ಚಂದ್ರಯಾನ–3ರ ವಿಜ್ಞಾನಿಗಳಿಗೆ 17 ತಿಂಗಳಿನಿಂದ ವೇತನ ಪಾವತಿಸಿಲ್ಲ: ಕೆ ಸಿ ವೇಣುಗೋಪಾಲ್ ಆರೋಪ

Date:

Advertisements

ಚಂದ್ರಯಾನ–3 ರಲ್ಲಿ ತೊಡಗಿಕೊಂಡಿರುವ ವಿಜ್ಞಾನಿಗಳಿಗೆ ಕಳೆದ 17 ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌ ಈ ಕುರಿತು ‍ಟ್ವಿಟರ್‌ನಲ್ಲಿ ಮಾಧ್ಯಮವೊಂದರ ವರದಿಯ ಚಿತ್ರವನ್ನು ಹಂಚಿಕೊಂಡು ಪೋಸ್ಟ್‌ ಮಾಡಿರುವ ಅವರು, “ರಾಂಚಿ ಮೂಲದ ಹಿಂದೂಸ್ತಾನ್ ಎಂಜಿನಿಯರಿಂಗ್ ಕಾರ್ಪೊರೇಷನ್ (ಎಚ್‌ಇಸಿ) ಚಂದ್ರಯಾನ–3 ರ ಉಡ್ಡಯನ ವಾಹನ ತಯಾರಿಸಿದ್ದು, ಇದರಲ್ಲಿ ಭಾಗಿಯಾದ ಎಂಜಿನಿಯರ್‌ಗಳಿಗೆ 17 ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ” ಎಂದು ಆರೋಪಿಸಿದ್ದಾರೆ.

“ಇಸ್ರೊ ಅಧ್ಯಕ್ಷ ಎಸ್ ಸೋಮನಾಥ್ ಮುಂದಾಳತ್ವದಲ್ಲಿ ಇತಿಹಾಸವನ್ನು ಸೃಷ್ಟಿಸಿದ್ದೇವೆ. ಸೋಮನಾಥ್ ಮತ್ತು ಅವರ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆದರೆ ವಂಚನೆ ತೋರಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಬೇಕು” ಎಂದು ವೇಣುಗೋಪಾಲ್ ಆಗ್ರಹಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಆರ್‌ಟಿಐ ಕಾಯ್ದೆ ಕೊಲ್ಲುತ್ತಿರುವ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಲ್ಯಾಂಡಿಂಗ್ ನಂತರ ನೀವು ಪರದೆಯ ಮೇಲೆ ತ್ವರಿತವಾಗಿ ಬಂದು ಕ್ರೆಡಿಟ್ ತೆಗೆದುಕೊಂಡಿದ್ದೀರಿ. ಆದರೆ ವಿಜ್ಞಾನಿಗಳು ಮತ್ತು ಇಸ್ರೋವನ್ನು ಬೆಂಬಲಿಸುವಲ್ಲಿ ನಿಮ್ಮ ಸರ್ಕಾರವು ಏಕೆ ವಿಫಲವಾಗಿದೆ ಎಂದು ಪ್ರಶ್ನಿಸಿದ್ದಾರೆ.

ಚಂದ್ರಯಾನ 3ರಲ್ಲಿ ಕೆಲಸ ಮಾಡಿದ ಹೆಚ್‌ಇಸಿ ಇಂಜಿನಿಯರ್‌ಗಳು ಕಳೆದ 17 ತಿಂಗಳಿನಿಂದ ಸಂಬಳವನ್ನು ಏಕೆ ಸ್ವೀಕರಿಸಲಿಲ್ಲ. ಚಂದ್ರಯಾನ–3ರ ಬಜೆಟ್‌ನ್ನು ಶೇ. 32ರಷ್ಟು ಕಡಿತಗೊಳಿಸಿದ್ದೇಕೆ ಎಂದು ಪ್ರಶ್ನಿಸಿರುವ ಅವರು, ಇವರೆಲ್ಲ ದೇಶಕ್ಕೆ ಕೀರ್ತಿ ತಂದವರು. ವಿಶ್ವದರ್ಜೆಯ ಬಾಹ್ಯಾಕಾಶ ಯೋಜನೆಯನ್ನು ಮಾಡಿದ್ದಾರೆ. ಆದರೆ ಅವರ ಪ್ರತಿಭೆ ಮತ್ತು ಶ್ರಮದ ಬಗ್ಗೆ ನಿಮಗೆ ಯಾವುದೇ ಗೌರವವಿಲ್ಲ” ಎಂದು ಪ್ರಧಾನಿ ಮೋದಿಯವರ ವಿರುದ್ಧ ಕಿಡಿಕಾರಿದ್ದಾರೆ.

ಇಸ್ರೋ ವಿಜ್ಞಾನಿಗಳು 17 ತಿಂಗಳಿನಿಂದ ತಮ್ಮ ಸಂಬಳವನ್ನು ಪಡೆದಿಲ್ಲ ಎಂದು ಮತ್ತೊಬ್ಬ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರೋಪಿಸಿದ್ದರು. ಇಸ್ರೋ ವಿಜ್ಞಾನಿಗಳ ವೇತನದ ಬಗ್ಗೆ ಪ್ರಧಾನಿ ಗಮನಿಸಬೇಕು ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X