಂತಿ ದಿವ್ಯಪೀಠ ಟ್ರಸ್ಟ್‌ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಆರೋಪಿಸಿದರು.

ಈ ಸಂಬಂಧ ಆರೋಗ್ಯ ಸಚಿವ ದಿನೇಶ ಗುಂಡೂರಾವಾ ಅವರು ಬೀದರ್‌ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

“ಬೀದರ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೇಂದ್ರದ ನಿರ್ವಹಣೆ, ಸಾಮಗ್ರಿ ಖರೀದಿ ಮತ್ತು ನೇಮಕಾತಿಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ. ಸಾಮಗ್ರಿ ಖರೀದಿ ವಿಷಯ ನಿಯಮಾನುಸಾರ ಪ್ರಕ್ರಿಯೆ ನಡೆಯದೇ ಕೆಲವೇ ಏಜೆನ್ಸಿಗಳ ಮುಖಾಂತರ ಖರೀದಿ ನಡೆಯುತ್ತಿದೆ. ಎಂ.ಎಲ್.ಎಚ್.ಪಿ./ ಕಮ್ಯುನಿಟಿ ಹೆಲ್ತ್ ಆಫೀಸರ್ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಕುರಿತಂತೆ ಆಯ್ಕೆ ಪ್ರಕ್ರಿಯೆ ಕುರಿತು 2023ರ ಫೆಬ್ರವರಿಯಲ್ಲಿ ಮಾಹಿತಿ ಹಕ್ಕು ಅಡಿಯಲ್ಲಿ ಕೇಳಿದರೂ ಇಲ್ಲಿಯವರೆಗೆ ಯಾವುದೇ ಮಾಹಿತಿ ನೀಡಲು ಮುಂದಾಗಲಿಲ್ಲ” ಎಂದರು.

Advertisements

ಈ ಸುದ್ದಿ ಓದಿದ್ದೀರಾ ? ಬೀದರ್‌ | ಕ.ಕ.ಭಾಗದ ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

“ಈ ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಗೋಲ್‌ಮಾಲ್ ನಡೆದಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ತಕ್ಷಣವೇ ಈ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು” ಒತ್ತಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X