ಇಸ್ರೋಗೆ ಅಭಿನಂದನೆ ಸಲ್ಲಿಸಿದರೂ ನಟ ಪ್ರಕಾಶ್ ರಾಜ್‌ರನ್ನು ಕಾಡಿದ ಟ್ರೋಲಿಗರು

Date:

Advertisements
  • ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು, ಇದು ದಾರಿಯಾಗಲಿ’ ಎಂದು ಅಭಿನಂದಿಸಿ ನಟ ಟ್ವೀಟ್
  • ಸಿನಿಮಾವೊಂದರಲ್ಲಿ ಪ್ರಕಾಶ್ ರೈ ಅವರ ಕೆನ್ನೆಗೆ ಹೊಡೆಯುವ ವಿಡಿಯೋ ತುಣುಕು ಹಂಚಿ ಟ್ರೋಲ್

ಚಂದ್ರಯಾನ-3 ಕುರಿತು ಇತ್ತೀಚೆಗೆ ಟ್ವೀಟ್ ಮಾಡಿ ಸುದ್ದಿಗೊಳಗಾಗಿದ್ದ ನಟ ಪ್ರಕಾಶ್ ರಾಜ್, ಇಸ್ರೋಗೆ ಅಭಿನಂದನೆ ಸಲ್ಲಿಸಿದ್ದಾರೆ. ಆದರೂ ಕೂಡ ಹಲವು ನೆಟ್ಟಿಗರು ಅವರನ್ನು ಟ್ರೋಲ್‌ ಮಾಡುತ್ತಿದ್ದಾರೆ.

ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ, ಪ್ರಕಾಶ್ ರಾಜ್ ಕೂಡಾ ಇಸ್ರೋಗೆ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದರು.

ಟ್ವೀಟ್‌ನಲ್ಲಿ, ‘ಭಾರತದ ಮನುಕುಲದ ಹೆಮ್ಮೆಯ ಕ್ಷಣಗಳಿವು ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ ಧನ್ಯವಾದಗಳು, ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು, ಇದು ದಾರಿಯಾಗಲಿ’ ಎಂದಿದ್ದರು.

Advertisements

ಇತ್ತೀಚೆಗೆ ನಟ ಪ್ರಕಾಶ್ ರಾಜ್ ಮಾಡಿದ್ದ ಟ್ವೀಟ್ ಹಲವರಲ್ಲಿ ಅಸಮಾಧಾನ ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇದನ್ನೇ ಗುರಿಯನ್ನಾಗಿಸಿರುವ ಟ್ರೋಲಿಗರು, ತೆಲುಗು ಚಿತ್ರ ‘ರಂಗ ಮಾರ್ತಾಂಡ’ದಲ್ಲಿ ಹಾಸ್ಯ ನಟ ಬ್ರಹ್ಮಾನಂದಂ ಅವರು ಪ್ರಕಾಶ್ ರೈ ಅವರ ಕೆನ್ನೆಗೆ ಹೊಡೆಯುವ ವಿಡಿಯೋ ತುಣುಕನ್ನು ಟ್ವಿಟರ್ ನಲ್ಲಿ ಹಂಚಿಕೊಂಡು ರೈಗೆ ಕಿಚಾಯಿಸಿದ್ದಾರೆ.

ಇದೇ ರೀತಿಯಲ್ಲಿ ಹಲವು ಮಂದಿ ಪ್ರಕಾಶ್ ರಾಜ್ ಅವರನ್ನು ಕಾಲೆಳೆದಿದ್ದು, ಪ್ರಕಾಶ್ ಅವರ ಫೋಟೋ ಬಳಸಿಕೊಂಡು ‘ವಿಕ್ರಮ್ ನಿಂದ ಬಂದ ಮೊದಲ ಫೋಟೋ’ ಎಂದು ಚಂದ್ರನ ಅಂಗಳ ಗುಂಡಿಯಲ್ಲಿರುವಂತೆ ಎಡಿಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.

ಚಂದ್ರಯಾನ-3 ಕುರಿತು ಅವರು ಇತ್ತೀಚಿಗೆ ಮಾಡಿದ್ದ ಚಾಯ್ ವಾಲಾ ಟ್ವೀಟ್ ಗೆ ತೀವ್ರ ಟೀಕೆ ವ್ಯಕ್ತವಾಗಿತ್ತು. ವ್ಯಕ್ತಿಯೊಬ್ಬ ಚಹಾ ಮಗುಚುವ ವ್ಯಂಗ್ಯ ಚಿತ್ರ ಪೋಸ್ಟ್ ಮಾಡಿದ್ದ ಪ್ರಕಾಶ್ ರಾಜ್, ತಾಜಾ ಸುದ್ದಿ, ಚಂದ್ರಯಾನದಿಂದ ಈಗಷ್ಟೇ ಬಂದ ಮೊದಲ ದೃಶ್ಯ ಎಂದು ಕ್ಯಾಪ್ಶನ್ ಬರೆದಿದ್ದರು.

ನಂತರ ಸ್ಪಷ್ಟನೆ ನೀಡಿದ್ದ ಅವರು ‘ದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುವುದು. ನಾನು ನಮ್ಮ ಕೇರಳದ ಚಾಯ್​ವಾಲಾರನ್ನು ಸಂಭ್ರಮಿಸುವ ಆರ್ಮ್​ಸ್ಟ್ರಾಂಗ್ ಕಾಲದ ಜೋಕ್ ಹೇಳಿದ್ದೆ. ಟ್ರೋಲಿಗರಿಗೆ ಕಂಡ ಚಾಯ್​ವಾಲಾ ಯಾರು? ಸ್ವಲ್ಪ ಪ್ರೌಢಿಮೆ ಬೆಳೆಸಿಕೊಳ್ಳಿ’ ಎಂದು ಟೀಕಿಸಿದವರಿಗೆ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X